Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

ಪಾಕ್‌ ಉಗ್ರರ ಹೊಸ ತಂತ್ರ ಇತ್ತೀಚೆಗಿನ ಹತ್ಯೆ ಘಟನೆ ವೇಳೆ ದೃಢ

Team Udayavani, Jul 8, 2024, 6:55 AM IST

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ಥಾನ ಪ್ರೇರಿತ ಉಗ್ರರು ಇದುವರೆಗೆ ಸ್ಥಳೀಯರು ತಮ್ಮ ಪರವಾಗಿ ಕೆಲಸ ಮಾಡುವಂತೆ ಬಂದೂಕು ತೋರಿಸಿ ಬೆದರಿಕೆ ಹಾಕುತ್ತಿದ್ದರು. ಅದಕ್ಕೆ ಸ್ಥಳೀಯರು ಸೆಡ್ಡು ಹೊಡೆಯಲು ಆರಂಭಿಸಿದ ಬಳಿಕ ದೇಹದಲ್ಲಿ ರಹಸ್ಯವಾಗಿ ಧರಿಸುವ “ಬಾಡಿ ಕ್ಯಾಮ್‌’ ಉಪಯೋಗಿಸಿ ಸ್ಥಳೀಯರನ್ನು ಬ್ಲ್ಯಾಕ್‌ಮೇಲ್ ಮಾಡುವ ಹೊಸ ತಂತ್ರ ಅನುಸರಿಸುತ್ತಿರು ವುದು ಬೆಳಕಿಗೆ ಬಂದಿದೆ.

ಉಗ್ರರು ಎಂದು ತಿಳಿಯದೆ ಸ್ಥಳೀಯರು ಸಣ್ಣ ಪುಟ್ಟ ಸಹಾಯ ಮಾಡಿದರೆ ಅದನ್ನು ಬಾಡಿ ಕ್ಯಾಮ್‌ ಮೂಲಕ ಚಿತ್ರೀಕರಿಸುತ್ತಾರೆ. ಅನಂತರ ಆ ವೀಡಿಯೋಗಳನ್ನು ಪ್ರದರ್ಶಿಸಿ ತಮ್ಮ ಪರವಾಗಿ ಕೆಲಸ ಮಾಡದಿದ್ದರೆ ಪೊಲೀಸರಿಗೆ ಅಥವಾ ಸೇನೆಗೆ “ಉಗ್ರರ ಪರ ಕೆಲಸ ಮಾಡುತ್ತಿದ್ದಾರೆ’ ಎಂದು ಮಾಹಿತಿ ನೀಡುವ ಬೆದರಿಕೆ ಒಡ್ಡುತ್ತಾರೆ. ತಮಗೆ ಊಟ, ವಸತಿ ಮತ್ತಿತರ ವ್ಯವಸ್ಥೆಗಳನ್ನು ಮಾಡದಿದ್ದರೆ ಈ ವೀಡಿಯೋಗಳನ್ನು ವೈರಲ್‌ ಮಾಡಿ ಉಗ್ರರೊಂದಿಗೆ ನಂಟು ಹೊಂದಿರುವಂತೆ ಬಿಂಬಿಸುವ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳನ್ನು ಉಲ್ಲೇಖೀಸಿ ಇಂಗ್ಲಿಷ್‌ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಜಮ್ಮು-ಕಾಶ್ಮೀರದ ಬಸಂತ್‌ಘರ್‌ಎಂಬಲ್ಲಿ ಗ್ರಾಮ ರಕ್ಷಣ ಪಡೆಯ ಸಿಬಂದಿಯೊಬ್ಬರನ್ನು ಉಗ್ರರು ಇತ್ತೀಚೆಗೆ ಹತ್ಯೆಗೈದಿದ್ದರು. ಈ ಸಂಬಂಧ ಭದ್ರತ ಪಡೆಗಳು ಉಗ್ರರನ್ನು ಬೆನ್ನಟ್ಟಿದ್ದ ಸಂದರ್ಭದಲ್ಲಿ ಈ ಹೊಸ ತಂತ್ರದ ಬಗ್ಗೆ ಸುಳಿವು ಸಿಕ್ಕಿದೆ. ಕಣಿವೆಯ ಹಲವು ಗ್ರಾಮಗಳಲ್ಲಿ ಉಗ್ರರು ಇದೇ ಮಾದರಿಯಲ್ಲಿ ಸ್ಥಳೀಯರನ್ನು ತಮ್ಮ ಪರವಾಗಿ ಕೆಲಸ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂಬುದಾಗಿ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಣಿವೆಯಲ್ಲಿದ್ದಾರೆ 110 ವಿದೇಶಿ ಉಗ್ರರು
ಕಣಿವೆಯಾದ್ಯಂತ 110 ಮಂದಿ ವಿದೇಶಿ ಉಗ್ರರು ಸಕ್ರಿಯರಾಗಿದ್ದಾರೆ. ಈ ಪೈಕಿ ಉತ್ತರ ಪೀರ್‌ ಪಾಂಜಾಲ್‌ ಶ್ರೇಣಿಯಲ್ಲಿ 60 ಉಗ್ರರು ಸಕ್ರಿಯರಾಗಿದ್ದರೆ, 50 ಮಂದಿ ದಕ್ಷಿಣ ಶ್ರೇಣಿಗಳಲ್ಲಿ ಅಡಗಿದ್ದಾರೆಂದು ಶೋಧ ಕಾರ್ಯಾಚರಣೆ ನಿರತ ಭದ್ರತ ಪಡೆಗಳು ಮಾಹಿತಿ ನೀಡಿವೆ.

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.