Tragedy: ಅರ್ಜುನ ಪ್ರಶಸ್ತಿ ವಿಜೇತ, ಹಿರಿಯ ಪೊಲೀಸ್ ಅಧಿಕಾರಿಯ ಶವ ಕಾಲುವೆಯಲ್ಲಿ ಪತ್ತೆ
ಹೊಸ ವರ್ಷಾಚರಣೆಗೆಂದು ತೆರಳಿದ್ದ ಅಧಿಕಾರಿ ನಾಪತ್ತೆ
Team Udayavani, Jan 1, 2024, 3:33 PM IST
ಪಂಜಾಬ್: ಅರ್ಜುನ ಪ್ರಶಸ್ತಿ ಪುರಸ್ಕೃತ, ಪಂಜಾಬ್ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ದಲ್ಬೀರ್ ಸಿಂಗ್ ಡಿಯೋಲ್ ಅವರು ಸೋಮವಾರ ಜಲಂಧರ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ಹೊಸ ವರ್ಷದ ದಿನದಂದು ಪಂಜಾಬ್ನ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ ಹೊಸ ವರ್ಷಾಚರಣೆಗೆಂದು ತೆರಳಿದ್ದ ದಲ್ಬೀರ್ ಸಿಂಗ್ ಡಿಯೋಲ್ ಮನೆಗೆ ಹಿಂತಿರುಗದ ಹಿನ್ನೆಲೆಯಲ್ಲಿ ಕುಟುಂಬದವರು ನಾಪತ್ತೆ ದೂರು ದಾಖಲಿಸಿದ್ದಾರೆ.
ಆದರೆ ಇಂದು ಬೆಳಿಗ್ಗೆ ಜಲಂಧರ್ ಪಟ್ಟಣದ ಹೊರವಲಯದಲ್ಲಿರುವ ಬಸ್ತಿ ಬಾವಾ ಖೇಲ್ನ ಕಾಲುವೆಯ ಬಳಿ ಶವ ಪತ್ತೆಯಾಗಿದ್ದು ದೇಹದ ಭಾಗದಲ್ಲಿ ಗಾಯದ ಗುರುತುಗಳು ಪತ್ತೆಯಾಗಿದೆ.
ಶನಿವಾರ ಸಂಜೆ ಸ್ನೇಹಿತರ ಜೊತೆ ಹೊಸ ವರ್ಷಾಚರಣೆಗೆಂದು ತೆರಳಿದ್ದ ಡಿಎಸ್ಪಿ ಮನೆಗೆ ವಾಪಸ್ಸಾಗಲಿಲ್ಲ ಎಂದು ಡಿಎಸ್ಪಿ ಕುಟುಂಬದವರು ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ ಅದರಂತೆ ಇಂದು ಬೆಳಿಗ್ಗೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಆಸ್ಪತ್ರೆಗೆ ಸಾಗಿಸಲಾಗಿದ್ದು ವರದಿ ಬಂದ ಬಳಿಕ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏಷ್ಯನ್ ಗೇಮ್ಸ್ ನಲ್ಲಿ ಡಿಯೋಲ್ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದರು ಅಲ್ಲದೆ 2000 ಇಸವಿಯಲ್ಲಿ ಅವರಿಗೆ ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಹಲವು ಪದಕಗಳನ್ನು ಗೆದ್ದಿದ್ದ ದಲ್ಬೀರ್ ಸಿಂಗ್ ಡಿಯೋಲ್ ಅವರಿಗೆ ಅರ್ಜನ್ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಇದನ್ನೂ ಓದಿ: Earthquake:ಸೆಂಟ್ರಲ್ ಜಪಾನ್ ನಲ್ಲಿ ಪ್ರಬಲ ಭೂಕಂಪ,7.6 ತೀವ್ರತೆ ದಾಖಲು;ಸುನಾಮಿ ಎಚ್ಚರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.