ಪತ್ನಿ, ಸೋದರಳಿಯನನ್ನು ಗುಂಡಿಕ್ಕಿ, ತಾನೂ ಆತ್ಮಹತ್ಯೆಗೆ ಶರಣಾದ ಹಿರಿಯ ಪೊಲೀಸ್ ಅಧಿಕಾರಿ


Team Udayavani, Jul 24, 2023, 12:12 PM IST

ಪತ್ನಿ, ಸೋದರಳಿಯನನ್ನು ಗುಂಡಿಕ್ಕಿ, ತಾನೂ ಆತ್ಮಹತ್ಯೆಗೆ ಶರಣಾದ ಹಿರಿಯ ಪೊಲೀಸ್ ಅಧಿಕಾರಿ

ಮಹಾರಾಷ್ಟ್ರ: ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಪತ್ನಿ ಮತ್ತು ಸೋದರಳಿಯನನ್ನು ತನ್ನ ರಿವಾಲ್ವರ್‌ನಿಂದ ಗುಂಡಿಕ್ಕಿ ಬಳಿಕ ತಾನೂ ಹಣೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಮೃತರನ್ನು ಎಸಿಪಿ ಭರತ್ ಗಾಯಕ್ವಾಡ್, ಅವರ ಪತ್ನಿ ಮೋನಿ ಗಾಯಕ್ವಾಡ್ (44) ಮತ್ತು ಸೋದರಳಿಯ ದೀಪಕ್ (35) ಎಂದು ಗುರುತಿಸಲಾಗಿದೆ.

ಬಾನೇರ್ ಪ್ರದೇಶದ ಎಸಿಪಿ ಭರತ್ ಗಾಯಕ್ವಾಡ್ ಅವರ ಬಂಗಲೆಯಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಚತುರ್ಶೃಂಗಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗಾಯಕ್ವಾಡ್ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದು, ಅವರು ಪತ್ನಿ ಮತ್ತು ಸೋದರಳಿಯನೊಂದಿಗೆ ಪುಣೆಯ ಬನೇರ್‌ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಸೋಮವಾರ ಬೆಳಗಿನ ಜಾವ 3.30ರ ಸುಮಾರಿಗೆ ಎಸಿಪಿ ಮೊದಲು ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗುಂಡಿನ ಸದ್ದು ಕೇಳಿ ಅವರ ಮಗ ಮತ್ತು ಸೋದರಳಿಯ ಓಡಿ ಬಂದು ಬಾಗಿಲು ತೆರೆದರು. ಅವರು ಬಾಗಿಲು ತೆರೆದ ಕೂಡಲೆ ಸೋದರಳಿಯನ ಮೇಲೆ ಗುಂಡು ಹಾರಿಸಿ ಬಳಿಕ ತಾನು ಗುಂಡು ಹಾರಿಸಿಕೊಂಡಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Gyanvapi survey: ಜ್ಞಾನವಾಸಿ ಮಸೀದಿ ಸರ್ವೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂ ಕೋರ್ಟ್

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.