“ಕೋವಿಡ್’ ವೈದ್ಯರಿಗೆ ರಜೆ ನೀಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಸಲಹೆ


Team Udayavani, Dec 15, 2020, 8:59 PM IST

“ಕೋವಿಡ್’ ವೈದ್ಯರಿಗೆ ರಜೆ ನೀಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಸಲಹೆ

ಹೊಸದಿಲ್ಲಿ: ಏಳೆಂಟು ತಿಂಗಳಿಂದ ವಿರಮಿಸದೆ ಕೆಲಸ ಮಾಡುತ್ತಿರುವ ವೈದ್ಯರಿಗೆ ಒಂದಷ್ಟು ವಿಶ್ರಾಂತಿ ನೀಡಿ. ಇಲ್ಲದಿದ್ದರೆ ಅವರ ಮಾನಸಿಕ ಆರೋಗ್ಯದ ಮೇಲೆ ಅಡ್ಡಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಸುಪ್ರೀಂ ಕೋರ್ಟ್‌ ಸರಕಾರಕ್ಕೆ ಸೂಚಿಸಿದೆ.

ದೇಶದಲ್ಲಿ ಮಾರ್ಚ್‌ನಲ್ಲಿ ಕೊರೊನಾ ಕಾಣಿಸಿಕೊಂಡು, ಅನಂತರ ಬಹಳಷ್ಟು ಏರಿಕೆಯಾಗಿದೆ. ಅಂದಿನಿಂದ ಇಂದಿನ ವರೆಗೂ ಜನರ ಜೀವ ಉಳಿಸುವಲ್ಲಿ ವೈದ್ಯರ ಪರಿಶ್ರಮ ಕಡಿಮೆಯೇನಲ್ಲ. ಆದರೆ ಅವರಿಗೇ ವಿಶ್ರಾಂತಿ ನೀಡದಿದ್ದರೆ ಕಷ್ಟ. ಈ ಬಗ್ಗೆ ನಮಗೆ ನೋವುಂಟಾಗಿದೆ. ಹೀಗಾಗಿ ಅವರಿಗೆ ವಿರಾಮ ನೀಡುವ ಬಗ್ಗೆ ಕೇಂದ್ರ ಸರಕಾರ ನಿರ್ಧರಿಸಬೇಕು ಎಂದು ಅಡಿಶನಲ್‌ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರಿಗೆ ಕೋರ್ಟ್‌ ಸೂಚಿಸಿತು.

ಕೊರೊನಾ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು ಮತ್ತು ಕೊರೊನಾದಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯಸಂಸ್ಕಾರ ಒದಗಿಸಬೇಕು ಎಂಬ ಮನವಿ ಕುರಿತು ಸ್ವಯಂಪ್ರೇರಿತವಾಗಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿರುವ ಸರ್ವೋಚ್ಚ ನ್ಯಾಯಾಲಯವು, ಕೇಂದ್ರ ಸರಕಾರ ಮತ್ತು ಗುಜರಾತ್‌ ಸರಕಾರಗಳ ವಿರುದ್ಧ ಕಿಡಿಕಾರಿತು. ಗುಜರಾತ್‌ನಲ್ಲಿ ಮಾಸ್ಕ್ ಧರಿಸದಿರುವ ವ್ಯಕ್ತಿಗಳಿಂದ 90 ಕೋ.ರೂ. ದಂಡ ಸಂಗ್ರಹಿಸಿರುವ ಬಗ್ಗೆಯೂ ಕಿಡಿಕಾರಿತು.

ಹಿಂದೆಯೂ ವೈದ್ಯರ ಪರ ನಿಂತಿದ್ದ ಕೋರ್ಟ್‌
ಸುಪ್ರೀಂ ಕೋರ್ಟ್‌ ಕೊರೊನಾ ಆರಂಭವಾದ ಮೇಲೆ ಹಲವಾರು ಬಾರಿ ವೈದ್ಯರ ಪರವಾಗಿ ನಿಂತಿದೆ. ಜನರಿಗೆ ಅನ್ವಯವಾಗುವಂಥ ಕ್ವಾರಂಟೈನ್‌ ನಿಯಮ ವೈದ್ಯರಿಗೆ ಅನ್ವಯವಾಗುವುದಿಲ್ಲ. ವೈದ್ಯರಿಗೆ ಸರಿಯಾದ ಸಮಯಕ್ಕೆ ವೇತನ ನೀಡಬೇಕು. ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಬೆದರಿಕೆ ಹಾಕಬಾರದು ಎಂಬಿತ್ಯಾದಿ ಮಹತ್ವದ ಆದೇಶಗಳನ್ನು ಅದು ಹೊರಡಿಸಿತ್ತು.

ಚೀಟಿ ಕೊಡಿ, ಜಾಹೀರಾತು ಬೇಡ
ಆಯುರ್ವೇದ ವೈದ್ಯರ ಬಗ್ಗೆಯೂ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶಹೊರಡಿಸಿದೆ. ಆಯುಷ್‌ ವೈದ್ಯರು ಕೊರೊನಾ ರೋಗಿಗಳಿಗೆ ಸರಕಾರ ಒಪ್ಪಿರುವಂಥ ಟ್ಯಾಬ್ಲೆಟ್‌ಗಳು, ರೋಗನಿರೋಧಕ ಶಕ್ತಿ ಹೆಚ್ಚಿಸುವಂಥ ಮಾತ್ರೆಗಳನ್ನು ನೀಡಬಹುದು ಎಂದು ಹೇಳಿದೆ. ಆದರೆ ಈ ಮಾತ್ರೆಗಳಿಂದಲೇ ಕೊರೊನಾ ಗುಣಮುಖವಾಗುತ್ತದೆ ಎಂಬ ಜಾಹೀರಾತು ನೀಡುವಂತಿಲ್ಲ ಎಂದು ಸೂಚಿಸಿದೆ.
ಕೇರಳ ಹೈಕೋರ್ಟ್‌ ಆ. 21ರಂದು ಆಯುರ್ವೇದ ವೈದ್ಯರು ಕೊರೊನಾಕ್ಕೆ ಔಷಧಿ ಬರೆದುಕೊಡುವಂತಿಲ್ಲ ಎಂಬ ತೀರ್ಪು ನೀಡಿತ್ತು. ಈ ತೀರ್ಪಿನ ಕೆಲವು ಅಂಶ ಸುಪ್ರೀಂ ಕೋರ್ಟ್‌ ಬದಲಿಸಿದೆ.

ಟಾಪ್ ನ್ಯೂಸ್

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

terror attack on Army camp in Jammu and Kashmir’s Rajouri

Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

NEET-UG Counselling: ನೀಟ್‌-ಯುಜಿ ಕೌನ್ಸೆಲಿಂಗ್‌ ಈ ಮಾಸಾಂತ್ಯಕ್ಕೆ ಆರಂಭ?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

7-yellapura

Yellapura: ನಿಯಂತ್ರಣ ತಪ್ಪಿದ ಕಂಟೈನರ್‌ ಲಾರಿ; ತಪ್ಪಿದ ಅನಾಹುತ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

5-vitla

Vitla: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.