![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Mar 14, 2018, 3:48 PM IST
ಹೊಸದಿಲ್ಲಿ : ಅಯೋಧ್ಯೆ ರಾಮಜನ್ಮಭೂಮಿ ವಿವಾದದ ಕೇಸಿಗೆ ಸಂಬಂಧಿಸಿದಂತೆ ಸಲ್ಲಿಸಲ್ಪಟ್ಟ ಸುಮಾರು 32 ಮಧ್ಯಂತರ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಪ್ರಖ್ಯಾತರಾಗಿರುವ ಶ್ಯಾಮ್ ಬೆನಗಲ್, ಅಪರ್ಣಾ ಸೇನ್ ಮತ್ತು ತೀಸ್ತಾ ಸೆಟಲ್ವಾಡ್ ಸಲ್ಲಿಸಿರುವ ಮಧ್ಯಂತರ ಅರ್ಜಿಗಳೂ ವಜಾಗೊಂಡವುಗಳಲ್ಲಿ ಸೇರಿವೆ.
ಬಾಬರಿ ಮಸೀದಿ – ರಾಮ ಮಂದಿರಕ್ಕೆ ಸಂಬಂಧಿಸಿ ಮೂಲ ಕಕ್ಷಿದಾರರ ಭೂ ಮಾಲಕತ್ವಕ್ಕೆ ಸಂಬಂಧಿಸಿ ಅರ್ಜಿಗಳನ್ನು ಮಾತ್ರವೇ ತಾನು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದ್ದು ಸಂಬಂಧವಿಲ್ಲದ ವ್ಯಕ್ತಿಗಳ ಹಸ್ತಕ್ಷೇಪವನ್ನು ತಾನು ತಿರಸ್ಕರಿಸುತ್ತಿರುವುದಾಗಿ ಹೇಳಿದೆ.
ವಜಾಗೊಂಡಿರುವ ಮಧ್ಯಂತರ ಅರ್ಜಿಗಳಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರ ಅರ್ಜಿಯೂ ಸೇರಿದೆ. ಆದರೆ ಅಯೋಧ್ಯೆಯಲ್ಲಿನ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸುವ ತನ್ನ ಮೂಲಭೂತ ಹಕ್ಕಿನ ಅನುಷ್ಠಾನವನ್ನು ಕೋರಿ ಅವರ ಸಲ್ಲಿಸಿರುವ ಅರ್ಜಿಗೆ ಮತ್ತೆ ಜೀವ ನೀಡುವಂತೆ ಸುಪ್ರೀಂ ಕೋರ್ಟ್ ಆದೆಶಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.