![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 14, 2020, 5:11 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ದಿನಾಂಕ ನಿಗದಿಪಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಮನವಿಯ ಮೇಲಿನ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನ್ಯಾಯಾಧೀಶೆ ಆರ್. ಭಾನುಮತಿ ಅವರಿಗೆ ನ್ಯಾಯಾಲಯದಲ್ಲೇ ಪ್ರಜ್ಞೆ ತಪ್ಪಿದ ಘಟನೆ ವರದಿಯಾಗಿದೆ.
ಬಳಿಕ ತಕ್ಷಣವೇ ಸಾವರಿಸಿಕೊಂಡ ನ್ಯಾಯಾಧೀಶೆಯವರನ್ನು ಗಾಲಿ ಕುರ್ಚಿಯ ಮೂಲಕ ವೈದ್ಯಕೀಯ ಪರೀಕ್ಷೆಗಾಗಿ ಕರೆದೊಯ್ಯಲಾಯಿತು ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ನಿರ್ಭಯಾ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತುಗೊಂಡು ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೆ ಏರಿಸಲು ಅನುಮತಿ ನೀಡಬೇಕೆಂದು ಕೆಂದ್ರ ಸರಕಾರ ಸಲ್ಲಿಸಿದ್ದ ಮನವಿ ಅರ್ಜಿಯ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ನಾಲ್ವರು ಅಪರಾಧಿಗಳಲ್ಲಿ ಒಬ್ಬನನ್ನು ಹೊರತುಪಡಿಸಿ ಉಳಿದವರೆಲ್ಲರಿಗಿದ್ದ ಕಾನೂನು ಮಾರ್ಗಗಳು ಮುಚ್ಚಿರುವುದರಿಂದ ಅವರನ್ನು ಗಲ್ಲಿಗೇರಿಸಲು ಅನುವು ಮಾಡಿಕೊಡಬೇಕು ಎಂದು ಕೇಂದ್ರದ ಪರ ವಕೀಲರು ವಾದ ಮಂಡಿಸಿದರು. ಮತ್ತು ಕಾನೂನು ಮಾರ್ಗಗಳ ಬಳಸಿಕೊಳ್ಳಲು ಅಪರಾಧಿಗಳಿಗೆ ದೆಹಲಿ ಹೈಕೋರ್ಟ್ ನೀಡಿದ್ದ ಒಂದುವಾರದ ಗಡುವೂ ಸಹ ಇದೀಗ ಮುಗಿದಿರುವುದರಿಂದ ಮೂವರನ್ನು ಗಲ್ಲಿಗೇರಿಸಲು ಹೊಸ ಡೆತ್ ವಾರಂಟ್ ಹೊರಡಿಸುವಂತೆ ಕೆಂದ್ರ ಸುಪ್ರೀಂಕೋರ್ಟಿನಲ್ಲಿ ಮನವಿ ಸಲ್ಲಿಸಿದೆ.
You seem to have an Ad Blocker on.
To continue reading, please turn it off or whitelist Udayavani.