ತಾನೇ ಉರುಳಿಸಿದ ದಾಳ ತನಗೆ ಉರುಳಾಯಿತೆ? ಏನಿದು ‘ಪವಾರ್’ ಪಾಲಿಟಿಕ್ಸ್ ನ 1978ರ ನಂಟು
Team Udayavani, Nov 23, 2019, 3:04 PM IST
ಮುಂಬೈ: ಮಹಾರಾಷ್ಟ್ರದ ರಾಜಕೀಯದಲ್ಲಿ ಈ ಶನಿವಾರ ಮಹತ್ವದ ದಿನ. ಕಳೆದೊಂದು ತಿಂಗಳಿಂದ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದರೂ ಇಂದಿನ ರಾಜಕೀಯ ಬೆಳವಣಿಗೆಗಳು ಭಾರಿ ವೇಗ ಪಡೆದಿದ್ದವು. ಇಂದು ಬೆಳಿಗ್ಗೆ ಶರದ್ ಪವಾರ್ ಅಳಿಯ ಅಜಿತ್ ಪವಾರ್ ಮಾವನಿಗೆ ಶಾಕ್ ನೀಡಿ ಬಿಜೆಪಿಗೆ ಬೆಂಬಲ ನೀಡಿದರು. ಫಡ್ನವೀಸ್ ನೇತೃತ್ವದ ಸರಕಾರದಲ್ಲಿ ಅಜಿತ್ ಉಪಮುಖ್ಯಮಂತ್ರಿಯೂ ಆದರು.
ಮಹಾರಾಷ್ಟ್ರದ ಈ ರಾಜಕೀಯ ಬೆಳವಣಿಗೆ ನಡೆದ ಬೆನ್ನಲ್ಲೇ ಶರದ್ ಪವಾರ್ ಅವರ 1978ರ ನಂಟಿನ ಬಗ್ಗೆ ಚರ್ಚೆಗಳಾಗುತ್ತಿವೆ. ಹಾಗಾದರೆ ಏನಿದು ಶರದ್ ಪವಾರ್- 1978- ಅಜಿತ್ ಪವಾರ್ ನಂಟು. ಮುಂದೆ ಓದಿ.
ಅದು 1978ರ ಜುಲೈ ತಿಂಗಳು. ಯುವಕ ಶರದ್ ಪವಾರ್ ಅವರು ಮಹಾರಾಷ್ಟ್ರದ ರಾಜಕೀಯದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿದ್ದ ಕಾಲ. ಶರದ್ ಪವಾರ್ ಅಂದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆ ನೀಡಿದ್ದ ಬೆಂಬಲವನ್ನು ವಾಪಾಸ್ ಪಡೆದಿದ್ದರು. ವಸಂತ್ ದಾದ ಪಾಟೀಲ್ ನೇತೃತ್ವದ ಕಾಂಗ್ರೆಸ್ ಸರಕಾರ ಪತನವಾಗಲು ಪವಾರ್ ಕಾರಣರಾಗಿದ್ದರು.
ಅಂದು ಇನ್ನೂ 37ರ ಹರೆಯದ ಶರದ್ ಪವಾರ್ ಪ್ರೋಗ್ರೆಸ್ಸಿವ್ ಡೆಮಾಕ್ರಾಟಿಕ್ ಫ್ರಂಟ್ ಮತ್ತು ಇತರ ಪಕ್ಷಗಳೊಂದಿಗೆ ಸೇರಿ ಸರಕಾರ ರಚಿಸಿದ್ದರು. ಇದರೊಂದಿಗೆ ಅತೀ ಕಿರಿಯ ಮುಖ್ಯಮಂತ್ರಿ ಎಂಬ ಖ್ಯಾತಿ ಪವಾರ್ ಪಾಲಾಗಿತ್ತು.
ಈಗ ಇತಿಹಾಸ ಮರುಕಳಿಸಿದೆ. ಶಿವಸೇನೆ- ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸರಕಾರ ರಚಿಸಬೇಕೆಂಬ ಶರದ್ ಪವಾರ್ ಆಸೆಗೆ ತಣ್ಣೀರು ಎರಚಿದ್ದು ಅಳಿಯ ಅಜಿತ್ ಪವಾರ್. ತನ್ನದೇ ಪಕ್ಷದ ಕೆಲ ಶಾಸಕರೊಂದಿಗೆ ಬಿಜೆಪಿ ಪಕ್ಷಕ್ಕೆ ನಿಷ್ಠೆ ತೋರಿಸಿ ಉಪಮುಖ್ಯಮಂತ್ರಿಯೂ ಆದರು.
ಸುಮಾರು ನಾಲ್ಕು ದಶಕಗಳ ಹಿಂದೆ ಶರದ್ ಪವಾರ್ ತಾವೇ ಉರುಳಿಸಿದ್ದ ದಾಳ ಇಂದು ತನಗೆ ತಿರುಮಂತ್ರವಾಗಿದೆ ಎನ್ನಲಾಗುತ್ತಿದೆ. ಏನೇ ಆದರೂ ರಾಜಕೀಯದಲ್ಲಿ ಏನೂ ಆಗಬಹುದು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!
MUST WATCH
ಹೊಸ ಸೇರ್ಪಡೆ
BBK11: ಮತ್ತೆ ʼಬಿಗ್ಬಾಸ್ʼ ಕಾರ್ಯಕ್ರಮದ ವಾಹಿನಿಗೆ ಬಂದ ಲಾಯರ್ ಜಗದೀಶ್; ವೀಕ್ಷಕರು ಖುಷ್
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
INDvsNZ: ರಾಹುಲ್, ಕುಲದೀಪ್, ಸಿರಾಜ್ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ
Muddebihal: ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು
Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.