ಹತ್ಯೆ ಕೇಸ್; ಗಲ್ಲುಶಿಕ್ಷೆಗೆ ಗುರಿಯಾದ ಶಬನಂ ಉತ್ತರಪ್ರದೇಶ ಗವರ್ನರ್ ಗೆ ಕ್ಷಮಾದಾನ ಅರ್ಜಿ

ಸ್ವಾತಂತ್ರ್ಯೋತ್ತರ ಕಾಲಘಟ್ಟದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರಿಗೆ ಮರಣದಂಡನೆ ಜಾರಿಯಾದಂತಾಗುತ್ತದೆ.

Team Udayavani, Feb 19, 2021, 12:52 PM IST

ಹತ್ಯೆ ಕೇಸ್; ಗಲ್ಲುಶಿಕ್ಷೆಗೆ ಗುರಿಯಾದ ಶಬನಂ ಉತ್ತರಪ್ರದೇಶ ಗವರ್ನರ್ ಗೆ ಕ್ಷಮಾದಾನ ಅರ್ಜಿ

ನವದೆಹಲಿ: ಉತ್ತರಪ್ರದೇಶದ ಅಮ್ರೋಹಾ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಶಬನಂ ಕ್ಷಮಾದಾನ ಕೋರಿ ಉತ್ತರಪ್ರದೇಶ ಗವರ್ನರ್ ಆನಂದಿಬೆನ್ ಪಟೇಲ್ ಅವರಿಗೆ ಮನವಿ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:402 ಕೋ.ರೂ. ಅಕ್ರಮ ಪತ್ತೆ: ಐಟಿ ದಾಳಿ ವೇಳೆ ಭಾರೀ ಅಕ್ರಮ ಬಯಲು

ಶಬನಂ ಗಲ್ಲಿಗೇರಿಸಲು ಮಥುರಾ ಜೈಲಿನಲ್ಲಿ ಸಿದ್ಧತೆ ನಡೆಯುತ್ತಿರುವ ನಡುವೆಯೇ ಕ್ಷಮಾದಾನ ಕೋರಿ ಗವರ್ನರ್ ಗೆ ಮನವಿ ಸಲ್ಲಿಸಿರುವುದಾಗಿ ವರದಿ ವಿವರಿಸಿದೆ.

ಏನಿದು ಘಟನೆ:

2008ರ ಏಪ್ರಿಲ್ 14ರಂದು ಶಬನಂ ತನ್ನ ಪ್ರಿಯತಮನ ಜೊತೆ ಸೇರಿ ಉತ್ತರಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿದ್ದ ತನ್ನದೇ ಕುಟುಂಬದ ಏಳು ಜನರನ್ನು ಹತ್ಯೆಗೈದಿದ್ದಳು. ಏಳು ತಿಂಗಳ ಮಗು ಸೇರಿದಂತೆ ಏಳು ಮಂದಿಯನ್ನು ನಿರ್ದಯವಾಗಿ ಕೊಚ್ಚಿ ಹತ್ಯೆಗೈದಿದ್ದರು. ಈ ಪ್ರಕರಣದಲ್ಲಿ ಆಕೆಯ ಅಪರಾಧ ಸಾಬೀತಾಗಿದ್ದು, ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿತ್ತು.

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಈ ಕೊಲೆ ಪ್ರಕರಣ ನಡೆದು ಐದು ದಿನಗಳ ನಂತರ ಶಬನಂ ಹಾಗೂ ಆಕೆಯ ಪ್ರಿಯಕರ ಸಲೀಂನನ್ನು ಪೊಲೀಸರು ಬಂಧಿಸಿದ್ದರು. ಈ ಸಂದರ್ಭದಲ್ಲಿ ಶಬನಂ ಗರ್ಭಿಣಿಯಾಗಿದ್ದಳು. 2008ರ ಡಿಸೆಂಬರ್ ನಲ್ಲಿ ಶಬನಂ ಗಂಡು ಮಗುವಿಗೆ ಜನ್ಮನೀಡಿದ್ದಳು.

2010ರ ಜುಲೈ 14ರಂದು ಜಿಲ್ಲಾ ಸೆಷನ್ಸ್ ಕೋರ್ಟ್ ಶಬನಂ ಹಾಗೂ ಸಲೀಂಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ನಂತರ ಇಬ್ಬರು ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಸೆಷನ್ಸ್ ಕೋರ್ಟ್ ತೀರ್ಪನ್ನು ಎತ್ತಿ ಹಿಡಿದಿತ್ತು. ನಂತರ ಇಬ್ಬರು ಹಂತಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸುಪ್ರೀಂಕೋರ್ಟ್ ಕೂಡಾ 2015ರಲ್ಲಿ ಮರಣದಂಡನೆ ಶಿಕ್ಷೆ ಎತ್ತಿಹಿಡಿದಿತ್ತು.

ಎಲ್ಲಾ ಕಾನೂನು ಅವಕಾಶ ಮುಗಿದ ಬಳಿಕ ಶಬನಂ ಕ್ಷಮಾದಾನ ಅರ್ಜಿಯನ್ನು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿರಸ್ಕರಿಸಿದ್ದು, ಈಗ ಗಲ್ಲುಶಿಕ್ಷೆ ವಿಧಿಸುವ ಪ್ರಕ್ರಿಯೆ ಆರಂಭಗೊಂಡಿದೆ. ನಿರ್ಭಯಾ ಹಂತಕರಿಗೆ ಗಲ್ಲುಶಿಕ್ಷೆ ಜಾರಿಗೊಳಿಸಿದ್ದ ವಧಾಕಾರ ಪವನ್ ಜಲ್ಲಾದ್, ಮಥುರಾ ಕಾರಾಗೃಹಕ್ಕೆ ಬಂದು ವಧಾಸ್ಥಾನವನ್ನು ಪರಿಶೀಲಿಸಿ ಹೋಗಿರುವುದಾಗಿ ವರದಿ ತಿಳಿಸಿದೆ.

ಶಬನಂ ಗಲ್ಲುಶಿಕ್ಷೆಗೆ ಜಾರಿಯಾದರೆ ಭಾರತದಲ್ಲಿ ಸ್ವಾತಂತ್ರ್ಯೋತ್ತರ ಕಾಲಘಟ್ಟದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರಿಗೆ ಮರಣದಂಡನೆ ಜಾರಿಯಾದಂತಾಗುತ್ತದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.