Omar Abdullah ವಿರುದ್ಧ ರಾಜನಾಥ್ ಸಿಂಗ್ ಕಿಡಿ: ಅಫ್ಜಲ್ ಗುರುವನ್ನು ಸಮ್ಮಾನಿಸಬೇಕಿತ್ತೇ?

ಸಂಸತ್ ದಾಳಿಯ ಸಂಚುಕೋರನ ಮೇಲೆ ಅನುಕಂಪದ ಮಾತಾಡಿದ್ದ ಒಮರ್ ಅಬ್ದುಲ್ಲಾ!

Team Udayavani, Sep 8, 2024, 8:48 PM IST

1-raj

ರಾಮ್‌ಬನ್‌: 2001 ರ ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ ಕುರಿತು ನ್ಯಾಷನಲ್ ಕಾನ್ಫರೆನ್ಸ್ (NC) ನಾಯಕ ಒಮರ್ ಅಬ್ದುಲ್ಲಾ ಅನುಕಂಪ ಬೀರಿ ನೀಡಿದ ಹೇಳಿಕೆಗೆ ರಕ್ಷಣ ಸಚಿವ, ಬಿಜೆಪಿಯ(BJP) ಹಿರಿಯ ನಾಯಕ ರಾಜನಾಥ್ ಸಿಂಗ್ ರವಿವಾರ (ಸೆ.8)ಕಿಡಿ ಕಾರಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಾಮ್‌ಬನ್‌ನಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಸಿಂಗ್ “ಒಮರ್ ಅಬ್ದುಲ್ಲಾ ಅವರು ಇಂತಹ ಹೇಳಿಕೆಗಳನ್ನು ನೀಡಿರುವುದು ದುರದೃಷ್ಟಕರವಾಗಿದೆ, ಅಫ್ಜಲ್ ಗುರುವನ್ನು ಗಲ್ಲಿಗೇರಿಸಬಾರದಾಗಿದ್ದರೆ, ನಾವು ಏನು ಮಾಡಬೇಕಿತ್ತು? ನಾವು ಅವರಿಗೆ ಸಾರ್ವಜನಿಕವಾಗಿ ಹಾರ ಹಾಕಿ ಸಮ್ಮಾನಿಸಬೇಕೇ?” ಎಂದು ಪ್ರಶ್ನಿಸಿದ್ದಾರೆ.

”ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಜಮ್ಮು ಮತ್ತು ಕಾಶ್ಮೀರವನ್ನು ಎಟಿಎಂನಂತೆ ಬಳಸಿಕೊಂಡಿವೆ ಮತ್ತು ರಾಜ್ಯವನ್ನು ಲೂಟಿ ಮಾಡಿವೆ ” ಎಂದು ರಾಜನಾಥ್ ಸಿಂಗ್ ಕಿಡಿ ಕಾರಿದರು.

ಪಿಒಕೆ ನಿವಾಸಿಗಳು ಭಾರತಕ್ಕೆ ಬನ್ನಿ

ಪಾಕ್‌ ಆಕ್ರಮಿಕ ಕಾಶ್ಮೀರ (ಪಿಒಕೆ)ದ ನಿವಾಸಿಗಳೇ ಭಾರತಕ್ಕೆ ಬನ್ನಿ, ಇಲ್ಲೇ ನೆಲೆಸಿ. ಪಾಕಿಸ್ಥಾನವು ನಿಮ್ಮನ್ನು ವಿದೇಶಿಗರು ಎಂದರೂ ನಾವು ಮಾತ್ರ ನಿಮ್ಮನ್ನು ಭಾರತೀಯರೆಂದೇ ಪರಿಗಣಿಸಿದ್ದೇವೆ’ ಎಂದು ರಾಜನಾಥ್‌ ಸಿಂಗ್‌ ಹೇಳಿದರು.

ಉಗ್ರವಾದ ನಿಲ್ಲಿಸಿದರೆ ಪಾಕ್‌ ಜತೆ ಮಾತುಕತೆ
ಪಾಕ್‌ ಜತೆ ಮಾತುಕತೆ ನಡೆಸಬೇಕೆಂದು ಹಲವರು ಹೇಳುತ್ತಾರೆ. ಅದಕ್ಕೆ ಮೊದಲು ಪಾಕ್‌ ಉಗ್ರವಾದವನ್ನು ಬೆಂಬಲಿಸುವುದನ್ನು ನಿಲ್ಲಿಸಬೇಕು. ನೆರೆಯ ರಾಷ್ಟ್ರದೊಂದಿಗೆ ಒಳ್ಳೆಯ ಸಂಬಂಧವಿರಬೇಕೆಂದು ಯಾರಿಗೆ ಇಷ್ಟವಿಲ್ಲ ಹೇಳಿ? ಆದರೆ ಅದಕ್ಕೆ ಮುನ್ನ ಪಾಕ್‌ ಈ ಷರತ್ತನ್ನು ಪಾಲಿಸಬೇಕು. ಕಾಶ್ಮೀರದಲ್ಲಿ ಉಗ್ರ ಕೃತ್ಯಗಳಿಗೆ ಶೇ. 85ರಷ್ಟು ಮಂದಿ ಮುಸ್ಲಿಮರೇ ಬಲಿಯಾಗಿದ್ದಾರೆ. ನಾನು ಗೃಹ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ನನಗೆ ವಾಸ್ತವ ತಿಳಿದಿದೆ ಎಂದರು.

ಒಮರ್ ಅಬ್ದುಲ್ಲಾ ಅವರು ”ಅಫ್ಜಲ್ ಗುರುವನ್ನು ಗಲ್ಲಿಗೇರಿಸುವುದಕ್ಕೆ ಯಾವುದೇ ಉದ್ದೇಶವಿಲ್ಲ ಎಂದು ನಂಬಿದ್ದೇನೆ ಮತ್ತು ಹಿಂದಿನ ಜಮ್ಮು ಮತ್ತು ಕಾಶ್ಮೀರ ಸರಕಾರವು ಆತನನ್ನು ಗಲ್ಲಿಗೇರಿಸುವುದನ್ನು ಅನುಮೋದಿಸುತ್ತಿರಲಿಲ್ಲ ಎಂದು ಹೇಳಿದ್ದರು.

2001,ಡಿಸೆಂಬರ್ 13 ರಂದು ಸಂಸತ್ ಭವನದ ಮೇಲಿನ ದಾಳಿಯ ಸಂಚು ರೂಪಿಸಿದ್ದಕ್ಕಾಗಿ 2013 ಫೆಬ್ರವರಿ 9 ರಂದು ದೆಹಲಿಯ ತಿಹಾರ್ ಜೈಲಿನಲ್ಲಿ ಅಫ್ಜಲ್ ಗುರುವನ್ನು ಗಲ್ಲಿಗೇರಿಸಲಾಗಿತ್ತು.

ಟಾಪ್ ನ್ಯೂಸ್

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.