ಶಿವಸೇನೆ ಸಂಸದ ಗಾಯಕ್ವಾಡ್ ವಿಮಾನಯಾನ ನಿಷೇಧ ತೆರವು
Team Udayavani, Apr 7, 2017, 3:50 PM IST
ನವದೆಹಲಿ: ಏರ್ ಇಂಡಿಯಾ ಸಿಬ್ಬಂದಿಗೆ ಚಪ್ಪಲಿಯೇಟು ನೀಡಿದ ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ಗೆ ಹಾರಾಟ ನಿಷೇಧ ಹೇರಿದ್ದನ್ನು ಶುಕ್ರವಾರ ವಿಮಾನಯಾನ ಸಂಸ್ಥೆಗಳು ತೆರವುಗೊಳಿಸಿವೆ.
ಘಟನೆಗೆ ವಿಷಾದ ವ್ಯಕ್ತ ಪಡಿಸಿ ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ಅವರಿಗೆ ಪತ್ರ ಬರೆದಿದ್ದು, ಈ ಪತ್ರವನ್ನು ನೀಡಿದ ಬಳಿಕ ವಿಮಾನಯಾನ ಸಂಸ್ಥೆಗಳು ನಿಷೇಧ ತೆರವುಗೊಳಿಸಿವೆ ಎಂದು ಏರ್ ಇಂಡಿಯಾ ಹೇಳಿದೆ.
ಸುಮಾರು 2 ವಾರಗಳ ಕಾಲ ನಿಷೇಧಹೇರಿದ ಕಾರಣ ಗಾಯಕ್ವಾಡ್ಗೆ ವಿಮಾನ ಪ್ರಯಾಣ ಸಾಧ್ಯವಾಗಿರಲಿಲ್ಲ. ಅವರು ರೈಲಿನಲ್ಲೇ ದೆಹಲಿಗೆ ಪ್ರಯಾಣಸಿದ್ದರು.
ಈ ವಿಚಾರ ಗುರುವಾರ ಸಂಸತ್ನಲ್ಲಿ ಹಲವು ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿತ್ತಲ್ಲದೆ ಕೇಂದ್ರದ ಇಬ್ಬರು ಸಚಿವರ ನಡುವೆಯೇ ಮಾತಿನ ಚಕಮಕಿಗೆ ಕಾರಣವಾಗಿ, ಪರಿಸ್ಥಿತಿ ಕೈಮೀರುವ ಹಂತಕ್ಕೆ ತಲುಪಿ, ಕೊನೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ರ ಮಧ್ಯಪ್ರವೇಶದಿಂದಾಗಿ ತಿಳಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.