Sudan Clash: ಸೂಡಾನ್ ಸಂಘರ್ಷ ಭಾರತೀಯರಿಗೆ ಭೀತಿ
Team Udayavani, Apr 20, 2023, 7:42 AM IST
ಹೊಸದಿಲ್ಲಿ: ಸಂಘರ್ಷಪೀಡಿತ ಸೂಡಾ ನ್ನಲ್ಲಿ ಸತತ 5ನೇ ದಿನವೂ ಸೇನಾ ಪಡೆಗಳ ನಡುವಿನ ಭೀಕರ ಕಾಳಗ ಮುಂದುವರಿದಿದೆ. ಒಂದೆಡೆ ಪರಿಸ್ಥಿತಿ ವಿಕೋಪಕ್ಕೇರಿದ್ದರೆ ಮತ್ತೂಂದೆಡೆ ಸೂಡಾ ನ್ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಅತಂತ್ರವಾಗಿದ್ದು, ಅವರ ಸುರಕ್ಷತೆಗಾಗಿ ಭಾರತ ನೆರೆ ರಾಷ್ಟ್ರಗಳ ನೆರವು ಕೋರಿದೆ.
ಈಗಾಗಲೇ ಸಂಘರ್ಷದಲ್ಲಿ ಭಾರತೀ ಯರೊಬ್ಬರು ಮೃತಪಟ್ಟಿದ್ದು, ಕರ್ನಾಟಕ ಬುಡಕಟ್ಟು ಜನಾಂಗದ 31 ಮಂದಿಯ ಸಹಿತ ಹಲವಾರು ಭಾರತೀಯರು ಪ್ರದೇಶದಲ್ಲಿ ಸಿಲುಕಿದ್ದಾರೆ. ಆದರೆ ಯುದ್ಧ ಸಂದರ್ಭ ಹಿನ್ನೆಲೆ ಪ್ರಜೆಗಳ ಸ್ಥಳಾಂತರ ಸಾಧ್ಯವಿಲ್ಲದ ಕಾರಣ, ತತ್ಕ್ಷಣಕ್ಕೆ ಅಗತ್ಯವಿರುವ ಸ್ಥಳೀಯ ನೆರವು ನೀಡಲು ಭಾರತ ಸರಕಾರ ಮುಂದಾಗಿದೆ.
ಈ ನಿಟ್ಟಿನಲ್ಲಿ ಭಾರತದ ವಿದೇಶಾಂಗ ಸಚಿವಾಲಯವು ಅಮೆರಿಕ, ಸೌದಿ, ಯುಎಇ, ಬ್ರಿಟನ್ಗಳ ನೆರವು ಕೋರಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಭಾರತೀಯ ರಾಯಭಾರ ಕಚೇರಿ ಕೂಡ ಸಿಲುಕಿರುವ ಭಾರತೀಯರ ಜತೆಗೆ ನಿರಂತರ ಸಂಪರ್ಕದಲ್ಲಿದ್ದು, ಸೂಚನೆ ಗಳನ್ನು ನೀಡುತ್ತಿದೆ. ಅಲ್ಲದೇ ಅಗತ್ಯಸೇವೆ ಗಳನ್ನು ಪೂರೈಸುವ ನಿಟ್ಟಿನಲ್ಲಿ ಸಹಾಯ ವಾಣಿಯನ್ನೂ ಸ್ಥಾಪಿಸಿದೆ. ಕದನ ವಿರಾಮ ಮಾಡುವಂತೆ ವಿಶ್ವಸಂಸ್ಥೆಯ ಮನವಿಗೂ ಬಂಡುಕೋರರು ಸ್ಪಂದಿಸಿಲ್ಲ.
ಸಿದ್ದರಾಮಯ್ಯ ಪರ ಜೈರಾಮ್
ಸೂಡಾನ್ನಲ್ಲಿ ಸಿಲುಕಿರುವ ಕರ್ನಾಟಕ ಮೂಲದ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ 31 ಮಂದಿಯನ್ನು ಮರಳಿ ಕರೆತರಲು ಮನವಿ ಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್, ಪರಿಸ್ಥಿತಿಯನ್ನು ನಿಮ್ಮ ಲಾಭಕ್ಕೆ ಬಳಸಿಕೊಳ್ಳಬೇಡಿ ಎಂದಿದ್ದರು. ಈ ಬಗ್ಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಕ್ಷೇಪ ವ್ಯಕ್ತಪಡಿಸಿ, ಜೈಶಂಕರ್ ಅವರನ್ನು ಬಹಳ ಹಿಂದಿನಿಂದ ನೋಡುತ್ತಿದ್ದೆ. ಆದರೆ ಅವರ ವರ್ತನೆ ಈಗ ಅಸಹ್ಯವೆನಿಸುತ್ತಿದೆ ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.