![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 27, 2019, 4:11 PM IST
ಸೂರತ್ : 22 ವಿದ್ಯಾರ್ಥಿಗಳನ್ನು ಬಲಿ ಪಡೆದಿರುವ ಸೂರತ್ ಕೋಚಿಂಗ್ ಕ್ಲಾಸ್ ಸೆಂಟರ್ ಅಗ್ನಿ ದುರಂತಕ್ಕೆ ಸಂಬಂಧಿಸಿ ಗುಜರಾತ್ ಸರಕಾರ ಸೂರತ್ ಮೇಯರ್ ಮತ್ತು ಇತರ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ತನಕ ತಾನು ಅನ್ನ ಸತ್ಯಾಗ್ರಹ ನಡೆಸುವುದಾಗಿ ಬೆದರಿಕೆ ಹಾಕಿರುವ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರನ್ನು ಇಂದು ಸೋಮವಾರ ಪೊಲೀಸರು ವಶಕ್ಕೆ ತೆಗೆದುಕೊಂಡರು.
ಅಗ್ನಿ ಅವಘಡ ನಡೆದ ಸ್ಥಳಕ್ಕೆ ಸಮೀಪ ಪ್ರತಿಭಟನೆ ಕೈಗೊಳ್ಳಲು ಸರ್ತಾನಾ ಪೊಲೀಸ್ ಠಾಣೆ ಅನುಮತಿಯನ್ನು ಕಾಂಗ್ರೆಸ್ ಕೋರಿತ್ತು. ಆದರೆ ಅನುಮತಿ ನಿರಾಕರಿಸಲಾಗಿತ್ತು. ಆದಾಗ್ಯೂ ಅವಘಡ ತಾಣಕ್ಕೆ ತೆರಳಲು ಮುಂದಾದ ಪಟೇಲ್ ಅವರನ್ನು ಪೊಲೀಸರು ಮಾರ್ಗ ಮಧ್ಯದಲ್ಲೇ ಬಂಧಿಸಿದರು ಎಂದು ಸೂರತ್ ಪೊಲೀಸ್ ಕಮಿಷನರ್ ಸತೀಶ್ ಶರ್ಮಾ ತಿಳಿಸಿದರು.
ಮಾಧ್ಯಮದೊಂದಿಗೆ ಮಾತನಾಡಿದ ಶರ್ಮಾ, ಅವರು ಪಟೇಲ್ ನಿನ್ನೆಯೇ ಅವಘಡ ತಾಣಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಎದುರಾಳಿ ಗುಂಪಿನವರು ಪಟೇಲ್ ಮೇಲೆ ಹಲ್ಲೆ ನಡೆಸಿದ್ದರು. ಅಂತೆಯೇ ಪಟೇಲ್ ಅವರ ಭದ್ರತೆಯ ಸಲುವಾಗಿ ಅವರಿಗೆ ಪ್ರತಿಭಟನೆಗೆ ಅವಕಾಶ ನಿರಾಕರಿಸಲಾಗಿದೆ. ದಿನಂಪ್ರತಿ ಅವರು ಅವಘಡ ತಾಣಕ್ಕೆ ಭೇಟಿ ಕೊಡುವುದು ಕೂಡ ಸರಿಯಲ್ಲ ಎಂದು ಹೇಳಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.