ನಟಿಯ ಲೈಂಗಿಕ ದೌರ್ಜನ್ಯದಲ್ಲಿ ಪ್ರಭಾವಿಗಳ ಕೈವಾಡ!


Team Udayavani, Feb 21, 2017, 3:45 AM IST

sexual-assault-cases.jpg

ಕೊಚ್ಚಿ: ಬಹುಭಾಷಾ ನಟಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಹಿಂದೆ ಪ್ರಭಾವಿ ರಾಜಕಾರಣಿ, ನಟರ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಸುಪಾರಿ ಗ್ಯಾಂಗ್‌ ಮೂಲಕ ಈ ದೌರ್ಜನ್ಯ ಎಸಗಿರುವ ಬಗ್ಗೆ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ.

6 ಮಂದಿ ಪ್ರಭಾವಿಗಳು, ಒಬ್ಬ ಹೆಸರಾಂತ ನಿರ್ಮಾಪಕರು ಸೇರಿ ಸುಪಾರಿ ಗ್ಯಾಂಗ್‌ನ ಮೂಲಕ ದುಷ್ಕೃತ್ಯ ನಡೆಸಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಅಲ್ಲದೆ, ಅತ್ಯಾಚಾರ ನಡೆದ ರಾತ್ರಿ ಪಲ್ಸರ್‌ ಸುನೀಲ್‌ಗೆ ಖ್ಯಾತ ನಿರ್ಮಾಪಕರೊಬ್ಬರು ಕರೆಮಾಡಿದ್ದಾರೆ. ಪೊಲೀಸರು ಈಗಲೂ ಆ ಸಂಖ್ಯೆಗೆ ಕರೆಗೆ ಯತ್ನಿಸಿದರೂ ಮೊಬೈಲ್‌ ಸ್ವಿಚ್‌ ಆಫ್ ಬರುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇರಳ ಅಪರಾಧ ದಳದ ಐಜಿ ದಿನೇಂದ್ರ ಕಶ್ಯಪ್‌, “ಪ್ರಕರಣವನ್ನು ಎಲ್ಲ ದಿಕ್ಕಿನಿಂದಲೂ ತನಿಖೆಗೊಳಪಡಿಸಿದ್ದೇವೆ. ಸಿನಿಮಾ ಪೈಪೋಟಿ ಹಿನ್ನೆಲೆಯಲ್ಲೂ ಈ ಕೃತ್ಯ ಎಸಗಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ’ ಎಂದಿದ್ದಾರೆ. ಪ್ರಕರಣ ಸಂಬಂಧ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ನಿರೀಕ್ಷಣಾ ಜಾಮೀನಿಗೆ ಅರ್ಜಿ:
ಪ್ರಕರಣದಲ್ಲಿ ಭಾಗಿಯಾದ ಮೂವರು ಆರೋಪಿಗಳು ಕೇರಳ ಹೈಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನೊಂದು ಬೆಳವಣಿಗೆಯಲ್ಲಿ ಮಾಧ್ಯಮಗಳಲ್ಲಿ ಕುರಿತ ವರದಿಗಳನ್ನು ನೋಡಿ ನಟಿ, ಪ್ರಕರಣವನ್ನು ವಾಪಸು ತೆಗೆದುಕೊಳ್ಳಲು ಮುಂದಾಗಿದ್ದು, ನಂತರ ಕುಟುಂಬಸ್ಥರ ಒತ್ತಾಯದಿಂದ ಕೇಸು ಮುಂದುವರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

80 ಲಕ್ಷ ರೂ. ಸುಪಾರಿ!:
ವಿಚಾರಣೆಯಲ್ಲಿ ನಟಿಯ ಕಾರಿನ ಚಾಲಕ ಮಾರ್ಟಿನ್‌ ಮತ್ತಷ್ಟು ಮಾಹಿತಿ ಬಿಚ್ಚಿಟ್ಟಿದ್ದಾನೆ. ಲೈಂಗಿಕ ದೌರ್ಜನ್ಯದ ಫೋಟೋಗಳನ್ನು ಬಹಿರಂಗಪಡಿಸುವ ಬೆದರಿಕೆಯೊಡ್ಡಿ ನಟಿಯಿಂದ 30 ಲಕ್ಷ ಪಡೆಯುವ ಹುನ್ನಾರ ನಡೆಸಲಾಗಿತ್ತು. ಅಲ್ಲದೆ, ಸುಪಾರಿ ಕೊಟ್ಟವರಿಂದ ಸುನೀಲ್‌ 50 ಲಕ್ಷ ರೂ. ಪಡೆದಿದ್ದರು. ಒಟ್ಟಾರೆ 80 ಲಕ್ಷ ರೂ. ಕಲೆಹಾಕಲು ಸುನೀಲ್‌ ಮುಂದಾಗಿದ್ದ. ದುಷ್ಕೃತ್ಯಕ್ಕೆ ಸಹಕರಿಸಿದ ಸದಸ್ಯರಿಗೆ ಒಟ್ಟು 30 ಲಕ್ಷ ನೀಡುವ ಬಗ್ಗೆ ಹೇಳಿದ್ದ ಎನ್ನುವ ಸತ್ಯ ಜಾಹೀರಾಗಿದೆ. ಅಲ್ಲದೆ ಸುನೀಲ್‌, ನಟಿಯ ಹಾಲಿ ಚಾಲಕ ಮಾರ್ಟಿನ್‌ ಜೊತೆ ಲೈಂಗಿಕ ದೌರ್ಜನ್ಯ ನಡೆದ ದಿನ 40ಕ್ಕೂ ಅಧಿಕ ಕರೆಗಳನ್ನು ಮಾಡಿದ್ದಾನೆ. ಮೆಸೇಜುಗಳ ಮೂಲಕ ಇಬ್ಬರೂ ನಿರಂತರ ಸಂಪರ್ಕದಲ್ಲಿದ್ದ ಬಗ್ಗೆ ಪೊಲೀಸರು ದೃಢಪಡಿಸಿದ್ದಾರೆ.

ಕ್ರಿಮಿನಲ್‌ ಸುನೀಲ್‌:
ಪ್ರಕರಣದ ಮಾಸ್ಟರ್‌ ಮೈಂಡ್‌ ಪಲ್ಸರ್‌ ಸುನೀಲ್‌ ಈ ಹಿಂದೆಯೂ 3 ಸಲ ಇಂಥದ್ದೇ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಅದರಲ್ಲೂ ಖ್ಯಾತ ನಿರ್ಮಾಪಕ ಸುರೇಶ್‌ ಕುಮಾರ್‌ ಅವರ ಪತ್ನಿ ಮೇನಕಾರನ್ನೂ ಅಪಹರಿಸಲು ಯತ್ನಿಸಿ ವಿಫ‌ಲನಾಗಿದ್ದ. “ಕೊಚ್ಚಿ ಸ್ಟೇಷನ್‌ನಿಂದ ನನ್ನ ಹೆಂಡ್ತಿಯನ್ನು ಹೋಟೆಲಿಗೆ ಡ್ರಾಪ್‌ ಮಾಡಬೇಕಿತ್ತು. ಆದರೆ, ಸುನೀಲ್‌ ನಗರದ ಬೇರೆ ಬೇರೆ ರಸ್ತೆಯಲ್ಲಿ ಕಾರನ್ನು ಸುತ್ತಾಡಿಸಿ, ಅಪಹರಿಸಲು ಯತ್ನಿಸಿದ್ದ. ಮೇನಕಾ ನನಗೆ ಕರೆ ಮಾಡಿದ್ದರಿಂದ ಅವಘಡ ತಪ್ಪಿತ್ತು’ ಎಂದು ಸುರೇಶ್‌ ಹೇಳಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿದ್ದರೂ, ಪೊಲೀಸರು ತನಿಖೆ ಕೈಗೆತ್ತಿಕೊಂಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಕಾರಣಿ ಪುತ್ರನ ಕೈವಾಡ?:
ಡಿಎನ್‌ಎ ವರದಿಯಂತೆ, ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್‌ ಫ್ರಂಟ್‌ (ಎಲ್‌ಡಿಎಫ್) ಹಿರಿಯ ರಾಜಕಾರಣಿಯ ಮಗ ಈ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗಿದೆ. ಅಲ್ಲದೆ, ಒಬ್ಬ ಸ್ಟಾರ್‌ ನಟ ಹಾಗೂ ಆತನ ಪತ್ನಿಯೊಂದಿಗೆ ಈ ನಟಿ ತುಂಬಾ ಸ್ನೇಹದಿಂದಿದ್ದರು. ನಟನ ಸಂಸಾರದಲ್ಲಿ ವಿರಸ ಏರ್ಪಟ್ಟಿದ್ದರಿಂದ, ಆತ ನಟಿಯನ್ನು ದ್ವೇಷಿಸುತ್ತಾ, ಮಲಯಾಳಂನ ಸಿನಿಮಾ ಪ್ರಾಜೆಕುrಗಳನ್ನು ತಪ್ಪಿಸಲು ನಿರಂತರ ಸಂಚು ರೂಪಿಸಿದ್ದ. ಇತ್ತೀಚೆಗೆ ಮಲಯಾಳಂ ಚಿತ್ರರಂಗಕ್ಕೆ ಪ್ರಭಾವಿ ರಾಜಕಾರಣಿಗಳ ಮಕ್ಕಳೂ ಬಂದಿದ್ದರಿಂದ ಅವರ ನೆರವಿನಲ್ಲಿ ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಇನ್ನೊಂದೆಡೆ, ದೌರ್ಜನ್ಯ ಖಂಡಿಸಿ ಮಲಯಾಳಂ ಚಿತ್ರರಂಗದ ಸದಸ್ಯರು ಕೊಚ್ಚಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

1-shah

J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.