![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Mar 29, 2024, 10:45 AM IST
ಹೊಸದಿಲ್ಲಿ: 68ಕ್ಕೂ ಅಧಿಕ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದ ಉತ್ತರಪ್ರದೇಶದ ಐದು ಬಾರಿಯ ಶಾಸಕ, ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿ ಗುರುವಾರ ನಿಧನರಾಗಿದ್ದಾರೆ. ಆದರೆ ಅವರಿಗೆ ವಿಷ ಪ್ರಾಶನ ಮಾಡಲಾಗಿದೆ ಎಂದು ಅನ್ಸಾರಿ ಪುತ್ರ ಆರೋಪಿಸಿದ್ದಾರೆ.
8 ಪ್ರಕರಣಗಳಲ್ಲಿ ದೋಷಿ ಎಂದು ಸಾಬೀತಾಗಿ 2005 ರಿಂದಲೂ ಜೈಲಲ್ಲಿದ್ದ ಅನ್ಸಾರಿ, ಗುರುವಾರ ಸಂಜೆ ರಂಜಾನ್ ಉಪವಾಸ ಮುರಿಯುತ್ತಿದ್ದಂತೆ ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಹೃದಯಾಘಾತದಿಂದ ಕೊನೆಯುಸಿರೆಳೆದರು. ಮಂಗಳವಾರವಷ್ಟೇ ಕಿಬ್ಬೊಟ್ಟೆ ನೋವಿನ ಕಾರಣ 14 ಗಂಟೆ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದರು.
“ಎರಡು ದಿನಗಳ ಹಿಂದೆ, ನಾನು ಅವರನ್ನು (ಮುಖ್ತಾರ್ ಅನ್ಸಾರಿ) ಭೇಟಿಯಾಗಲು ಬಂದಿದ್ದೆ, ಆದರೆ ನನಗೆ ಅವಕಾಶ ನೀಡಲಿಲ್ಲ. ಅವರಿಗೆ ಸ್ಲೋ ಪಾಯ್ಸನ್ ನೀಡಲಾಗುತ್ತಿದೆ ಎಂದು ಹಿಂದೆ ಮತ್ತು ಇಂದಿಗೂ ಹೇಳಿದ್ದೇವೆ. ಮಾರ್ಚ್ 19 ರಂದು ಅವರ ಆಹಾರದಲ್ಲಿ ವಿಷಕಾರಿ ಪದಾರ್ಥವನ್ನು ನೀಡಲಾಗಿದೆ. ನಮಗೆ ಸಂಪೂರ್ಣ ನಂಬಿಕೆ ಇರುವುದರಿಂದ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಅವರು ಹೇಳಿದರು.
ಉಮರ್ ಅನ್ಸಾರಿ ಅವರ ಆರೋಪಗಳನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.