![Rohit Sharma backs Virat kohli in T20 World Cup](https://www.udayavani.com/wp-content/uploads/2024/06/ro-ko-415x229.jpg)
Maharashtra Politics: ಶಿಂಧೆ ಬಣದಿಂದ ಠಾಕ್ರೆ ಬಣದತ್ತ ಶಾಸಕರು…?ಎನ್ ಸಿಪಿಯಲ್ಲೂ ಸಂಕಷ್ಟ!
Team Udayavani, Jun 8, 2024, 11:50 AM IST
![Shinde group MLAs in touch with Thackeray faction](https://www.udayavani.com/wp-content/uploads/2024/06/uddhav-1-620x342.jpg)
ಮುಂಬೈ: ಲೋಕಸಭಾ ಫಲಿತಾಂಶದ ಬಳಿಕದ ವಾತಾವರಣದಿಂದ ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಗಾಳಿ ಬೀಸುವ ಲಕ್ಷಣ ಕಾಣುತ್ತಿದೆ. ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿರುವ ಏಕನಾಥ್ ಶಿಂಧೆ ಬಣದ ಶಿವಸೇನೆಯಿಂದ ಕನಿಷ್ಠ 5-6 ಶಾಸಕರು ಉದ್ಧವ್ ಠಾಕ್ರೆ ಬಣಕ್ಕೆ ಮರಳಿ ಬರಲಿದ್ದಾರೆ ಎನ್ನಲಾಗಿದೆ.
ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ತೀರ್ಮಾನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಇಷ್ಟೇ ಅಲ್ಲದೆ ಅಜಿತ್ ಪವಾರ್ ಬಣದ ಎನ್ ಸಿಪಿಯ 10ರಿಂದ 15 ಮಂದಿ ಶಾಸಕರು ಶರದ್ ಪವಾರ್ ಕ್ಯಾಂಪ್ ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಗೆ ಕೆಲವೇ ತಿಂಗಳುಗಳ ಮುಂಚೆಯೇ ಈ ಬೆಳವಣಿಗೆ ಸಂಭವಿಸಿದೆ. ಅಜಿತ್ ಪವಾರ್ ಅವರ ಎನ್ಸಿಪಿ ಕೇವಲ ಒಂದು ಲೋಕಸಭಾ ಸ್ಥಾನವನ್ನು ಮಾತ್ರ ಗೆಲ್ಲು ಯಶಸ್ವಿಯಾದ ಬಳಿಕ ಈ ಬೆಳವಣಿಗೆಗಳು ನಡೆದಿದೆ.
ಎನ್ಸಿಪಿ (ಶರದ್ ಪವಾರ್) ರಾಜ್ಯ ಅಧ್ಯಕ್ಷ ಜಯಂತ್ ಪಾಟೀಲ್ ಅವರು ಯಾವುದೇ ಪಕ್ಷವನ್ನು ಹೆಸರಿಸದೆ, ಹಲವಾರು ನಾಯಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು. “ಜೂನ್ 9 ರಂದು ನಮ್ಮ ಸಭೆಯಲ್ಲಿ ನಾವು ಈ ಪ್ರಸ್ತಾಪಗಳ ಬಗ್ಗೆ ಚರ್ಚೆ ಮಾಡುತ್ತೇವೆ” ಎಂದು ಅವರು ಹೇಳಿದರು.
ಲೋಕಸಭೆಯ ಚುನಾವಣೆಯಲ್ಲಿ ಮಹಾರಾಷ್ಟ್ರ ಆಡಳಿತಾರೂಢ ಮಹಾಯುತಿ ಮೈತ್ರಿಕೂಟ ಕೇವಲ 17 ಸ್ಥಾನಗಳನ್ನು ಗಳಿಸಿದ್ದು ಹೊಸ ಬೆಳವಣಿಗೆಗಳಿಗೆ ಕಾರಣವಾಗಿದೆ.
ಮತ್ತೊಂದೆಡೆ, ಎರಡು ಪಕ್ಷಗಳ ಒಡಕುಗಳಿಂದ ಕಂಗೆಟ್ಟಿರುವ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) 30 ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್ 13 ಸ್ಥಾನಗಳನ್ನು ಗೆದ್ದುಕೊಂಡಿತು, ಶಿವಸೇನೆ (ಯುಬಿಟಿ) ಒಂಬತ್ತು ಮತ್ತು ಎನ್ಸಿಪಿ (ಶರದ್ ಪವಾರ್ ಬಣ) ಎಂಟು ಸ್ಥಾನಗಳನ್ನು ಗಳಿಸಿತು.
ಟಾಪ್ ನ್ಯೂಸ್
![Rohit Sharma backs Virat kohli in T20 World Cup](https://www.udayavani.com/wp-content/uploads/2024/06/ro-ko-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?](https://www.udayavani.com/wp-content/uploads/2024/06/ice-creme-2-150x84.jpg)
DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?
![Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ](https://www.udayavani.com/wp-content/uploads/2024/06/dehi-150x84.jpg)
Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ
![1-eeweqewqewqewqe](https://www.udayavani.com/wp-content/uploads/2024/06/1-eeweqewqewqewqe-150x95.jpg)
45,000 ಜೀವಪ್ರಭೇದ ಅಳಿವಿನಂಚಿಗೆ: ಕಳೆದ ವರ್ಷಕ್ಕಿಂತ ಸಾವಿರ ಹೆಚ್ಚಳ
![stalin](https://www.udayavani.com/wp-content/uploads/2024/06/stalin-150x90.jpg)
Bengaluru ಸನಿಹ ಏರ್ಪೋರ್ಟ್: ತಮಿಳುನಾಡು ಹೊಸ ಕ್ಯಾತೆ
![1-amesen](https://www.udayavani.com/wp-content/uploads/2024/06/1-amesen-150x102.jpg)
India ಹಿಂದೂ ರಾಷ್ಟ್ರವಲ್ಲ ಇದಕ್ಕೆ ಫಲಿತಾಂಶ ಸಾಕ್ಷಿ:ಅಮರ್ತ್ಯ ಸೇನ್
MUST WATCH
ಹೊಸ ಸೇರ್ಪಡೆ
![Rohit Sharma backs Virat kohli in T20 World Cup](https://www.udayavani.com/wp-content/uploads/2024/06/ro-ko-150x83.jpg)
T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?
![Udupi: ಜೂನ್ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ](https://www.udayavani.com/wp-content/uploads/2024/06/Malpe-4-150x86.jpg)
Udupi: ಜೂನ್ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ
![DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?](https://www.udayavani.com/wp-content/uploads/2024/06/ice-creme-2-150x84.jpg)
DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?
![Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್](https://www.udayavani.com/wp-content/uploads/2024/06/sandal-1-150x83.jpg)
Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್
![shatabhisha](https://www.udayavani.com/wp-content/uploads/2024/06/shatabhisha-150x83.jpg)
Kannada Cinema; ತೆರೆಗೆ ಬಂತು ನವತಂಡದ ‘ಶತಭಿಷ ‘
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.