![Ranji Trophy: ಸೆಮಿಫೈನಲ್ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ](https://www.udayavani.com/wp-content/uploads/2025/02/ranji-1-415x224.jpg)
![Ranji Trophy: ಸೆಮಿಫೈನಲ್ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ](https://www.udayavani.com/wp-content/uploads/2025/02/ranji-1-415x224.jpg)
Team Udayavani, Sep 11, 2024, 11:31 AM IST
ಪೂರ್ವ ಗೋದಾವರಿ :ಮಿನಿ ಟ್ರಕ್ ಪಲ್ಟಿಯಾಗಿ ಏಳು ಜನರು ಸಾವನ್ನಪ್ಪಿದ ಭೀಕರ ಅವಘಡ ಪೂರ್ವ ಆಂಧ್ರ ಪ್ರದೇಶದ ಗೋದಾವರಿ ಜಿಲ್ಲೆಯ ದೇವರಪಲ್ಲಿ ಮಂಡಲದ ಚಿನ್ನೈಗುಡೆಂನ ಚಿಲಕ ಪಾಕಲಾ ಪ್ರದೇಶದಲ್ಲಿ ಬುಧವಾರ(ಸೆ 11) ರಂದು ಸಂಭವಿಸಿದೆ.
“ಅವಘಡದಲ್ಲಿ ಏಳು ಜನ ಸಾವನ್ನಪ್ಪಿದ್ದು, ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೂರ್ವ ಗೋದಾವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನರಸಿಂಹ ಕಿಶೋರ್ ಸುದ್ದಿಗಾರರಿಗೆ ತಿಳಿಸಿದರು.
ಗೋಡಂಬಿ ತುಂಬಿದ್ದ ಮಿನಿ ಟ್ರಕ್ ಟಿ ನರಸಾಪುರಂ ಮಂಡಲದ ಬೊರ್ರಂಪಾಲೆಂನಿಂದ ನಿಡದವೋಲು ಮಂಡಲದ ತಾಡಿಮಲ್ಲ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಜನರು ಗೋಡಂಬಿಯ ಚೀಲಗಳ ಅಡಿಯಲ್ಲಿ ಸಿಲುಕಿದ ನಂತರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳೀಯರು ಮತ್ತು ಪೊಲೀಸರು ಗೋಣಿಚೀಲದ ಅಡಿಯಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಕೊವ್ವೂರು ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
Kumbh stampede: ಸರ್ಕಾರದ ವಿರುದ್ಧ “ಅಸ್ಥಿ ಕುಡಿಕೆ’ ಪ್ರತಿಭಟನೆ
Augusta scam: 6 ವರ್ಷಗಳ ಕಸ್ಟಡಿ ಬಳಿಕ ಅಗಸ್ಟಾ ಹಗರಣ ದಲ್ಲಾಳಿ ಮೈಕೆಲ್ಗೆ ಜಾಮೀನು
TTD: ತಿರುಪತಿ ದೇಗುಲದ ಉಚಿತ ಅನ್ನಪ್ರಸಾದ ಟ್ರಸ್ಟ್ಗೆ ಮುಂಬೈ ವ್ಯಕ್ತಿ 11ಕೋಟಿ ರೂ.ದೇಣಿಗೆ!
ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ
Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!
You seem to have an Ad Blocker on.
To continue reading, please turn it off or whitelist Udayavani.