Bastar: ನಕ್ಸಲ್ ಪೀಡಿತ ಬಸ್ತಾರ್ನಲ್ಲಿ 20 ವರ್ಷ ಬಳಿಕ ಶಾಲೆ ಆರಂಭ
Team Udayavani, Sep 11, 2024, 5:16 AM IST
ರಾಯ್ಪುರ: 2 ದಶಕಗಳ ಹಿಂದೆ ಬಸ್ತಾರ್ನಲ್ಲಿ ಮಾವೋವಾದಿಗಳ ಗುಂಡಿನ ಹಾಗೂ ಬಾಂಬ್ಗಳ ದಾಳಿಯಿಂದ ಮುಚ್ಚಲ್ಪಟ್ಟಿದ್ದ 41 ಶಾಲೆಗಳನ್ನು ಪುನರಾರಂಭ ಮಾಡಲಾಗಿದೆ. ಬಸ್ತಾರ್ ವಲಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಪ್ರಾಥಮಿಕ ಶಾಲೆಗಳನ್ನು ಮತ್ತೆ ತೆರೆಯಲಾಗಿದೆ.
ದಾಳಿಯಿಂದ ಅತಿ ಹೆಚ್ಚು ಹಾನಿಗೊಳ ಗಾಗಿದ್ದ ಅಲ್ಲಿನ ಬಿಜಾಪುರ ಜಿಲ್ಲೆಯಲ್ಲಿ 34 ಶಾಲೆಗಳನ್ನು ಪುನಃಸ್ಥಾಪಿಸಲಾಗಿದೆ. ಸುಕ್ಮಾದ ಕೊಂಟಾ ಪ್ರದೇಶದಲ್ಲಿ 5 ಮತ್ತು ನಾರಾಯಣಪುರದಲ್ಲಿ 2 ಶಾಲೆಗಳನ್ನು ಮತ್ತೆ ತೆರೆಯಲಾಗಿದೆ.
2005-2006ರಲ್ಲಿ ಮಾವೋವಾದಿ ಹಿಂಸಾಚಾರದಿಂದ ಈ ಶಾಲೆಗಳನ್ನು ಮುಚ್ಚಲಾಗಿತ್ತು. ಈಗ ಈ ಶಾಲೆಗಳಲ್ಲಿ 532 ವಿದ್ಯಾರ್ಥಿಗಳು ಈಗಾಗಲೇ ದಾಖಲಾಗಿದ್ದಾರೆ. ಅವರಲ್ಲಿ ಅರ್ಧದಷ್ಟು ಹೆಣ್ಣು ಮಕ್ಕಳೇ ಇದ್ದಾರೆ ಎಂದು ಬಸ್ತಾರ್ ವಿಭಾಗದ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇವುಗಳಲ್ಲಿ ಒಂದು ಶಾಲೆ ಬಿಜಾಪುರ ಜಿಲ್ಲೆಯ ಅರಣ್ಯ ಕುಗ್ರಾಮವಾದ ಮುದ್ವೆಂಡಿ ಎಂಬ ಗ್ರಾಮದಲ್ಲಿದೆ. ಅಲ್ಲಿ ಈ ವರ್ಷದ ಮೇ, ಜುಲೈನಲ್ಲಿ ಮಾವೋವಾದಿಗಳು ಐಇಡಿ ಸ್ಫೋಟಿಸಿದ್ದರಿಂದ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಸದ್ಯಕ್ಕೆ ಈ ಶಾಲೆಯನ್ನು ಬಿದಿರಿನ ಶೆಡ್ನಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದ್ದು, ಶೀಘ್ರದಲ್ಲೇ ನವೀಕರಿಸುವುದಾಗಿ ಶಿಕ್ಷಣ ಇಲಾಖೆ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.