“ಶ್ರದ್ಧಾ ಪ್ರಕರಣ ಆಕಸ್ಮಿಕ’; ರಾಜಸ್ಥಾನ ಸಿಎಂ ಗೆಹ್ಲೋಟ್ ವಿವಾದಿತ ಹೇಳಿಕೆ


Team Udayavani, Nov 23, 2022, 7:45 AM IST

“ಶ್ರದ್ಧಾ ಪ್ರಕರಣ ಆಕಸ್ಮಿಕ’; ರಾಜಸ್ಥಾನ ಸಿಎಂ ಗೆಹ್ಲೋಟ್ ವಿವಾದಿತ ಹೇಳಿಕೆ

ನವದೆಹಲಿ: “ದೆಹಲಿಯಲ್ಲಿ ನಡೆದಿರುವ ಶ್ರದ್ಧಾ ಪ್ರಕರಣವು ಒಂದು ಆಕಸ್ಮಿಕ ಘಟನೆಯಷ್ಟೆ. ಅದರಲ್ಲಿ ಹೊಸದೇನೂ ಇಲ್ಲ. ಎಷ್ಟೋ ಶತಮಾನಗಳಿಂದಲೂ ಅಂತರ್‌ಜಾತಿ, ಅಂತರ್‌ ಧರ್ಮೀಯ ವಿವಾಹಗಳು ನಡೆಯುತ್ತಲೇ ಇವೆ. ಅದರಲ್ಲಿ ವಿಶೇಷವೇನಿದೆ?’ಇದು ದೇಶವನ್ನೇ ಬೆಚ್ಚಿಬೀಳಿಸಿರುವ ಶ್ರದ್ಧಾ ವಾಕರ್‌ ಪ್ರಕರಣ ಕುರಿತು ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್ ಆಡಿರುವ ಮಾತು.

ಮಂಗಳವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೆಹ್ಲೋಟ್, “ಒಂದು ಘಟನೆ ನಡೆದಿದೆ. ಅದು ಆಕಸ್ಮಿಕವಷ್ಟೆ. ಬಿಜೆಪಿಯವರು ಒಂದು ಸಮುದಾಯ, ಒಂದು ಧರ್ಮವನ್ನು ಯಾವತ್ತೂ ಟಾರ್ಗೆಟ್‌ ಮಾಡುತ್ತಾರೆ. ಅದರ ಆಧಾರದಲ್ಲೇ ನಮ್ಮ ದೇಶದಲ್ಲಿ ರಾಜಕೀಯ ನಡೆಯುತ್ತಿದೆ. ಬೆಂಕಿ ಹೊತ್ತಿಸುವುದು ಸುಲಭ, ಆದರೆ ಅದನ್ನು ಆರಿಸುವುದೇ ಕಷ್ಟದ ಕೆಲಸ’ ಎಂದಿದ್ದಾರೆ.

ಗೆಹ್ಲೋಟ್ ಹೇಳಿಕೆ ವಿರುದ್ಧ ಕಿಡಿಕಾರಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್‌ ಪೂನಾವಾಲ, “ಇಂಥದ್ದೊಂದು ಘಟನೆಯನ್ನು ಸಾಮಾನ್ಯ ಘಟನೆಯಂತೆ ನೋಡುವುದು ಅಚ್ಚರಿಯ ವಿಚಾರ. ಲವ್‌ ಜಿಹಾದ್‌, ಮತಾಂತರವನ್ನು ಇಂಥ ವ್ಯವಸ್ಥಿತ ಸಂಚಿನ ಮೂಲಕವೇ ನಡೆಸಲಾಗುತ್ತದೆ’ ಎಂದಿದ್ದಾರೆ.

ಪಾಲಿಗ್ರಾಫ್ ಪರೀಕ್ಷೆಗೆ ಅಸ್ತು:
ಶ್ರದ್ಧಾ ವಾಕರ್‌ ಪ್ರಕರಣದ ಹಿಂದಿನ ಸತ್ಯವನ್ನು ಬಯಲಿಗೆಳೆಯುವ ಸಲುವಾಗಿ ಆರೋಪಿ ಅಫ್ತಾಬ್‌ ಪೂನಾವಾಲನನ್ನು ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲು ದೆಹಲಿಯ ನ್ಯಾಯಾಲಯ ಒಪ್ಪಿಗೆ ನೀಡಿದೆ.

ಜತೆಗೆ, ಆರೋಪಿಯನ್ನು ಮತ್ತೆ 4 ದಿನಗಳ ಪೊಲೀಸ್‌ ವಶಕ್ಕೊಪ್ಪಿಸಿದೆ. ಕೋರ್ಟ್‌ ಅನುಮತಿ ದೊರೆತ ಕಾರಣ, ಬುಧವಾರ ಅಫ್ತಾಬ್‌ನನ್ನು ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸುವ, ನಂತರದಲ್ಲಿ ನಾರ್ಕೋ ಪರೀಕ್ಷೆ ನಡೆಸುವ ಸಾಧ್ಯತೆಯಿದೆ.

ಇದೇ ವೇಳೆ, “ನನಗೆ ಶ್ರದ್ಧಾಳನ್ನು ಕೊಲ್ಲುವ ಉದ್ದೇಶ ಇರಲಿಲ್ಲ. ಇಬ್ಬರ ನಡುವೆ ಜಗಳ ತಾರಕಕ್ಕೇರಿದಾಗ ಸಿಟ್ಟಿನ ಭರದಲ್ಲಿ ಈ ಕೃತ್ಯವೆಸಗಿದೆ. ಜತೆಗೆ ನನ್ನ ಬಗ್ಗೆ ಏನೆಲ್ಲಾ ಹೇಳಲಾಗುತ್ತಿದೆಯೋ ಅದು ಸಂಪೂರ್ಣ ಸತ್ಯವಲ್ಲ’ ಎಂದು ಅಫ್ತಾಬ್‌ ಕೋರ್ಟ್‌ ಮುಂದೆ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಆದರೆ, ಕೋರ್ಟ್‌ನ ಹೊರಗೆ ಮಾತನಾಡಿದ ಅಫ್ತಾಬ್‌ ಪರ ವಕೀಲರು, “ಶ್ರದ್ಧಾಳನ್ನು ತಾನೇ ಕೊಂದಿದ್ದಾಗಿ ಅಫ್ತಾಬ್‌ ಕೋರ್ಟ್‌ ಮುಂದೆ ಒಪ್ಪಿಕೊಂಡಿಲ್ಲ’ ಎಂದಿದ್ದಾರೆ.

ಈ ನಡುವೆ, ಮಂಗಳವಾರ ವಿಧಿವಿಜ್ಞಾನ ತಂಡವು ಅಫ್ತಾಬ್‌ನ ಫ್ಲ್ಯಾಟ್‌ನ ಬಾತ್‌ರೂಂ ಟೈಲ್ಸ್‌ನಲ್ಲಿ ರಕ್ತದ ಕಲೆಯಿರುವುದನ್ನು ಪತ್ತೆಹಚ್ಚಿದೆ. ಆ ಟೈಲ್ಸ್‌ ಅನ್ನು ಡಿಎನ್‌ಎ ಪರೀಕ್ಷೆಗಾಗಿ ಲ್ಯಾಬ್‌ಗ ರವಾನಿಸಲಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.