![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 22, 2020, 3:37 PM IST
ನವದೆಹಲಿ: ಸಿಎಎ ವಿರೋಧಿ ಹೋರಾಟ ನಡೆಸುತ್ತಿರುವ ಶಹೀನ್ ಬಾಗ್ ಹೋರಾಟಗಾರರ ಜತೆ ಸಂಧಾನಕ್ಕೆ ಸುಪ್ರೀಂಕೋರ್ಟ್ ನೇಮಕ ಮಾಡಿರುವ ಸಾಧನಾ ರಾಮಚಂದ್ರನ್ ಮೂರನೇ ದಿನವೂ ಸ್ಥಳಕ್ಕೆ ಭೇಟಿ ನೀಡಿ ಮನವೊಲಿಸುವ ಕೆಲಸದಲ್ಲಿ ತೊಡಗಿದ್ದರು ಎಂದು ವರದಿ ತಿಳಿಸಿದೆ.
ಮಾಧ್ಯಮದವರನ್ನು ಹೊರತುಪಡಿಸಿ ಪ್ರತಿಭಟನಾಕಾರರ ಜತೆ ಮಾತನಾಡುವುದಾಗಿ ರಾಮಚಂದ್ರನ್ ತಿಳಿಸಿದ್ದು, ಅಸಹ್ಯ ಹುಟ್ಟಿಸುವ ಕಮೆಂಟ್ ಮಾಡುತ್ತಿರುವ ಜನರನ್ನು ಶಿಕ್ಷಿಸಬೇಕು ಎಂದು ಮಹಿಳಾ ಪ್ರತಿಭಟನಾಕಾರರೊಬ್ಬರು ತಿಳಿಸಿದ್ದು, ಇಂತಹ ಕಮೆಂಟ್ ಮುಂದೆ ಬಾರದಂತೆ ತಡೆಯಬೇಕು ಎಂದು ಮನವಿ ಮಾಡಿಕೊಂಡಿರುವುದಾಗಿ ವರದಿ ವಿವರಿಸಿದೆ.
ಪ್ರತಿಭಟನಾಕಾರರ ರಕ್ಷಣೆ ಮತ್ತು ಭದ್ರತೆ ಬಗ್ಗೆ ಲಿಖಿತ ಭರವಸೆ ಬೇಕು ಎಂದು ಪ್ರತಿಭಟನಾಕಾರರು ಸಂಧಾನಕಾರರಾದ ರಾಮಚಂದ್ರನ್ ಅವರ ಬಳಿ ಹೇಳಿರುವುದಾಗಿ ವರದಿ ತಿಳಿಸಿದೆ. ದೇಶದ್ರೋಹಿಗಳನ್ನು ಗುಂಡಿಟ್ಟು ಸಾಯಿಸಿ ಎಂದು ಹೇಳಿದ ವ್ಯಕ್ತಿಯನ್ನು ಶಿಕ್ಷಿಸಬೇಕು. ಯಾರು ಅಸಹ್ಯ ಹುಟ್ಟಿಸುವ ಪ್ರತಿಕ್ರಿಯೆ ನೀಡಿದ್ದಾರೋ ಅವರಿಗೂ ಶಿಕ್ಷೆಯಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಸುಪ್ರೀಂಕೋರ್ಟ್ ಇದೀಗ ಹೊಣೆಗಾರಿಕೆ ತೆಗೆದುಕೊಂಡಿದ್ದು, ಏನಾದರು ಪರಿಹಾರ ಸಿಗಬಹುದು. ಎಎಂಯು ಮತ್ತು ಜೆಎನ್ ಯು ನಲ್ಲಿ ಪೊಲೀಸ್ ಕ್ರೌರ್ಯವನ್ನು ನೋಡಿದ್ದೇವೆ. ಹೀಗಾಗಿ ನಮಗೆ ಲಿಖಿತ ಭರವಸೆ ಬೇಕು. ನಮಗೆ ಪೊಲೀಸ್ ರಕ್ಷಣೆಯೂ ಕೊಡಬೇಕು ಎಂದು ಪ್ರತಿಭಟನಾಕಾರರೊಬ್ಬರು ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.