Secularism ಯುರೋಪಿಯನ್ ಪರಿಕಲ್ಪನೆ, ಭಾರತದಲ್ಲಿ ಅಗತ್ಯವಿಲ್ಲ: ತಮಿಳುನಾಡು ರಾಜ್ಯಪಾಲ
ಚರ್ಚೆ ಹುಟ್ಟು ಹಾಕಿದ ಹೇಳಿಕೆ...
Team Udayavani, Sep 23, 2024, 8:29 PM IST
ಚೆನ್ನೈ: ಜಾತ್ಯತೀತತೆಯ ಹೆಸರಿನಲ್ಲಿ ಭಾರತದ ಜನತೆಗೆ ವಂಚನೆ ಎಸಗಲಾಗಿದೆ ಎಂದು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಪ್ರತಿಪಾದಿಸಿದ್ದು, ಜಾತ್ಯತೀತತೆ ಎನ್ನುವುದು ಯುರೋಪಿಯನ್ ಪರಿಕಲ್ಪನೆಯಾಗಿದ್ದು, ಭಾರತದಲ್ಲಿ ಅಗತ್ಯವಿಲ್ಲ ಎಂದು ಚರ್ಚೆ ಹುಟ್ಟು ಹಾಕಿದ್ದಾರೆ.
ಸೆಪ್ಟೆಂಬರ್ 22 ರಂದು ಕನ್ಯಾಕುಮಾರಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, “ಈ ದೇಶದ ಜನರ ವಿರುದ್ಧ ಅನೇಕ ವಂಚನೆಗಳು ನಡೆದಿವೆ ಮತ್ತು ಅವುಗಳಲ್ಲಿ ಒಂದು ಜಾತ್ಯತೀತತೆಯ ತಪ್ಪು ವ್ಯಾಖ್ಯಾನ. ಸೆಕ್ಯುಲರಿಸಂ ಎಂದರೆ ಏನು? ಸೆಕ್ಯುಲರಿಸಂ ಎಂದರೆ ಯುರೋಪಿಯನ್ ಪರಿಕಲ್ಪನೆ, ಮತ್ತು ಅದು ಭಾರತೀಯ ಪರಿಕಲ್ಪನೆಯಲ್ಲ” ಎಂದಿದ್ದಾರೆ.
ಯುರೋಪ್ ನಲ್ಲಿ, ಚರ್ಚ್ ಮತ್ತು ರಾಜನ ನಡುವಿನ ಸಂಘರ್ಷದಿಂದಾಗಿ ಜಾತ್ಯತೀತತೆ ಹುಟ್ಟಿಕೊಂಡಿತು. ಸ್ವಾತಂತ್ರ್ಯದ ಸಮಯದಲ್ಲಿ ಸಂವಿಧಾನದ ಕರಡು ರಚನೆಯ ಸಮಯದಲ್ಲಿ, ಜಾತ್ಯತೀತತೆಯ ಬಗ್ಗೆ ಚರ್ಚಿಸಲು ಯಾರೋ ಪ್ರಸ್ತಾಪಿಸಿದರು ಎಂದರು.
1976 ರಲ್ಲಿ ಸಂವಿಧಾನದ ಪೀಠಿಕೆಯಲ್ಲಿ “ಜಾತ್ಯತೀತತೆ” ಪದವನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಪರಿಚಯಿಸಿದರು ಎಂದು ಆರ್.ಎನ್. ರವಿ ಟೀಕಿಸಿದರು.
ರಾಜ್ಯಪಾಲರ ಹೇಳಿಕೆಗಳ ಕುರಿತು ಟೀಕೆಗಳೂ ವ್ಯಕ್ತವಾಗಿದ್ದು, ಉನ್ನತ ಹುದ್ದೆ ಅಲಂಕರಿಸಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಖಂಡನೆಯೂ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajit Pawar-led NCP ಹೊರಹಾಕಲು ಬಿಜೆಪಿ-ಶಿಂಧೆ ಸೇನೆ ಯತ್ನ: ಸಂಜಯ್ ರಾವುತ್
Badlapur ಪೊಲೀಸ್ ರಿವಾಲ್ವರ್ ಕಸಿದು ಗುಂಡು ಹಾರಿಸಿದ ರೇ*ಪ್ ಆರೋಪಿ!!
Union Minister ಶಿವರಾಜ್ ಸಿಂಗ್ ಚೌಹಾಣ್ ಕಾರು ರಸ್ತೆ ಗುಂಡಿಯಲ್ಲಿ ಸಿಲುಕಿ ಪರದಾಟ!
Politics; ಲೋಕಸಭೆ ಚುನಾವಣೆ ಬಳಿಕ ಮೋದಿ ಮನಸ್ಥಿತಿ ಬದಲಾಗಿದೆ: ರಾಹುಲ್ ಗಾಂಧಿ
Delhi; ಕೇಜ್ರಿವಾಲ್ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thirupathi Laddu: ದೇಗುಲಗಳು ಸರಕಾರದ ಹಿಡಿತದಿಂದ ಮುಕ್ತವಾಗಲಿ: ಶ್ರೀಸುಬುಧೇಂದ್ರ ಸ್ವಾಮೀಜಿ
Shikaripur: ಭೀಕರ ರಸ್ತೆ ಅಪಘಾತ; ತೀರ್ಥಹಳ್ಳಿ ವ್ಯಕ್ತಿ ದುರ್ಮರಣ!
Ajit Pawar-led NCP ಹೊರಹಾಕಲು ಬಿಜೆಪಿ-ಶಿಂಧೆ ಸೇನೆ ಯತ್ನ: ಸಂಜಯ್ ರಾವುತ್
Kukke Subrahmanya; ಸರಕಾರದ ವೈಫಲ್ಯ ಬಗ್ಗೆ ಜನಜಾಗೃತಿ; ನಿಖಿಲ್ ಕುಮಾರಸ್ವಾಮಿ
Kaup; ಮೂಳೂರು: ಪಾದಯಾತ್ರೆ ಹೋಗುತ್ತಿದ್ದ ಭಕ್ತರಿಗೆ ಕಾರು ಢಿಕ್ಕಿ; ಮೂವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.