Delhi: ಕ್ಲಾಸ್ ತಪ್ಪಿಸಲು ಇಮೇಲ್ ಮೂಲಕ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 14ವರ್ಷದ ವಿದ್ಯಾರ್ಥಿ
Team Udayavani, Aug 3, 2024, 12:46 PM IST
ನವದೆಹಲಿ: ದೇಶದಲ್ಲಿ ಇತ್ತೀಚೆಗೆ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ಶಾಲೆ, ಆಸ್ಪತ್ರೆ, ವಿಮಾನ ನಿಲ್ದಾಣಗಳಲ್ಲಿ ಬಾಂಬ್ ಇದೆ ಎಂದು ಇಮೇಲ್ ಮೂಲಕ ಬೆದರಿಕೆ ಹಾಕುವಂತಹ ಹಲವಾರು ಘಟನೆಗಳನ್ನು ನಾವು ನೋಡಿದ್ದೇವೆ ಅದರಂತೆ ಶುಕ್ರವಾರ(ಆಗಸ್ಟ್ 2) ದಂದು ದೆಹಲಿಯ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಬಂದಿರುವುದು ಗೊತ್ತೇ ಇದೆ. ದಕ್ಷಿಣ ದೆಹಲಿಯ ಸಮ್ಮರ್ ಫೀಲ್ಡ್ಸ್ ಶಾಲೆಗೆ ಗುರುವಾರ ಮಧ್ಯರಾತ್ರಿ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ.
ಶುಕ್ರವಾರ ಶಾಲೆಗೆ ಬಂದ ಶಾಲಾ ಆಡಳಿತ ಮಂಡಳಿ ಮೇಲ್ ಅನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಆದರೆ ಎಲ್ಲೂ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ
ಇದಾದ ಬಳಿಕ ಇದೊಂದು ಸುಳ್ಳು ಬೆದರಿಕೆ ಎಂಬುದು ತನಿಖೆ ನಡಿಸಿದ ಪೊಲೀಸರಿಂದ ಬೆಳಕಿಗೆ ಬಂದಿದೆ. ಅಷ್ಟು ಮಾತ್ರವಲ್ಲದೆ ಬೆದರಿಕೆ ಇಮೇಲ್ ಕಳುಹಿಸಿದ ವ್ಯಕ್ತಿ ಬೇರೆ ಯಾರೂ ಅಲ್ಲ ಇದೆ ಶಾಲೆಯಲ್ಲಿ ಕಲಿಯುತ್ತಿರುವ ಹದಿನಾಲ್ಕು ವರ್ಷದ ಬಾಲಕ ಎಂಬುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಬಾಲಕನನ್ನು ತನಿಖೆಗೆ ಒಳಪಡಿಸಿದ ವೇಳೆ ತನಗೆ ಶಾಲೆಗೆ ಹೋಗಲು ಮನಸ್ಸಿರಲಿಲ್ಲ ಹಾಗಾಗಿ ಏನು ಮಾಡುವುದು ಎಂದು ಆಲೋಚನೆ ಮಾಡುವಾಗ ಬಾಂಬ್ ಬೆದರಿಕೆ ಹಾಕಿದರೆ ಎಂದು ಆಲೋಚಿಸಿ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಇಮೇಲ್ ಕಳುಹಿಸಿರುವುದಾಗಿ ಹೇಳಿಕೊಂಡಿದ್ದಾನೆ. ಅಲ್ಲದೆ ಯಾರಿಗೂ ಅನುಮಾನ ಬರಬಾರದೆಂದು ತನ್ನ ಶಾಲೆಯ ಜೊತೆಗೆ ಇತರ ಎರಡು ಶಾಲೆಗಳ ಹೆಸರನ್ನು ಮೇಲ್ನಲ್ಲಿ ಉಲ್ಲೇಖಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Wayanad; 358ಕ್ಕೇರಿದ ಮೃತರ ಸಂಖ್ಯೆ, ಆಹಾರವಿಲ್ಲದೆ ಕಾಡಿನಲ್ಲಿ ಅಲೆದಾಡುತ್ತಿದ್ದ ಕುಟುಂಬ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.