Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್ ಅಸ್ತ್ರ
ಪಾಕ್ ಉಗ್ರರ ಹೊಸ ತಂತ್ರ ಇತ್ತೀಚೆಗಿನ ಹತ್ಯೆ ಘಟನೆ ವೇಳೆ ದೃಢ
Team Udayavani, Jul 8, 2024, 6:55 AM IST
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ಥಾನ ಪ್ರೇರಿತ ಉಗ್ರರು ಇದುವರೆಗೆ ಸ್ಥಳೀಯರು ತಮ್ಮ ಪರವಾಗಿ ಕೆಲಸ ಮಾಡುವಂತೆ ಬಂದೂಕು ತೋರಿಸಿ ಬೆದರಿಕೆ ಹಾಕುತ್ತಿದ್ದರು. ಅದಕ್ಕೆ ಸ್ಥಳೀಯರು ಸೆಡ್ಡು ಹೊಡೆಯಲು ಆರಂಭಿಸಿದ ಬಳಿಕ ದೇಹದಲ್ಲಿ ರಹಸ್ಯವಾಗಿ ಧರಿಸುವ “ಬಾಡಿ ಕ್ಯಾಮ್’ ಉಪಯೋಗಿಸಿ ಸ್ಥಳೀಯರನ್ನು ಬ್ಲ್ಯಾಕ್ಮೇಲ್ ಮಾಡುವ ಹೊಸ ತಂತ್ರ ಅನುಸರಿಸುತ್ತಿರು ವುದು ಬೆಳಕಿಗೆ ಬಂದಿದೆ.
ಉಗ್ರರು ಎಂದು ತಿಳಿಯದೆ ಸ್ಥಳೀಯರು ಸಣ್ಣ ಪುಟ್ಟ ಸಹಾಯ ಮಾಡಿದರೆ ಅದನ್ನು ಬಾಡಿ ಕ್ಯಾಮ್ ಮೂಲಕ ಚಿತ್ರೀಕರಿಸುತ್ತಾರೆ. ಅನಂತರ ಆ ವೀಡಿಯೋಗಳನ್ನು ಪ್ರದರ್ಶಿಸಿ ತಮ್ಮ ಪರವಾಗಿ ಕೆಲಸ ಮಾಡದಿದ್ದರೆ ಪೊಲೀಸರಿಗೆ ಅಥವಾ ಸೇನೆಗೆ “ಉಗ್ರರ ಪರ ಕೆಲಸ ಮಾಡುತ್ತಿದ್ದಾರೆ’ ಎಂದು ಮಾಹಿತಿ ನೀಡುವ ಬೆದರಿಕೆ ಒಡ್ಡುತ್ತಾರೆ. ತಮಗೆ ಊಟ, ವಸತಿ ಮತ್ತಿತರ ವ್ಯವಸ್ಥೆಗಳನ್ನು ಮಾಡದಿದ್ದರೆ ಈ ವೀಡಿಯೋಗಳನ್ನು ವೈರಲ್ ಮಾಡಿ ಉಗ್ರರೊಂದಿಗೆ ನಂಟು ಹೊಂದಿರುವಂತೆ ಬಿಂಬಿಸುವ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳನ್ನು ಉಲ್ಲೇಖೀಸಿ ಇಂಗ್ಲಿಷ್ ಸುದ್ದಿವಾಹಿನಿಯೊಂದು ವರದಿ ಮಾಡಿದೆ.
ಜಮ್ಮು-ಕಾಶ್ಮೀರದ ಬಸಂತ್ಘರ್ಎಂಬಲ್ಲಿ ಗ್ರಾಮ ರಕ್ಷಣ ಪಡೆಯ ಸಿಬಂದಿಯೊಬ್ಬರನ್ನು ಉಗ್ರರು ಇತ್ತೀಚೆಗೆ ಹತ್ಯೆಗೈದಿದ್ದರು. ಈ ಸಂಬಂಧ ಭದ್ರತ ಪಡೆಗಳು ಉಗ್ರರನ್ನು ಬೆನ್ನಟ್ಟಿದ್ದ ಸಂದರ್ಭದಲ್ಲಿ ಈ ಹೊಸ ತಂತ್ರದ ಬಗ್ಗೆ ಸುಳಿವು ಸಿಕ್ಕಿದೆ. ಕಣಿವೆಯ ಹಲವು ಗ್ರಾಮಗಳಲ್ಲಿ ಉಗ್ರರು ಇದೇ ಮಾದರಿಯಲ್ಲಿ ಸ್ಥಳೀಯರನ್ನು ತಮ್ಮ ಪರವಾಗಿ ಕೆಲಸ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂಬುದಾಗಿ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಣಿವೆಯಲ್ಲಿದ್ದಾರೆ 110 ವಿದೇಶಿ ಉಗ್ರರು
ಕಣಿವೆಯಾದ್ಯಂತ 110 ಮಂದಿ ವಿದೇಶಿ ಉಗ್ರರು ಸಕ್ರಿಯರಾಗಿದ್ದಾರೆ. ಈ ಪೈಕಿ ಉತ್ತರ ಪೀರ್ ಪಾಂಜಾಲ್ ಶ್ರೇಣಿಯಲ್ಲಿ 60 ಉಗ್ರರು ಸಕ್ರಿಯರಾಗಿದ್ದರೆ, 50 ಮಂದಿ ದಕ್ಷಿಣ ಶ್ರೇಣಿಗಳಲ್ಲಿ ಅಡಗಿದ್ದಾರೆಂದು ಶೋಧ ಕಾರ್ಯಾಚರಣೆ ನಿರತ ಭದ್ರತ ಪಡೆಗಳು ಮಾಹಿತಿ ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
31 Naxal ಎನ್ಕೌಂಟರ್ಗೆ 1,500 ಮಂದಿ 25 ಕಿ.ಮೀ. ಟ್ರೆಕ್!
Maharashtra; ಅಹ್ಮದ್ನಗರ ಇನ್ನು ಮುಂದೆ ‘ಅಹಿಲ್ಯಾನಗರ’
Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..
DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.