Supreme Court: ಜೈಲುಗಳಲ್ಲಿ ಜಾತಿ ತಾರತಮ್ಯ ನಿಲ್ಲಿಸಿ

ಕರ್ನಾಟಕ ಸೇರಿ 11 ರಾಜ್ಯಗಳಿಗೆ ನ್ಯಾಯಪೀಠ ತಾಕೀತು; 3 ತಿಂಗಳಲ್ಲಿ ನಿಯಮ ಬದಲಿಸಿ ವರದಿ ನೀಡಿ: ಸೂಚನೆ

Team Udayavani, Oct 4, 2024, 6:35 AM IST

Supreme Court: ಜೈಲುಗಳಲ್ಲಿ ಜಾತಿ ತಾರತಮ್ಯ ನಿಲ್ಲಿಸಿ

ಹೊಸದಿಲ್ಲಿ: ಜೈಲುಗಳಲ್ಲಿ ಜಾತಿ ತಾರತಮ್ಯ ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಮತ್ತು ನ್ಯಾ| ಜೆ.ಬಿ. ಪರ್ದಿವಾಲಾ, ನ್ಯಾ| ಮನೋಜ್‌ ಮಿಶ್ರಾ ಅವರನ್ನೊಳ ಗೊಂಡ ನ್ಯಾಯಪೀಠ ಆದೇಶ ನೀಡಿದೆ.

11 ರಾಜ್ಯಗಳ ಜೈಲು ಕೈಪಿಡಿಯಲ್ಲಿ ಜಾತಿ ತಾರತಮ್ಯ ಮಾಡುವ ನಿಯಮ ಗಳಿರುವುದರ ಬಗ್ಗೆಯೂ ತರಾಟೆಗೆ ತೆಗೆದುಕೊಂಡಿದೆ.

ಜೈಲುಗಳಲ್ಲಿ ಕೆಲಸ ಹಂಚುವಾಗ, ಕೈದಿಗಳನ್ನು ವಿಂಗಡಿಸುವಾಗ ಜಾತಿಯನ್ನು ನೋಡಲಾಗುತ್ತಿದೆ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ ಇನ್ನು ಮೂರೇ ತಿಂಗಳಲ್ಲಿ ಸಂಬಂಧಪಟ್ಟ ರಾಜ್ಯಗಳು ತಮ್ಮ ಜೈಲುಗಳಲ್ಲಿನ ಕೈಪಿಡಿಯನ್ನು ಬದಲಿಸಿ, ನ್ಯಾಯಾಲಯಕ್ಕೆ ವರದಿ ನೀಡಬೇಕು ಎಂದು ಸೂಚಿಸಿದೆ.

ಯಾವುದೇ ರಾಜ್ಯಗಳ ಕೈಪಿಡಿಯಲ್ಲಿ ಇಂತಹ ಎಲ್ಲ ನಿಯಮಗಳು ಸಂವಿಧಾನಬಾಹಿರ. ಸದಾ ಅಪರಾಧ ಎಸಗುವವರನ್ನು ಅದೇ ರೀತಿಯ ಕಾನೂನಿನಡಿ ನಡೆಸಿಕೊಳ್ಳಬೇಕು. ಒಂದು ವೇಳೆ ಅಂತಹವರನ್ನು ಜಾತಿ ಆಧಾರಿತವಾಗಿ ನಡೆಸಿಕೊಂಡಿದ್ದರೆ ಅದು ಅಸಾಂವಿಧಾನಿಕ ಎಂದು ನ್ಯಾಯಪೀಠ ಹೇಳಿದೆ. ಮಾತ್ರವಲ್ಲ ಸರ್ವೋಚ್ಚ ಪೀಠ ಜೈಲುಗಳಲ್ಲಿ ಜಾತಿ ಆಧಾರಿತವಾಗಿ ನಡೆಯುತ್ತಿರುವ ಘಟನೆಗಳನ್ನು ಸ್ವಪ್ರೇರಿತವಾಗಿ ಗುರುತಿಸಲು ನಿರ್ಧರಿಸಿದೆ.

ಈ ಬಗ್ಗೆ ಒಂದು ನೋಂದಣಿ ಪುಸ್ತಕವನ್ನೇ ತೆರೆಯುವಂತೆ ಸೂಚಿಸಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಲ, ಮಧ್ಯಪ್ರದೇಶ, ಆಂಧ್ರಪ್ರದೇಶ, ಒಡಿಶಾ, ಕೇರಳ, ಮಹಾರಾಷ್ಟ್ರ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶಗಳ ಜೈಲು ನಿಯಮಾವಳಿಗಳನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಕೆಲವು ರಾಜ್ಯಗಳ ಬಂದೀಖಾನೆಗಳಲ್ಲಿ ಕಾರ್ಮಿಕರಿಗೆ ಅವರ ಗುರುತಿನ ಆಧಾರದಲ್ಲಿ ಪ್ರತ್ಯೇಕ ಬ್ಯಾರಕ್‌ಗಳಿವೆ. ವಸಾಹತುಶಾಹಿ ಕಾಲದ ಕಾನೂನುಗಳು, ಈಗಲೂ ಪರಿಣಾಮ ಬೀರುತ್ತಿವೆ. ಸಂವಿಧಾನದ ನಿಯಮಗಳು ಸಮಾನತೆಯನ್ನು ಎತ್ತಿಹಿಡಿಯಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಹೇಳಿದ್ದಾರೆ.

ಯಾಕೆ ಈ ತೀರ್ಪು?
ಜೈಲುಗಳಲ್ಲಿ ಜಾತಿ ನೋಡಿ ಹಲವು ಕೆಲಸ ನೀಡಲಾಗುತ್ತದೆ. ಜತೆಗೆ ಜಾತಿಯ ಆಧಾರದಲ್ಲಿ ಕೊಠಡಿಗಳನ್ನು ನೀಡಲಾಗುತ್ತದೆ ಎಂದು ಆರೋಪಿಸಲಾಗಿತ್ತು. ಬಂಗಾಲದ ಜೈಲುಗಳಲ್ಲಿ ಅಡುಗೆ ಸೇರಿದಂತೆ ಆಯ್ದ ಕೆಲಸಗಳನ್ನು ಮೇಲು ಜಾತಿಯವರೇ ಮಾಡು ತ್ತಾರೆ ಎಂದು ಆರೋಪಿಸಲಾಗಿತ್ತು.

ಟಾಪ್ ನ್ಯೂಸ್

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Navaratri Special:  ನಮ್ಮೊಳಗಿನ ರಾವಣನ ಸುಡುವುದೆಂತು…?

Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?

GST

GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

ರಾಜೀನಾಮೆಗೆ ಸಿದ್ಧ , ನೀವೂ ಕೊಡುತ್ತೀರಾ?: ಅಶೋಕ್‌ ಸವಾಲು

BJP: ರಾಜೀನಾಮೆಗೆ ಸಿದ್ಧ , ನೀವೂ ಕೊಡುತ್ತೀರಾ?: ಅಶೋಕ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST

GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?

1-treee

Google ಜತೆ ಬೆಂಗಳೂರಿನ ಕ್ಲೀನ್‌ಮ್ಯಾಕ್ಸ್‌ ಸಹಯೋಗ: ಪವನ ವಿದ್ಯುತ್‌ ಉತ್ಪಾದನೆ

train-track

Railway; 5 ವರ್ಷದಲ್ಲಿ 200 ರೈಲು ಅಪಘಾ*ತಗಳು, 351 ಮಂದಿ ಸಾ*ವು: ವರದಿ

supreem

ವೈವಾಹಿಕ ಅತ್ಯಾಚಾ*ರ ಅಪರಾಧ: ಕೇಂದ್ರ ಸರಕಾರದಿಂದ ವಿರೋಧ

Modi 2

Karnataka ಕಾಂಗ್ರೆಸ್‌ ಸರಕಾರದ ವೈಫ‌ಲ್ಯ ಜನರು ನೋಡಿದ್ದಾರೆ: ಹರಿಯಾಣದಲ್ಲಿ ಮೋದಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Navaratri Special:  ನಮ್ಮೊಳಗಿನ ರಾವಣನ ಸುಡುವುದೆಂತು…?

Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?

GST

GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.