![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 26, 2022, 8:08 PM IST
ನವದೆಹಲಿ: ಇತ್ತೀಚಿನ ವರದಿಗಳ ಪ್ರಕಾರ, ಶ್ರದ್ಧಾ ವಾಕರ್ ಪ್ರಕರಣದ ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾ ನವೆಂಬರ್ 28 ರಂದು ನಾರ್ಕೋ ಪರೀಕ್ಷೆಗೆ ಒಳಗಾಗಲಿದ್ದಾನೆ. ಮೂಲಗಳು ಮುಂದಿನ ಎರಡು ದಿನಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಶನಿವಾರ ತಿಳಿಸಿವೆ.
ದೆಹಲಿಯ ಸಾಕೇತ್ ಕೋರ್ಟ್ ಶ್ರದ್ಧಾ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾನನ್ನು 13 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ದೆಹಲಿ ಪೊಲೀಸರು, ಕೆಲವು ದಿನಗಳ ಹಿಂದೆ, ಶ್ರದ್ಧಾ ವಾಲ್ಕರ್ ದೇಹದ ಡಿಎನ್ಎ ಪರೀಕ್ಷೆಯ ವರದಿಯನ್ನು ಸ್ವೀಕರಿಸಿಲ್ಲ ಎಂದು ತಿಳಿಸಿದ್ದರು. “ಡಿಎನ್ಎ ಪರೀಕ್ಷಾ ವರದಿ ( ದೇಹದ ಭಾಗಗಳು) ಪೊಲೀಸರಿಗೆ ಬಂದಿಲ್ಲ” ಎಂದು ಐಪಿಎಸ್, ಕಾನೂನು ಮತ್ತು ಸುವ್ಯವಸ್ಥೆ, ವಲಯ II ರ ವಿಶೇಷ ಪೊಲೀಸ್ ಆಯುಕ್ತ ಸಾಗರ್ ಪ್ರೀತ್ ಹೂಡಾ ಹೇಳಿದ್ದಾರೆ.
ಈಗಾಗಲೇ ಅಫ್ತಾಬ್ ಅಮೀನ್ ಪೂನವಾಲಾಗೆ ಪಾಲಿಗ್ರಫಿ ಟೆಸ್ಟ್ ನಡೆಸಲಾಗಿದೆ.ಕೆಲ ಪ್ರಶ್ನೆಗಳಿಗೆ ಆತ ಸುಳ್ಳು ಉತ್ತರ ನೀಡಿದ್ದ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಶ್ರದ್ಧಾ ವಾಕರ್ ಪ್ರಕರಣವನ್ನು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನವೆಂಬರ್ 16 ರಂದು ದೆಹಲಿ ಪೊಲೀಸರು ಶ್ರದ್ಧಾ ವಾಲ್ಕರ್ ಅವರ ತಂದೆ ವಿಕಾಸ್ ವಾಲ್ಕರ್ ಅವರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ದೆಹಲಿಯ ಛತ್ತರ್ಪುರದಲ್ಲಿರುವ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾನ ಫ್ಲಾಟ್ನ ಅಡುಗೆಮನೆಯಲ್ಲಿ ಕಲೆಗಳು ಪತ್ತೆಯಾಗಿರುವುದು ತನಿಖೆಯ ವೇಳೆ ಈಗಾಗಲೇ ದೃಢಪಟ್ಟಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.