![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 19, 2021, 11:02 AM IST
ಪಾಟ್ನಾ: ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಗ್ರಾಮಸ್ಥರು ಶಾಲೆಯ ಮುಖ್ಯೋಪಾಧ್ಯಾಯರನ್ನು ಥಳಿಸಿದ್ದಾರೆ. ಪೊಲೀಸರು ಆ ಹೆಡ್ ಮಾಸ್ಟರ್ ರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.
ಜಿಲ್ಲೆಯ ಸೆಮಾಪುರ ಪ್ರದೇಶದ ಪಿಪ್ರಿ ಬಹಿಯಾರ್ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಮುಖ್ಯೋಪಾಧ್ಯಾಯರು 4 ನೇ ತರಗತಿಯ 12 ವರ್ಷದ ವಿದ್ಯಾರ್ಥಿನಿಗೆ ಕಿರುಕುಳ ನೀಡಲು ಯತ್ನಿಸಿದ್ದಾರೆ, ಆಕೆಯ ಕೆನ್ನೆಗೆ ಕಚ್ಚಿದರು. ಹುಡುಗಿ ಕಿರುಚುವುದನ್ನು ಕೇಳಿದ ಕೆಲವು ಜನರು ತರಗತಿಗೆ ಓಡಿಬಂದಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.
ಸ್ಥಳೀಯರು ಆರೋಪಿ ಮುಖ್ಯೋಪಾಧ್ಯಾಯರನ್ನು ಹಿಡಿದು ಶಾಲೆಯ ಕೊಠಡಿಯಲ್ಲಿ ಬಂಧಿಸಿದ್ದರು. ಏತನ್ಮಧ್ಯೆ, ಹುಡುಗಿಯ ಸಂಬಂಧಿಕರು ಮತ್ತು ಇತರ ಸ್ಥಳೀಯರು ವಿಷಯ ತಿಳಿದು ಶಾಲೆಯ ಹೊರಗೆ ಜಮಾಯಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ನಡೆಸಿ, ಮುಖ್ಯೋಪಾಧ್ಯಾಯರನ್ನು ಹೊರಕ್ಕೆ ಕರೆದೊಯ್ಯುತ್ತಿದ್ದಾಗ, ಕೋಪಗೊಂಡ ಗ್ರಾಮಸ್ಥರು ಆರೋಪಿಯ ಮೇಲೆ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ:ರಾಜಕಾರಣಕ್ಕೂ ದರ ಏರಿಕೆಗೂ ಸಂಬಂಧ ಇಲ್ಲ: ಸಚಿವ ಈಶ್ವರಪ್ಪ
ಪೊಲೀಸರ ಎದುರೇ ಗುಂಪೊಂದು ಆರೋಪಿಯ ಅಧ್ಯಾಪಕರ ಮೇಲೆ ಲಾಠಿಯಿಂದ ಹೊಡೆದು ಬಲವಾಗಿ ಥಳಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಹೊಡೆಯುವ ವಿಡಿಯೋಗಳು ವೈರಲ್ ಆಗಿದೆ.
ಅಪ್ರಾಪ್ತ ವಯಸ್ಕ ವಿದ್ಯಾರ್ಥನಿಗೆ ಕಿರುಕುಳ ನೀಡಲು ಯತ್ನಿಸಿದಾಗ ತಾನು ಮಾನಸಿಕ ಅಸಮರ್ಥನಾಗಿದ್ದೆ ಎಂದು ಆರೋಪಿ ಹೇಳಿಕೊಂಡಿದ್ದಾನೆ.
ಶಾಲೆಯಲ್ಲಿ ಬಾಲಕಿಗೆ ಕಿರುಕುಳ ನೀಡುವುದು ಇದೇ ಮೊದಲಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಇತ್ತೀಚಿನ ಘಟನೆ ಬೆಳಕಿಗೆ ಬಂದಾಗ, ಹಳ್ಳಿಯ ಜನರು ಆಕ್ರೋಶಗೊಂಡು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.