ಹೈವೇ ಮದ್ಯದಂಗಡಿ ನಿಷೇಧ ತೀರ್ಪು ಮಾರ್ಪಾಡು: 220 ಮಿ.ಗೆ ಸೀಮಿತ
Team Udayavani, Mar 31, 2017, 5:54 PM IST
ಹೊಸದಿಲ್ಲಿ : 20,000 ಜನಸಂಖ್ಯೆ ಇರುವ ಪ್ರದೇಶದಲ್ಲಿ, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಯ 500 ಮೀಟರ್ ವ್ಯಾಪ್ತಿಯಲ್ಲಿ ಮದ್ಯದಂಗಡಿಗಳನ್ನು ನಿಷೇಧಿಸುವ ತನ್ನ ಈ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ತಿದ್ದುಪಡಿ ಮಾಡಿದ್ದು 500 ಮೀಟರ್ ವ್ಯಾಪ್ತಿಯ ನಿಷೇಧ ಪ್ರದೇಶವನ್ನು 220 ಮೀಟರ್ಗೆ ಇಳಿಸಿದೆ.
500 ಮೀಟರ್ ವ್ಯಾಪ್ತಿ ಪ್ರದೇಶದ ಹೈವೇಯಲ್ಲಿ ಮದ್ಯದಂಗಡಿಗಳು ಇರಕೂಡದೆಂದು 2016ರ ಡಿಸೆಂಬರ್ 15ರಂದು ಹೊರಡಿಸಲಾಗಿದ್ದ ಆದೇಶವು, ಇಂದಿನ ಆದೇಶದಲ್ಲಿ ನಮೂದಿಸಲಾಗಿರುವ ಪ್ರದೇಶಗಳನ್ನು ಹೊರತುಪಡಿಸಿ ಬೇರೆಡೆಗಳಿಗೆ ಸಂಬಂಧಿಸಿದಂತೆ ಜಾರಿಯಲ್ಲಿರುತ್ತದೆ ಎಂದು ಸುಪ್ರೀಂ ಕೋರ್ಟಿನ ವರಿಷ್ಠ ನ್ಯಾಯಮೂರ್ತಿ ಜೆ ಎಸ್ ಖೇಹರ್ ನೇತೃತ್ವದ ಪೀಠವು ಸ್ಪಷ್ಟಪಡಿಸಿದೆ.
ಕುಡಿದು ವಾಹನ ಚಾಲನೆ ಮಾಡುವ ಕಾರಣಕ್ಕೆ ಸಂಭವಿಸುವ ಅಪಘಾತಗಳು ಹೆಚ್ಚುತ್ತಿರುವುದನ್ನು ಗಮನಿಸಿ ಈ ತೀರ್ಪು ನೀಡಲಾಗಿದೆ ಎಂದು ಜಸ್ಟಿಸ್ ಡಿ ವೈ ಚಂದ್ರಚೂಡ್ ಮತ್ತು ಜಸ್ಟಿಸ್ ಎಲ್ ಎನ್ ರಾವ್ ಅವರನ್ನೂ ಒಳಗೊಂಡ ಪೀಠವು ಹೇಳಿದೆ.
ಡಿಸೆಂಬರ್ 15ಕ್ಕೆ ಮುನ್ನ ಮದ್ಯಮಾರಾಟ ಅಂಗಡಿಗಳಿಗೆ ನೀಡಲಾಗಿದ್ದ ಲೈಸನ್ಸ್ ಈ ವರ್ಷ ಸೆಪ್ಟಂಬರ್ 30ರ ತನಕ ಜಾರಿಯಲ್ಲಿರುತ್ತದೆ ಎಂದು ಆದೇಶವು ಹೇಳಿದೆ.
ಇತರ ಮದ್ಯದಂಗಡಿಗಳು ಡಿ.15ರ ತೀರ್ಪಿನ ಪ್ರಕಾರ ನಾಳೆ ಎಪ್ರಿಲ್ 1ರಿಂದ ಮುಚ್ಚಲ್ಪಡುತ್ತವೆ.
ಹೆದ್ದಾರಿಯಲ್ಲಿ ಮದ್ಯದಂಗಡಿಗಳು 220 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಇರಕೂಡದೆಂಬ ನಿಯಮವು ಬೆಟ್ಟ ಪ್ರದೇಶದ ರಾಜ್ಯಗಳಾಗಿರುವ ಸಿಕ್ಕಿಂ, ಮೇಘಾಲಯ ಮತ್ತು ಹಿಮಾಚಲ ಪ್ರದೇಶಕ್ಕೂ ಅನ್ವಯವಾಗಲಿದೆ.
ಹೆದ್ದಾರಿಗಳಲ್ಲಿ 500 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಮದ್ಯದಂಗಡಿ ಇರಕೂಡದೆಂಬ ಆದೇಶವನ್ನು ಪುನರ್ ಪರಿಶೀಲಿಸಬೇಕೆಂದ ಮನವಿಗಳು ಅಪಾರ ಸಂಖ್ಯೆಯಲ್ಲಿ ಬಂದುದನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಮಾರ್ಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.