NCP ಬಿಕ್ಕಟ್ಟನ್ನು ಮುಚ್ಚಿಡಲು ಶರದ್ ಪವಾರ್ ಯತ್ನ!
Team Udayavani, Aug 25, 2023, 10:17 PM IST
ಮುಂಬೈ: ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣವು ಶಿಂಧೆ ನೇತೃತ್ವದ ಬಿಜೆಪಿ ಸರ್ಕಾರ ಸೇರ್ಪಡೆಗೊಂಡ ಬಳಿಕವೂ ಎನ್ಸಿಪಿ ವಿಭಜನೆಗೊಂಡಿಲ್ಲವೆಂದು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಹೇಳಿಕೆ ನೀಡಿದ್ದಾರೆ.
ಈ ಮೂಲಕ ಪಕ್ಷದ ಒಡಕಿಗೆ ತೇಪೆ ಹಾಕಲು ಯತ್ನಿಸಿದ್ದಾರೆ. ಕೊಲ್ಹಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷವೊಂದರಲ್ಲಿನ ನಾಯಕರು ವಿಭಿನ್ನ ನಿಲುವುಗಳನ್ನು ತೆಗದುಕೊಳ್ಳುತ್ತಾರೆ ಮತ್ತು ಅದು ಅವರ ಹಕ್ಕು.
ಪಕ್ಷದಿಂದ ಕೆಲವರು ಹೊರ ನಡೆದಿದ್ದಾರೆ ಎಂದರೆ, ಪಕ್ಷದ ಬಹುತೇಕರು ಹೊರ ನಡೆದರು ಎಂದರ್ಥವಲ್ಲ. ಅಲ್ಲದೇ, ತಮ್ಮದೇ ನಿಲುವುಗಳನ್ನು ತೆಗೆದುಕೊಳ್ಳುವ ಹಕ್ಕು ಅವರಿಗಿದೆ, ಪ್ರಜಾಪ್ರಭುತ್ವ ಅದನ್ನು ನೀಡಿದೆ ಹಾಗಾಗಿ ಇದನ್ನು ಪಕ್ಷದ ಒಡಕು ಎಂದು ನಿರ್ಣಯಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಇತ್ತೀಚೆಗಷ್ಟೇ ಶರದ್ ಅವರ ಪುತ್ರಿ ಸುಪ್ರಿಯಾ ಸುಳೆ ಕೂಡ ಪಕ್ಷದಲ್ಲಿ ಯಾವುದೇ ಒಡಕಿಲ್ಲ ಎಂದಿದ್ದರು. ಮಾತ್ರವಲ್ಲದೇ, ಪಕ್ಷವನ್ನು ಕೆಲವರು ತೊರೆದ ಮಾತ್ರಕ್ಕೆ, ಅದು ವಿಭಜನೆಗೊಳ್ಳುವುದಿಲ್ಲ. ಪಕ್ಷದ ಅಧ್ಯಕ್ಷರಾಗಿ ಪವಾರ್ ಅವರು ಮುಂದುವರಿದು, ಅವರೇ ಪಕ್ಷವನ್ನೂ ಮುನ್ನಡೆಸುತ್ತಾರೆ ಎಂದಿದ್ದರು. ಗಮನಿಸಬೇಕಾದ ಸಂಗತಿಯೆಂದರೆ, ಅಜಿತ್ ಪವಾರ್ ಬಿಜೆಪಿ ಜತೆಗೆ ಕೈಜೋಡಿಸಲು ಖುದ್ದು ಶರದ್ ಕಾರಣ ಎಂಬ ವರದಿಗಳು ಇವೆ. ಮಾತ್ರವಲ್ಲ ಶರದ್ ಬಣ ಅಜಿತ್ ಜೊತೆಗೆ ಸೇರಿಕೊಳ್ಳಬಹುದು ಎಂಬ ವದಂತಿಗಳೂ ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.