![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 7, 2019, 3:00 AM IST
ನವದೆಹಲಿ: ಕರ್ನಾಟಕದಲ್ಲಿ ಶಾಸಕರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, “ಮೋದಿ ಎಂದರೆ ಭಾರತದಲ್ಲಿ ದುರುದ್ದೇಶಪೂರಿತವಾಗಿ ಯೋಜಿಸಿದ ಪಕ್ಷಾಂತರ’ ಎಂಬುದಾಗಿ ಆರೋಪಿಸಿದ್ದಾರೆ.
ಮೋದಿ ಎಂಬ ಪದಕ್ಕೆ ಅವರು ಈ ರೀತಿಯ ವ್ಯಾಖ್ಯಾನ ಮಾಡಿದ್ದು, ಹಣ ಮತ್ತು ಅಧಿಕಾರದ ಆಸೆ ತೋರಿಸಿ ಜನರಿಂದ ಆಯ್ಕೆಯಾದ ಸರ್ಕಾರವನ್ನು ಕೆಡವಲು ಯತ್ನಿಸುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ. ಹಾಡಹಗಲಿನಲ್ಲೇ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಸುರ್ಜೇವಾಲಾ ಆರೋಪಿಸಿದ್ದಾರೆ.
ಈವರೆಗೆ 12 ಬಾರಿ ಸರ್ಕಾರವನ್ನು ಉರುಳಿಸಲು ಯತ್ನಿಸಲಾಗಿದೆ. ಅರುಣಾಚಲದಲ್ಲಿ ಇದು ಶುರುವಾಗಿದೆ. ಅಸ್ಸಾಂ, ತ್ರಿಪುರಾ, ಗೋವಾ, ಉತ್ತರಾಖಂಡ ಮತ್ತು ಮಹಾರಾಷ್ಟ್ರದಲ್ಲೂ ಸರ್ಕಾರ ಉರುಳಿಸಲು ಬಿಜೆಪಿ ಯತ್ನಿಸಿದೆ. ಪಶ್ಚಿಮ ಬಂಗಾಳದಲ್ಲಿ 30 ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಪ್ರಧಾನಿ ಮೋದಿಯವರೇ ಹೇಳಿದ್ದಾರೆ. ಪ್ರಧಾನಿಯೇ ಇಂಥ ಕೃತ್ಯಕ್ಕೆ ಇಳಿದರೆ ನಾವು ಏನು ಮಾಡಲು ಸಾಧ್ಯ ಎಂದು ಸುರ್ಜೇವಾಲಾ ಪ್ರಶ್ನಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.