YSRCP ಜಗನ್ ರೆಡ್ಡಿಗೆ ಶಾಕ್: ರಾಜ್ಯಸಭೆಯ ಇಬ್ಬರು ಸಂಸದರು ರಾಜೀನಾಮೆ
ವಲಸೆಯನ್ನು ತಡೆಯುವುದು ನಾಯಕತ್ವಕ್ಕೆ ಕಷ್ಟವಾಗಿದೆ...
Team Udayavani, Aug 30, 2024, 6:34 AM IST
ಹೊಸದಿಲ್ಲಿ: ಆಂಧ್ರ ಪ್ರದೇಶದ ವೈಎಸ್ಆರ್ಸಿಪಿಯ ಇಬ್ಬರು ರಾಜ್ಯಸಭಾ ಸದಸ್ಯರು ಪಕ್ಷದ ಸದಸ್ಯತ್ವ ಹಾಗೂ ಮೇಲ್ಮನೆ ಸದಸ್ಯತ್ವಕ್ಕೂ ರಾಜೀನಾ ಮೆ ನೀಡಿದ್ದು, ಸಿಎಂ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸೇರ್ಪಡೆ ಯಾಗಲು ಮುಂದಾಗಿದ್ದಾರೆ. ಇದರೊಂದಿಗೆ, ವೈ. ಎಸ್. ಜಗನ್ಮೋಹನ್ ರೆಡ್ಡಿ ನೇತೃತ್ವದ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ.
206ರ ಜೂನ್ವರೆಗೂ ಸದಸ್ಯತ್ವ ಹೊಂದಿ ದ್ದ ಮೋಪಿದೇವಿ ವೆಂಕಟರಮಣ್ ಮತ್ತು 2028ರ ಜೂನ್ವರೆಗೆ ಸದಸ್ಯತ್ವ ಇದ್ದ ಬೇಡ ಮಸ್ತಾನ್ ರಾವ್ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ದ್ದಾರೆ. ಈ ಇಬ್ಬರು ಇತ್ತೀಚೆಗಷ್ಟೇ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇವರ ರಾಜೀನಾಮೆಯಿಂದ ಮೇಲ್ಮನೆಯಲ್ಲಿ ವೈಎಸ್ಆರ್ಸಿಪಿ ಸದಸ್ಯರ ಸಂಖ್ಯೆ 9ಕ್ಕೆ ಇಳಿಕೆಯಾಗಿದೆ. ಲೋಕಸಭೆಯಲ್ಲಿ ಪಕ್ಷದ ನಾಲ್ವರು ಎಂಪಿಗಳಿದ್ದಾರೆ.
ರಾಜೀನಾಮೆ ನೀಡಿರುವ ಇಬ್ಬರು ನಾಯಕರು ಟಿಡಿಪಿ ಮೂಲಕ ರಾಜ್ಯಸಭೆಗೆ ಮರು ಆಯ್ಕೆಯಾಗುವ ಸಾಧ್ಯತೆಗಳಿವೆ. 2019ರಿಂದ ರಾಜ್ಯಸಭೆಯಲ್ಲಿ ಟಿಡಿಪಿಯ ಒಬ್ಬ ಸದಸ್ಯರು ಇಲ್ಲ. ಹಾಗಾಗಿ ಇವರಿಬ್ಬರ ಮೂಲಕ ತನ್ನ ಖಾತೆಯನ್ನು ಟಿಡಿಪಿ ತೆರೆಯಲಿದೆ ಎಂದು ಹೇಳಲಾಗುತ್ತಿದೆ. ವಿಧಾನಸಭೆ ಚುನಾವಣೆಯ ಬಳಿಕ ವೈಎಸ್ಆರ್ಸಿಪಿಯ ಅನೇಕ ನಾಯಕರು ಪಕ್ಷವನ್ನು ತೊರೆದೆ ಬೇರೆ ಪಕ್ಷಗಳನ್ನು ಸೇರುತ್ತಿದ್ದಾರೆ. ಈ ವಲಸೆಯನ್ನು ತಡೆಯುವುದು ನಾಯಕತ್ವಕ್ಕೆ ಕಷ್ಟದ ಸವಾಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.