Surat: ಗಣೇಶ ಪೆಂಡಾಲ್ ಮೇಲೆ ಕಲ್ಲು ಎಸೆದ ಬಾಲಕರು; ಪರಿಸ್ಥಿತಿ ಉದ್ವಿಗ್ನ- 27 ಮಂದಿ ಬಂಧನ
Team Udayavani, Sep 9, 2024, 8:33 AM IST
ಸೂರತ್: ಕೆಲ ಅಪ್ರಾಪ್ತ ಬಾಲಕರು ಗಣೇಶ ಪೆಂಡಾಲ್ಗೆ(Ganesh pandal) ಕಲ್ಲು ಎಸೆದ(Stone throwing) ಪರಿಣಾಮ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಘಟನೆ ಗುಜರಾತ್ನ ಸೂರತ್(Surat) ಜಿಲ್ಲೆಯಲ್ಲಿ ಸೋಮವಾರ(ಸೆ.9ರಂದು) ಮುಂಜಾನೆ ನಡೆದಿದೆ.
ನಗರದ ಸಯೀದ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಾವಿರಾರು ಸ್ಥಳೀಯರು ಪೊಲೀಸರಿಗೆ ಆಗ್ರಹಿಸಿದ್ದಾರೆ.
ಪರಿಣಾಮ ಸ್ಥಳೀಯರು ಒಟ್ಟಾಗಿ ರಾದ್ಧಾಂತ ಸೃಷ್ಟಿಸಿದ್ದಾರೆ. ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಕೈಮೀರುವ ಹಂತಕ್ಕೆ ಬಂದಾಗ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಲಾಠಿ ಪ್ರಹಾರವನ್ನು ನಡೆಸಿ, ಆಕ್ರೋಶಗೊಂಡ ಗುಂಪನ್ನು ನಿಯಂತ್ರಿಸಲು ಅಶ್ರುವಾಯು ಪ್ರಯೋಗಿಸಿದ್ದಾರೆ.
“ಕೆಲ ಮಕ್ಕಳು ಗಣೇಶ್ ಪೆಂಡಾಲ್ ಮೇಲೆ ಕಲ್ಲು ತೂರಾಟ ನಡೆಸಿದ್ದು, ಘರ್ಷಣೆ ನಡೆದಿದೆ. ತಕ್ಷಣ ಪೊಲೀಸರು ಆ ಮಕ್ಕಳನ್ನು ಅಲ್ಲಿಂದ ಕರೆದೊಯ್ದರು. ಕೂಡಲೇ ಆ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಯಿತು. ಬೇಕಾದ ಕಡೆಗಳಲ್ಲಿ ಲಾಠಿ ಚಾರ್ಜ್, ಅಶ್ರುವಾಯು ಪ್ರಯೋಗ ನಡೆಸಲಾಗಿದೆ. ಶಾಂತಿ ಕದಡುತ್ತಿದ್ದ ಎಲ್ಲ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಸುತ್ತಮುತ್ತ ಸುಮಾರು 1,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ” ಎಂದು ಸೂರತ್ ಪೊಲೀಸ್ ಕಮಿಷನರ್ ಅನುಪಮ್ ಗೆಹ್ಲೋಟ್ ಹೇಳಿದ್ದಾರೆ.
#WATCH | Gujarat: Surat Police Commissioner Anupam Singh Gehlot says, “Some children pelted stones at a Ganesh pandal after which a clash broke out. The police immediately took away those children from there…Police were immediately deployed in the area. Lathi charge was done in… pic.twitter.com/h3eNyVmIRX
— ANI (@ANI) September 8, 2024
ಒಂದು ಸಮುದಾಯ ಮೊದಲು ಕಲ್ಲು ತೂರಾಟ ನಡೆಸಿದೆ ಆ ಬಳಿಕ ಅತ್ತ ಕಡೆಯಿಂದ ಮತ್ತೊಂದು ಸಮುದಾಯದ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಪೊಲೀಸರಿಗೂ ಗಾಯಗಳಾಗಿವೆ ಎಂದು ಅವರು ಹೇಳಿದ್ದಾರೆ.
ಸದ್ಯದ ಮಾಹಿತಿಯ ಪ್ರಕಾರ ಇದುವರೆಗೆ 27 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.
ಮುಂಜಾನೆ 2.30ರ ಸುಮಾರಿಗೆ ಗುಜರಾತ್ ಗೃಹ ಸಚಿವ ಹರ್ಷ ಸಾಂಘವಿ ಮತ್ತು ಸ್ಥಳೀಯ ಬಿಜೆಪಿ ಶಾಸಕ ಕಾಂತಿ ಬಲರ್ ಕೂಡ ಸ್ಥಳಕ್ಕೆ ಭೇಟಿ ನೀಡಿ, ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಸ್ಥಳೀಯರೊಂದಿಗೆ ಮಾತನಾಡಿದರು.
ಗಣೇಶ ಪೆಂಡಾಲ್ ಮೇಲೆ ಕಲ್ಲು ಎಸೆದ ಆರು ಮಂದಿ ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಕಲ್ಲು ತೂರಾಟಕ್ಕೆ ಪ್ರಚೋದನೆ ನೀಡಿದ 27 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸಾಂಘವಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು
NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!
ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ
Scheme: ದಂಡ ಸಹಿತ ಪಾನ್-ಆಧಾರ್ ಜೋಡಿಸಿದವರು ಆದಾಯ ತೆರಿಗೆ ಪಾವತಿದಾರರ ಪಟ್ಟಿಯಲ್ಲಿ!
RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.