Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
Team Udayavani, May 4, 2024, 6:58 AM IST
ಹೊಸದಿಲ್ಲಿ: ಸಹಿಷ್ಣುತೆ, ಹೊಂದಾಣಿಕೆ ಮತ್ತು ದಂಪತಿ ಒಬ್ಬರ ಬಗ್ಗೆ ಮತ್ತೂಬ್ಬರು ಪರಸ್ಪರ ಹೊಂದಿರುವ ಗೌರವವೇ ಸುಖ ದಾಂಪತ್ಯದ ಅಡಿಪಾಯ. ಸಣ್ಣಪುಟ್ಟ ಜಗಳ ಮತ್ತು ಕ್ಷುಲ್ಲಕ ಭಿನ್ನಾಭಿಪ್ರಾಯಗಳನ್ನು ಉತ್ಪ್ರೇಕ್ಷೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಸಲಹೆ ನೀಡಿದೆ.
ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಹಾಗೂ ನ್ಯಾ| ಮನೋಜ್ ಮಿಶ್ರಾ ಅವರ ನ್ಯಾಯಪೀಠವು ಮಹಿಳೆಯೊಬ್ಬರು ವರದಕ್ಷಿಣೆ ಕಿರುಕುಳ ಸಂಬಂಧಿಸಿದಂತೆ ತಮ್ಮ ಪತಿಯ ವಿರುದ್ಧ ದಾಖಲಿಸಿದ್ದ ಅರ್ಜಿಯನ್ನು ವಜಾಗೊಳಿಸುವ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
“ಪ್ರತಿ ದಾಂಪತ್ಯದಲ್ಲಿಯೂ ಸಣ್ಣ ಪುಟ್ಟ ಜಗಳಗಳನ್ನು ಮನ್ನಿಸುವ ಒಬ್ಬರನ್ನೊಬ್ಬರು ಗೌರವಿಸುವ ಗುಣಗಳು ಅಂಗತರ್ಗವಾಗಿರಬೇಕು. ಕ್ಷುಲ್ಲಕ ಭಿನ್ನಾಭಿಪ್ರಾಯ ಗಳು, ಜಗಳಗಳು ಸಾಮಾನ್ಯ. ಅವುಗಳನ್ನು ದೊಡ್ಡದು ಮಾಡಿದರೆ ಸ್ವರ್ಗದಲ್ಲೇ ನಿಶ್ಚಯವಾಗಿದೆ ಎಂದು ನಂಬುವಂಥ ಮದುವೆಗಳನ್ನು ಹಾಳುಮಾಡಿದಂತಾ ಗುತ್ತದೆ’ ಎಂದಿದೆ. ಜತೆಗೆ ಬಹಳಷ್ಟು ಬಾರಿ ವಿವಾಹಿತ ಮಹಿಳೆಯ ಪೋಷಕರು ಮತ್ತು ಹತ್ತಿರದ ಸಂಬಂಧಿಗಳೇ ದಂಪತಿ ನಡುವೆ ಇರುವ ಕಡ್ಡಿಯನ್ನು ಗುಡ್ಡ ಮಾಡುತ್ತಾರೆ ಇದು ಸರಿಯಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.