North India; ಬಿಸಿಲ ಹೊಡೆತ: ಎಸಿ, ಕೂಲರ್ ಮಾರಾಟ ದುಪ್ಪಟ್ಟು
ಕೇರಳದಲ್ಲಿ ಮುಂಗಾರು ಚುರುಕು: 3 ಜಿಲ್ಲೆಗಳಿಗೆ ರೆಡ್ ಅಲರ್ಟ್
Team Udayavani, Jun 2, 2024, 6:37 AM IST
ಹೊಸದಿಲ್ಲಿ: ಉತ್ತರ ಮತ್ತು ಕೇಂದ್ರ ಭಾರತದಲ್ಲಿ ತಾಪಮಾನ ಏರಿರುವುದರಿಂದ ಮಾರ್ಚ್ನಿಂದ ಮೇ ನಡುವೆ ಎಸಿ ಮತ್ತು ಕೂಲರ್ಗಳ ಮಾರಾಟ ದುಪ್ಟಟ್ಟಾ ಗಿದೆ ಎಂದು ಇ ಕಾಮರ್ಸ್ ಕಂಪೆನಿಗಳು ಮತ್ತು ಉತ್ಪಾದಕ ಕಂಪೆನಿಗಳು ಹೇಳಿವೆ. ಹಲವು ನಗರಗಳಲ್ಲಿ ತಾಪಮಾನ 50 ಡಿ.ಸೆ. ಮುಟ್ಟುವ ನಿರೀಕ್ಷೆಯಿದೆ.
ಬಿಸಿಲಿನ ಹೊಡೆತಕ್ಕೆ ತತ್ತರಿಸಿರುವ ಜನರು ಎಸಿ, ಕೂಲರ್ಗಳನ್ನು ಕೊಳ್ಳುತ್ತಿದ್ದಾರೆ. ಬೆಂಗಳೂರು, ಪುಣೆ, ಲಕ್ನೋದಲ್ಲೂ ಮಾರ್ಚ್ ತಿಂಗಳ ಬಳಿಕ ಎಸಿ, ಕೂಲರ್ಗಳಿಗೆ ಭಾರೀ ಬೇಡಿಕೆ ಬಂದಿದೆ ಎಂದು ಫ್ಲಿಪ್ಕಾರ್ಟ್ ಹೇಳಿರುವುದಾಗಿ ವರದಿಯಾಗಿದೆ. ಮೇಯಲ್ಲೇ ಎಸಿ, ಕೂಲರ್ಗಳ ದುಪ್ಪಟ್ಟು ಬೇಡಿಕೆ ಬಂದಿದೆ. ದಕ್ಷಿಣ ಮತ್ತು ಪೂರ್ವ ವಲಯಗಳಲ್ಲಿ ಬೇಡಿಕೆ ಏರಿದ್ದರಿಂದ ಎಪ್ರಿಲ್ನಲ್ಲಿ ಮಾರಾಟ ಹೆಚ್ಚಾಗಿತ್ತು. ಉತ್ತರ ಮತ್ತು ಪೂರ್ವ ಮೆಟ್ರೋ ನಗರಗಳು, ಟೈಯರ್-1 ನಗರ ಗಳಲ್ಲಿ ಮೇ ತಿಂಗಳಲ್ಲಿ ಮಾರಾಟ ಬಿರುಸಾಗಿತ್ತು.
ಕೇರಳದಲ್ಲಿ ಮುಂಗಾರು ಚುರುಕು: 3 ಜಿಲ್ಲೆಗಳಿಗೆ ರೆಡ್ ಅಲರ್ಟ್
ತಿರುವನಂತಪುರ: ಕೇರಳ ಪ್ರವೇಶದ ಬಳಿಕ 2 ದಿನಗಳ ಕಾಲ ದುರ್ಬಲಗೊಂಡಿದ್ದ ನೈಋತ್ಯ ಮುಂಗಾರು ಶನಿವಾರ ಚುರುಕಾಗಿದೆ. ನೈಋತ್ಯ ಮಾರುತದ ಪ್ರಭಾವದಿಂದಾಗಿ ಕೇರಳದಲ್ಲಿ ಧಾರಾಕಾರ ಮಳೆ ಸುರಿಯಲಾರಂಭಿಸಿದ್ದು, ದಕ್ಷಿಣ, ಕೇಂದ್ರ ಜಿಲ್ಲೆಗಳಲ್ಲಿ ಹಲವು ಪ್ರದೇಶಗಳು ಮುಳುಗಡೆಯಾಗಿ, ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊಟ್ಟಾಯಂ, ಇಡುಕ್ಕಿ ಜಿಲ್ಲೆಗಳಲ್ಲಿ ಭಾರೀ ಮಳೆಗೆ ಮರಗಳು ಬುಡಮೇಲಾಗಿದ್ದು, ಟ್ರಾಫಿಕ್ ಸಮಸ್ಯೆ ಎದುರಾಗಿದೆ. ಇಡುಕ್ಕಿಯಲ್ಲಿರುವ ಮಲಂಕರ ಅಣೆಕಟ್ಟಿನ 5 ಗೇಟ್ಗಳನ್ನು ತೆರೆಯಲಾಗಿದೆ. ವಡವತ್ತೂರ್ನಲ್ಲಿ ಶುಕ್ರವಾರ ರಾತ್ರಿಯವರೆಗೆ 10 ಸೆ.ಮೀ., ಕೊಟ್ಟಾಯಂನಲ್ಲಿ 9 ಸೆ.ಮೀ. ಮಳೆಯಾಗಿದೆ. ತೃಶೂರು, ಮಲಪ್ಪುರಂ, ಕಲ್ಲಿಕೋಟೆ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.