1 ಲಕ್ಷ ರೂ. ಬೇಲ್ ಬಾಂಡ್ : ತರೂರ್ಗೆ ನಿರೀಕ್ಷಣಾ ಜಾಮೀನು
Team Udayavani, Jul 5, 2018, 10:56 AM IST
ಹೊಸದಿಲ್ಲಿ : ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣದಲ್ಲಿ ಆಕೆಯ ಪತಿ, ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ಇಲ್ಲಿನ ಪಟಿಯಾಲಾ ಹೌಸ್ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ತರೂರ್ ಅವರು ಇದಕ್ಕಾಗಿ 1 ಲಕ್ಷ ರೂ. ಮೌಲ್ಯದ ಬೇಲ್ ಬಾಂಡ್ ಒದಗಿಸಬೇಕಾಗುತ್ತದೆ.
ತರೂರ್ ಅವರು ಕೋರ್ಟಿನ ಪೂರ್ವಾನುಮತಿ ಇಲ್ಲದೆ ವಿದೇಶಕ್ಕೆ ಹೋಗುವಂತಿಲ್ಲ ಮತ್ತು ಸಾಕ್ಷ್ಯಗಳನ್ನು ತಿರುಚುವಂತಿಲ್ಲ ಅಥವಾ ಸಾಕ್ಷಿದಾರರಿಗೆ ಬೆದರಿಕೆ ಹಾಕುವಂತಿಲ್ಲ ಎಂದು ನ್ಯಾಯಾಲಯ ಶರತ್ತು ಹಾಕಿದೆ.
ನಿನ್ನೆ ಬುಧವಾರ ದಿಲ್ಲಿ ನ್ಯಾಯಾಲಯ ತರೂರ್ ಅವರ ನಿರೀಕ್ಷಣಾ ಜಾಮೀನಿನ ತೀರ್ಪನ್ನು ಇಂದಿಗೆ ಕಾದಿರಿಸಿತ್ತು. ತರೂರ್ ಅವರು ನಿರೀಕ್ಷಣಾ ಜಾಮೀನು ಕೋರಿದ ಕೋರಿದ ಎರಡು ದಿನಗಳ ತರುವಾಯ ಈ ಬೆಳವಣಿಗೆಗಳು ಕಂಡು ಬಂದವು.
ತಿರುವನಂತಪುರದ ಸಂಸದರಾಗಿರುವ ತರೂರ್ ಅವರನ್ನು ಈಗಾಗಲೇ ದಿಲ್ಲಿಯ ಮ್ಯಾಜಿಸ್ಟ್ರೇಟರ ನ್ಯಾಯಾಲಯ ಸುನಂದಾ ನಿಗೂಢ ಸಾವಿನ ಪ್ರಕರಣದ ಆರೋಪಿಯಾಗಿ ತನ್ನ ಮುಂದೆ ಹಾಜರಾಗಬೇಕೆಂದುಈ ಹಿಂದೆ ಸಮನ್ಸ್ ಜಾರಿ ಮಾಡಿತ್ತು. ತರೂರ್ ತನ್ನ ವಿರುದ್ಧದ ಆರೋಪಗಳು ನಿರಾಧಾರವಾದುದೆಂದು ಹೇಳಿದ್ದರು. ಜುಲೈ 7ರಂದು ಈ ಪ್ರಕರಣದ ವಿಚಾರಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.