ಖಾಪ್‌ಗೆ ಕಡಿವಾಣ: ವಯಸ್ಕರ ಮದುವೆಯಲ್ಲಿ ಹಸ್ತಕ್ಷೇಪ ಸಲ್ಲ ಎಂದ ಸುಪ್ರೀಂ


Team Udayavani, Mar 28, 2018, 9:10 AM IST

Khap-Panchayat-27-3.jpg

ನವದೆಹಲಿ: ಇಬ್ಬರು ವಯಸ್ಕರ ಮದುವೆ ವಿಚಾರದಲ್ಲಿ ಖಾಪ್‌ ಪಂಚಾಯತ್‌ಗಳು ಮೂಗು ತೂರಿಸುವಂತಿಲ್ಲ ಎಂಬ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್‌ ನೀಡಿದೆ. ಇದರಿಂದಾಗಿ, ಖಾಪ್‌ ಪಂಚಾಯತ್‌ನಂಥ ಸ್ವಘೋಷಿತ ನ್ಯಾಯಾಲಯಗಳಿಂದ ಬೆದರಿಕೆ ಎದುರಿಸುತ್ತಿದ್ದ ಅಂತರ್‌ಜಾತಿ, ಅಂತರ್‌ಧರ್ಮೀಯ ಜೋಡಿಗಳು ನಿಟ್ಟುಸಿರು ಬಿಡುವಂತಾಗಿದೆ.

ಇಬ್ಬರು ವಯಸ್ಕರು ಮದುವೆಯಾಗಲು ನಿಶ್ಚಯಿಸಿದರೆ, ಅವರ ಸಂಬಂಧಿಗಳಾಗಲೀ, ಮೂರನೇ ವ್ಯಕ್ತಿಯಾಗಲೀ, ಖಾಪ್‌ ಪಂಚಾಯತ್‌ಗಳಾಗಲೀ ಹಸ್ತಕ್ಷೇಪ ಮಾಡುವುದು, ಬೆದರಿಕೆ ಹಾಕುವುದು ಅಥವಾ ಹಿಂಸಿಸುವುದು ಕಾನೂನು ಬಾಹಿರ. ಇಂಥ ಕೃತ್ಯಗಳು ಸಮಾ ಜದ ಮೇಲೆ ವಿಧ್ವಂಸಕ ಪರಿಣಾಮ ಬೀರಲಿದೆ  ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಪೀಠ ಹೇಳಿದೆ. ಜತೆಗೆ, ಮರ್ಯಾದಾ ಹತ್ಯೆಗಳು ಮಾನವನ ಘನತೆಯ ಮೇಲಿನ ಹಲ್ಲೆ. ಖಾಪ್‌ ಗಳು ಜೂಲಿಯಸ್‌ ಸೀಸರ್‌ ನ ಪೂರ್ವಜರೇನೂ ಅಲ್ಲವಲ್ಲ ಎಂದೂ ಪೀಠ ಖಾರವಾಗಿ ನುಡಿದಿದೆ. ಅಲ್ಲದೆ, ಇಂಥ ಹಸ್ತಕ್ಷೇಪಗಳನ್ನು ತಡೆಯಲು ಮಾರ್ಗಸೂಚಿಗಳನ್ನೂ ನ್ಯಾಯಪೀಠ ರಚಿಸಿದ್ದು, ಸೂಕ್ತ ಕಾನೂನು ಜಾರಿ ಆಗುವವರೆಗೆ ಈ ಮಾರ್ಗಸೂಚಿ ಚಾಲ್ತಿಯಲ್ಲಿರುತ್ತವೆ ಎಂದಿದೆ. ಇದೇ ವೇಳೆ, ‘ಖಾಪ್‌ ಪಂಚಾಯತ್‌’ಗಳನ್ನು ಈ ಹೆಸರಿಂದ ಕರೆಯುವುದಿಲ್ಲ ಎಂದಿರುವ ಪೀಠ, ಇವುಗಳನ್ನು ಕೆಲವು ವ್ಯಕ್ತಿಗಳ ಗುಂಪು ಎಂದು ಪರಿಗಣಿಸುವುದಾಗಿ ಹೇಳಿದೆ. ಜತೆಗೆ, ಇಂಥ ವ್ಯಕ್ತಿಗಳು ಗುಂಪುಗೂಡುವುದನ್ನು ತಡೆಯಲು ಸೆಕ್ಷನ್‌ 144 ಬಳಸುವಂತೆಯೂ ಸೂಚಿಸಿದೆ.

ಕೇಂದ್ರದಿಂದಲೂ ಬೆಂಬಲ: ಮರ್ಯಾದಾ ಹತ್ಯೆಗಳಿಂದ ದಂಪತಿಗಳಿಗೆ ರಕ್ಷಣೆ ಕೋರಿ ಶಕ್ತಿ ವಾಹಿನಿ ಎಂಬ NGO 2010ರಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ವೇಳೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸರ್ಕಾರ, ಇಂಥ ದಂಪತಿಗಳಿಗೆ ಆಯಾ ರಾಜ್ಯ ಸರ್ಕಾರಗಳು ರಕ್ಷಣೆ ಒದಗಿಸಬೇಕು. ಅಲ್ಲದೆ, ಬೆದರಿಕೆ ಎದುರಿಸುತ್ತಿರುವಂಥ ವ್ಯಕ್ತಿಗಳು ಆ ಕುರಿತು ದೂರು ನೀಡಬೇಕು ಎಂದು ಹೇಳಿತ್ತು. 

ಏನಿದು ಖಾಪ್‌ ಪಂಚಾಯತ್‌? ಒಂದು ಸಮುದಾಯ ಅಥವಾ ಜಾತಿಯನ್ನು ಪ್ರತಿನಿಧಿಸುವ ಸಮೂಹ ಇದಾಗಿದ್ದು, ಉತ್ತರ ಭಾರತದ ಬಹುತೇಕ ಗ್ರಾಮಗಳಲ್ಲಿ ಇವು ಅಸ್ತಿತ್ವದಲ್ಲಿವೆ. ಇವುಗಳು ಅರೆ – ನ್ಯಾಯಾಂಗ ಸಂಸ್ಥೆಗಳಂತೆ ವರ್ತಿಸುವುದಲ್ಲದೆ, ಹಲವು ಬಾರಿ ಪ್ರಾಚೀನ ಸಂಪ್ರದಾಯದ ಹೆಸರಲ್ಲಿ ಕಠಿಣ ಶಿಕ್ಷೆಗಳನ್ನೂ ಘೋಷಿಸಿದ್ದಿದೆ. ಹರ್ಯಾಣ, ಉತ್ತರಪ್ರದೇಶ, ರಾಜಸ್ಥಾನದಂಥ ರಾಜ್ಯಗಳಲ್ಲಿ ಖಾಪ್‌ ಪಂಚಾಯತ್‌ಗಳ ಪ್ರಭಾವ ಹೆಚ್ಚಿದ್ದು, ಪ್ರೇಮಿಗಳು, ಆಧುನಿಕ ಮನಸ್ಥಿತಿ ಹೊಂದಿರುವ ಯುವಜನರು, ಮಹಿಳೆಯರು ಇವುಗಳಿಂದ ಶಿಕ್ಷೆಗೆ ಒಳಗಾದ ಅನೇಕ ಪ್ರಕರಣಗಳು ವರದಿಯಾಗಿವೆ.

ಒಂದೇ ಗೋತ್ರದವರ ವಿವಾಹಕ್ಕೆ ಅವಕಾಶ ಇಲ್ಲ
ಸುಪ್ರೀಂಕೋರ್ಟ್‌ ತೀರ್ಪಿಗೆ ಖಾಪ್‌ ಪಂಚಾಯತ್‌ಗಳ ಮುಖ್ಯಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಒಂದೇ ಗೋತ್ರ ಅಥವಾ ಒಂದೇ ಗ್ರಾಮದವರ ನಡುವೆ ವಿವಾಹಕ್ಕೆ ಅವಕಾಶ ನೀಡುವುದಿಲ್ಲ. ಏಕೆಂದರೆ, ಇದು ಹಲವು ತಲೆಮಾರುಗಳಿಂದಲೂ ನಾವು ಆಚರಿಸಿಕೊಂಡು ಬಂದಿರುವಂಥ ಸಂಪ್ರದಾಯವಾಗಿದೆ ಎಂದು ಖಾಪ್‌ ನಾಯಕರು ಹೇಳಿದ್ದಾರೆ. ಜತೆಗೆ, ಪಂಜಾಯತ್‌ ಸಭೆ ಸೇರಿ ಈ ಕುರಿತು ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದೂ ಹೇಳಿದ್ದಾರೆ.

ಕೆಲವು ಖಾಪ್‌ ತೀರ್ಪುಗಳು
– 2007 ರಲ್ಲಿ ಸಾಮಾಜಿಕ ಪದ್ಧತಿಗೆ ವಿರುದ್ಧವಾಗಿ ವಿವಾಹವಾದ ಜೋಡಿಯನ್ನು ಖಾಪ್‌ ಪಂಚಾಯತ್‌ ಆದೇಶದಂತೆ ಕೊಲೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹರ್ಯಾಣ ಹೈಕೋರ್ಟ್‌ ಐವರು ಆರೋಪಿಗಳಿಗೆ ಗಲ್ಲುಶಿಕ್ಷೆ ಮತ್ತು ಒಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

– 2015ರ ಏಪ್ರಿಲ್‌ನಲ್ಲಿ ರಾಜಸ್ಥಾನದ ಮಹಿಳೆಯೊಬ್ಬಳ ಪತಿಯು ಇನ್ನೊಬ್ಬ ವ್ಯಕ್ತಿಯ ಪತ್ನಿಯೊಂದಿಗೆ ಓಡಿಹೋಗಿದ್ದ ಹಿನ್ನೆಲೆಯಲ್ಲಿ, ಆ ವ್ಯಕ್ತಿಯೊಂದಿಗೆ ಸಂಸಾರ ನಡೆಸುವಂತೆ ಮಹಿಳೆಗೆ ಖಾಪ್‌ ಪಂಚಾಯತ್‌ ಸೂಚಿಸಿತ್ತು.

– 2014ರಲ್ಲಿ ಉತ್ತರಪ್ರದೇಶದ ಖಾಪ್‌ ಪಂಚಾಯತ್‌, ಯುವತಿಯರು ಜೀನ್ಸ್‌ ಧರಿಸುವುದಕ್ಕೆ ಹಾಗೂ ಮೊಬೈಲ್‌ ಫೋನ್‌ ಬಳಸುವುದಕ್ಕೆ ನಿಷೇಧ ಹೇರಿತ್ತು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.