Bulldozer ನ್ಯಾಯಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

ಆರೋಪಿಗಳ ಮನೆ, ಆಸ್ತಿ ಕೆಡಹುವುದಕ್ಕೆ ಆಕ್ಷೇಪ

Team Udayavani, Sep 3, 2024, 7:10 AM IST

Bulldozer ನ್ಯಾಯಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

ಹೊಸದಿಲ್ಲಿ: “ಬುಲ್ಡೋಜರ್‌ ನ್ಯಾಯ’ದ ಬಗ್ಗೆ ಸುಪ್ರೀಂ ಕೋರ್ಟ್‌ ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕೇವಲ ಆರೋಪ ಕೇಳಿ ಬಂದಾಕ್ಷಣ ಆರೋಪಿಯ ಮನೆ ಅಥವಾ ಕಟ್ಟಡವನ್ನು ಹೇಗೆ ನೆಲಸಮ ಮಾಡು ತ್ತೀರಿ ಎಂದು ಸರಕಾರವನ್ನು ಪ್ರಶ್ನಿಸಿದೆ. ಅಲ್ಲದೆ ಈ ಕುರಿತು ಮಾರ್ಗ ದರ್ಶಿ ರೂಪಿಸುವ ಪ್ರಸ್ತಾವ ಮಾಡಿದೆ.

ಒಂದು ವೇಳೆ ಆರೋಪಿ ಶಿಕ್ಷೆಗೆ ಗುರಿಯಾಗಿದ್ದರೂ ಆತನಿಗೆ ಸಂಬಂಧಿಸಿದ ಮನೆಯನ್ನು ಸೂಕ್ತಕಾನೂನು ಪ್ರಕ್ರಿಯೆಗಳು ಇಲ್ಲದೆ ನೆಲಸಮ ಮಾಡುವಂತಿಲ್ಲ ಎಂದು ನ್ಯಾ| ಬಿ.ಆರ್‌. ಗವಾಯಿ ಮತ್ತು ನ್ಯಾ| ಕೆ.ವಿ. ವಿಶ್ವನಾಥ್‌ ಅವರಿದ್ದ ಪೀಠವು ಅಭಿಪ್ರಾಯಪಟ್ಟಿದೆ.

ಕಟ್ಟಡಗಳ ಬುಲ್ಡೋಜರ್‌ ಕಾರ್ಯಾಚರಣೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಈ ಅಭಿಪ್ರಾಯಪಟ್ಟು, ಮುಂದಿನ ವಿಚಾರಣೆಯನ್ನು ಸೆ. 17ಕ್ಕೆ ಮುಂದೂಡಿತು. ಅಲ್ಲದೆ ಈ ಕುರಿತು ಸಲಹೆಗಳನ್ನೂ ಆಹ್ವಾನಿಸಿತು.

ಸರಕಾರದ ಪರ ವಾದ ಮಂಡಿಸಿದ ಸಾಲಿಸಿಟರ್‌ ಜನರಲ್‌, ಕಟ್ಟಡ ನೆಲಸಮ ಕಾರ್ಯಾಚರಣೆಯನ್ನು ಕೋರ್ಟ್‌ ಮುಂದೆ ತಪ್ಪಾಗಿ ಬಿಂಬಿಸಲಾಗಿದೆ ಎಂದು ವಾದಿಸಿದರು. ಆಗ ಪೀಠವು ಹಾಗಿದ್ದರೆ ಈ ಕುರಿತು ನ್ಯಾಯಾಲಯವು ಸಮಗ್ರ ದೇಶಕ್ಕೆ ಅನ್ವಯವಾಗುವಂತೆ ಮಾರ್ಗದರ್ಶಿಗಳನ್ನು ಸೂಚಿಸಲಿದೆ ಎಂದು ಹೇಳಿತು.

ಉದಾಹರಣೆ ಸಹಿತ ವಾದ: ಅರ್ಜಿದಾರರ ಪರ ವಾದ ಮಂಡಿಸಿದ ದುಷ್ಯಂತ್‌ ದವೆ ಮತ್ತು ಸಿ.ಯು. ಸಿಂಗ್‌, ದಿಲ್ಲಿಯ ಜಹಾಂಗೀರ್‌ಪುರಿಯಲ್ಲಿ ಬಾಡಿಗೆ ನೀಡಿದ ಮನೆಯನ್ನು ಧ್ವಂಸ ಮಾಡಲಾಗಿದೆ. ಪುತ್ರ ಅಥವಾ ಬಾಡಿಗೆದಾರ ಕಾನೂನುಬಾಹಿರ ಕೃತ್ಯ ಎಸಗಿದ್ದಾನೆಂದು 50- 60 ವರ್ಷಗಳ ಹಳೆಯ ಮನೆಯನ್ನು ಕೆಡವಲಾಗಿದೆ. ರಾಜಸ್ಥಾನದ ಉದಯಪುರದಲ್ಲಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗೆ ಚಾಕುವಿನಿಂದ ಇರಿದಿದ್ದಾನೆ, ಆತ ವಾಸಿಸುತ್ತಿದ್ದ ಮನೆಯನ್ನು ನೆಲಸಮ ಮಾಡಲಾಗಿದೆ. ವಿದ್ಯಾರ್ಥಿ ದುಷ್ಕೃತ್ಯ ಎಸಗಿದ್ದಾನೆಂದು ಆತನ ತಂದೆ ವಾಸಿಸುವ ಮನೆಯನ್ನು ನೆಲಸಮ ಮಾಡಿದ್ದು ಸರಿಯಲ್ಲ ಎಂದು ವಾದಿಸಿದರು.

ಮಾರ್ಗದರ್ಶಿ ಸೂತ್ರ ಪ್ರಸ್ತಾವನೆ: ಈ ಹಂತದಲ್ಲಿ ಮಾತನಾಡಿದ ನ್ಯಾ| ಗವಾಯಿ, ಉತ್ತರ ಪ್ರದೇಶ ಸರಕಾರ ಅಫಿದಾವಿತ್‌ ಸಲ್ಲಿಸಿದ್ದು, ಕಾನೂನು ಪ್ರಕಾರವೇ ಸ್ಥಿರಾಸ್ತಿಗಳನ್ನು ನೆಲಸಮ ಮಾಡಲು ಸಾಧ್ಯ ಎಂದು ಹೇಳಿದೆ. ಕಟ್ಟಡಗಳನ್ನು ನೆಲಸಮಗೊಳಿಸುವ ಸಂಬಂಧ ದೇಶಾದ್ಯಂತ ಅನ್ವಯವಾಗುವ ಕೆಲವು ಮಾರ್ಗದರ್ಶಿ ರೂಪಿಸಬೇಕು ಎಂದು ಹೇಳಿದರು.

ಅನಧಿಕೃತ ಕಟ್ಟಡಗಳಿಗೆ ರಕ್ಷಣೆ ಇಲ್ಲ: ವಿಚಾರಣೆಯ ಒಂದು ಹಂತದಲ್ಲಿ, ಅನಧಿಕೃತ ಕಟ್ಟಡಗಳ ರಕ್ಷಣೆಗೆ ಕೋರ್ಟ್‌ ನಿಲ್ಲುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು. ದೇವಾಲಯಗಳ ಸಹಿತ ಸಾರ್ವಜನಿಕ ರಸ್ತೆಗೆ ಅಡ್ಡಿಯಾಗುವ ಯಾವುದೇ ಅನಧಿಕೃತ ಕಟ್ಟಡಗಳಿಗೆ ನಾವು ರಕ್ಷಣೆ ನೀಡವುದಿಲ್ಲ. ಆದರೆ ಕಟ್ಟಡಗಳನ್ನು ನೆಲಸಮ ಮಾಡಲು ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸಬೇಕು ಎಂದು ಹೇಳಿತು.

ಏನಿದು ಬುಲ್ಡೋಜರ್‌ ನ್ಯಾಯ?
-ಅಪರಾಧ ಎದುರಿಸುವವರ ಮನೆ, ಆಸ್ತಿಗಳನ್ನು ಬುಲ್ಡೋಜರ್‌ ಮೂಲಕ ನೆಲಸಮ ಮಾಡುವುದು “ಬುಲ್ಡೋಜರ್‌ ನ್ಯಾಯ’
-2017ರಿಂದಲೇ ಉತ್ತರ ಪ್ರದೇಶದಲ್ಲಿ ಯೋಗಿ ಸರಕಾರದಿಂದ ಇದರ ಜಾರಿ
-ಮ.ಪ್ರದೇಶ, ರಾಜಸ್ಥಾನ, ತೆಲಂಗಾಣದಲ್ಲೂ ಜಾರಿ

 

ಟಾಪ್ ನ್ಯೂಸ್

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

davanagere

Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

1-asdsadasd

One Nation One Election; ಏಕಕಾಲದಲ್ಲಿ ಚುನಾವಣೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ

School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…

School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.