8 ಆಸನದ ವಾಹನಗಳಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯ! ಶೀಘ್ರದಲ್ಲೇ ನಿಯಮ ಜಾರಿ: ಸಚಿವ ಗಡ್ಕರಿ ಘೋಷಣೆ


Team Udayavani, Jun 29, 2022, 7:15 AM IST

8 ಆಸನದ ವಾಹನಗಳಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯ! ಶೀಘ್ರದಲ್ಲೇ ನಿಯಮ ಜಾರಿ: ಸಚಿವ ಗಡ್ಕರಿ ಘೋಷಣೆ

ನವದೆಹಲಿ: ಇನ್ನು ಮುಂದೆ ಗರಿಷ್ಠ 8 ಪ್ರಯಾಣಿಕರನ್ನು ಹೊತ್ತೂಯ್ಯಬಲ್ಲಂಥ ವಾಹನಗಳಲ್ಲಿ ಕನಿಷ್ಠ 6 ಏರ್‌ಬ್ಯಾಗ್‌ಗಳು ಇರಬೇಕಾದ್ದು ಕಡ್ಡಾಯವಾಗಲಿದೆ.

ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರೇ ಸ್ವತಃ ಈ ಮಾಹಿತಿ ನೀಡಿದ್ದಾರೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರವು ಆದಷ್ಟು ಬೇಗ ಇಂಥದ್ದೊಂದು ನಿಯಮ ಜಾರಿ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಇಂಟೆಲ್‌ ಇಂಡಿಯಾದ ಸುರಕ್ಷತಾ ಪ್ರವರ್ತಕರ ಸಮ್ಮೇಳನ 2022ರಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಗಡ್ಕರಿ, “ದೇಶಾದ್ಯಂತ ಸುಮಾರು 5 ಲಕ್ಷ ಅಪಘಾತಗಳಿಂದ 1.5 ಲಕ್ಷದಷ್ಟು ಮಂದಿ ಸಾವನ್ನಪ್ಪುತ್ತಾರೆ. ಹೀಗಾಗಿ ನಾವು ಜನರ ಪ್ರಾಣವನ್ನು ಉಳಿಸಬೇಕಿದೆ. ಅದಕ್ಕಾಗಿ ಮೋಟಾರು ವಾಹನಗಳಲ್ಲಿ ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಿದ್ದೇವೆ’ ಎಂದು ತಿಳಿಸಿದ್ದಾರೆ.

ಅತ್ಯಧಿಕ ತೆರಿಗೆ, ಕಠಿಣ ಸುರಕ್ಷತಾ ಹಾಗೂ ಇಂಗಾಲ ಹೊರಸೂಸುವಿಕೆ ನಿಯಮಗಳಿಂದಾಗಿ ವಾಹನಗಳ ತಯಾರಿಕಾ ವೆಚ್ಚ ಹೆಚ್ಚಳವಾಗುತ್ತಿದೆ ಎಂದು ಆಟೋಮೊಬೈಲ್‌ ಉದ್ಯಮಗಳು ಕಳವಳ ವ್ಯಕ್ತಪಡಿಸಿರುವಂತೆಯೇ ಗಡ್ಕರಿ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

ವೆಚ್ಚ ಹೆಚ್ಚಾದರೆ ಕಾರು ತಯಾರಿಗೆ ಸ್ಥಗಿತ
ಕೇಂದ್ರ ಸರ್ಕಾರದ ಕೆಲವೊಂದು ನಿಯಮಗಳಿಂದಾಗಿ ವಾಹನ ತಯಾರಿಕಾ ವೆಚ್ಚವು ಗಣನೀಯವಾಗಿ ಹೆಚ್ಚಳವಾಗಿದ್ದು, ಅವುಗಳು ಜನಸಾಮಾನ್ಯನ ಕೈಗೆಟುಕದಂಥ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಸಣ್ಣ ಕಾರುಗಳ ತಯಾರಿಕೆ ಸ್ಥಗಿತಗೊಳಿಸಲು ನಾವು ಹಿಂದೆಮುಂದೆ ನೋಡುವುದಿಲ್ಲ ಎಂದು ಮಾರುತಿ ಸುಜುಕಿ ಮುಖ್ಯಸ್ಥ ಆರ್‌.ಸಿ. ಭಾರ್ಗವ ಹೇಳಿದ್ದಾರೆ. 6 ಏರ್‌ಬ್ಯಾಗ್‌ ಕಡ್ಡಾಯಗೊಳಿಸಿದರೆ ಕಾರುಗಳ ದರ ಏರಿಕೆಯಾಗುತ್ತದೆ. ಇದರಿಂದ ಅಪಘಾತ ತಗ್ಗುತ್ತದೆ ಎನ್ನುವುದನ್ನು ಒಪ್ಪಲಾಗದು. ಅಲ್ಲದೇ, ಕಾಂಪ್ಯಾಕ್ಟ್ ಕಾರುಗಳ ಮಾರಾಟದಿಂದ ಕಂಪನಿಗಳಿಗೆ ಹೆಚ್ಚಿನ ಲಾಭವೂ ಆಗುವುದಿಲ್ಲ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.