![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 12, 2019, 4:47 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: 370 ರದ್ದತಿ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಉಗ್ರರ ವಿರುದ್ಧದ ಕಾರ್ಯಾಚರಣೆಗಳನ್ನು ಇನ್ನಷ್ಟು ತೀವ್ರಗೊಳಿಸಿದ್ದು, ಅಕ್ಷರಶಃ ಅವುಗಳ ಬೆನ್ನೆಲುಬು ಮುರಿಯುತ್ತಿವೆ. ಇದು ಪಾಕಿಸ್ಥಾನ ಪ್ರಯೋಜಿತ ಉಗ್ರ ಗುಂಪುಗಳ ಜಂಘಾಬಲವನ್ನೇ ಉಡುಗಿಸಿದೆ. ಹಲವು ಉಗ್ರ ದಾಳಿಗಳನ್ನು ಭದ್ರತಾ ಪಡೆಗಳು ಆರಂಭದಲ್ಲೇ ವಿಫಲಗೊಳಿಸುವುದರೊಂದಿಗೆ ಒಳನುಸುಳಲು ಯತ್ನಿಸುತ್ತಿರುವ ಉಗ್ರರು ಕೆಲವೇ ಗಂಟೆಗಳಲ್ಲಿ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗುತ್ತಿರುವುದು ಉಗ್ರ ಸಂಘಟನೆಗಳಿಗೆ ತಲೆನೋವಾಗಿದೆ.
ಪ್ರಮುಖವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರಿಗೆ ಸ್ಥಳೀಯ ಬೆಂಬಲ ಇನ್ನಷ್ಟು ಕಡಿಮೆಯಾಗುತ್ತಿದ್ದು, ಅವುಗಳ ಸದಸ್ಯರಿಗೆ ಸ್ಥಳೀಯರಿಂದ ಹಿಂದಿನಷ್ಟು ಒಲವು ವ್ಯಕ್ತವಾಗುತ್ತಿಲ್ಲ ಎನ್ನಲಾಗಿದೆ. ಇದೇ ವೇಳೆ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳ ಕೈಮೇಲಾಗುತ್ತಿದ್ದು ಇದರಿಂದ ಪಾಕ್ನಿಂದ ಒಳನುಸುಳಿದ ಉಗ್ರರು ಮತ್ತೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಪರಿಸ್ಥಿತಿ ಪ್ರತಿಕೂಲವಾಗಿರುವ ಹಿನ್ನೆಲೆಯಲ್ಲಿ ಹಿಜ್ಬುಲ್ ಮುಜಾಹಿದೀನ್ನ ಜಿಲ್ಲಾ ಕಮಾಂಡರ್ ತಾರಿಖ್ ಖಾನ್ ಮತ್ತು ಇತರ ಭಯೋತ್ಪಾದಕ ಸಂಘಟನೆಗಳ ನಯಕರಾದ ಹೈದರ್ ಜಿಹಾದಿ ಮತ್ತು ಸುಮಾರು 16-17 ಮಂದಿ ಉಗ್ರರು ವಿಧ್ವಂಸಕ ಕೃತ್ಯಗಳನ್ನು ನಡೆಸಲು ತಮ್ಮ ನಡುವೆ ಪ್ರದೇಶಗಳನ್ನು ಹಂಚಿಕೊಳ್ಳುವ ಯತ್ನವನ್ನೂ ಮಾಡಿಲ್ಲ ಎಂದು ಗುಪ್ತಚರ ಮೂಲಗಳು ಹೇಳಿವೆ.
ಭಾರೀ ಪ್ರಮಾಣದ ಭದ್ರತಾ ಪಡೆಗಳಿರುವುದರಿಂದ ಹಲವು ಪ್ರದೇಶಗಳಲ್ಲಿ ಈಗ ಉಗ್ರರು ತಮ್ಮ ಕೃತ್ಯಗಳನ್ನೇ ನಡೆಸಲು ಹೆದರುತ್ತಿದ್ದಾರೆ. ಸ್ಥಳೀಯ ವ್ಯಕ್ತಿಗಳಿಂದ ಸರಂಜಾಮು ಸಾಗಾಟ, ಮಾಹಿತಿ ನೀಡಿಕೆ ಇತ್ಯಾದಿ ಬೆಂಬಲ ಸಿಗದಿರುವುದರಿಂದ ಯತ್ನಗಳು ನಿಷ್ಪ್ರಯೋಜಕವಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.