ಪಾಕ್ ಸಂಸತ್ತಿನ ಹೊರಗೆ ‘ಅಖಂಡ ಭಾರತ’ ಪೋಸ್ಟರ್!
ಪೋಸ್ಟರ್ ನೋಡಿ ತಬ್ಬಿಬ್ಬಾದ ಪೊಲೀಸ್ ಅಧಿಕಾರಿಗಳು
Team Udayavani, Aug 7, 2019, 5:21 PM IST
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಶಾಧಿಕಾರವನ್ನು ರದ್ದುಪಡಿಸಿದ ಬೆನ್ನಲ್ಲೇ ಭಾರತದ ವಿರುದ್ಧ ಪಾಕಿಸ್ಥಾನದಲ್ಲಿ ತೀವ್ರ ಅಸಮಧಾನವೇನೋ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಕಾಶ್ಮೀರವನ್ನೂ ಭಾರತ ಒಳಗೊಂಡಂತೆ ಅಖಂಡ ಭಾರತ ನಿರ್ಮಾಣವಾಗಬೇಕೆನ್ನುವ ಕುರಿತ ಬ್ಯಾನರ್ ಒಂದು ಪಾಕಿಸ್ಥಾನ ಸಂಸತ್ತಿನ ಹೊರಗೇ ಪತ್ತೆಯಾಗಿದೆ. ಇದು ಪಾಕ್ ಆಡಳಿತಕ್ಕೆ ಇರಸುಮುರಸು ತಂದಿದೆ.
ಪಾಕ್ ಸಂಸತ್ತು ಮತ್ತು ಪ್ರಧಾನಿ ಇಮ್ರಾನ್ ಖಾನ್ ಅವರ ಅಧಿಕೃತ ನಿವಾಸಕ್ಕಿಂತ ಕೆಲವೇ ಮೀಟರ್ ದೂರದಲ್ಲಿ ರಾಷ್ಟ್ರೀಯ ಪ್ರೆಸ್ ಕ್ಲಬ್ ಹೊರಗೆ ಈ ಬ್ಯಾನರ್ ಕಟ್ಟಲಾಗಿದೆ. ವಿದ್ಯುತ್ ಕಂಬಕ್ಕೆ ಈ ಬ್ಯಾನರ್ ಕಟ್ಟಲಾಗಿದ್ದು, ಕೆಲಸಕ್ಕೆ ಹೋಗುವ ಕಾರ್ಮಿಕರು ಇದನ್ನು ಮೊದಲು ಗಮನಿಸಿದ್ದಾಗಿ ‘ಡಾನ್’ ಪತ್ರಿಕೆ ವರದಿ ಮಾಡಿದೆ. ಈ ಪೋಸ್ಟರ್ ಬಗ್ಗೆ ಸಾಜಿದ್ ಮಹ್ಮೂದ್ ಎಂಬುವವರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಹರಿಯಬಿಟ್ಟಿದ್ದಾರೆ. ಕೆಲವೇ ಹೊತ್ತಿನಲ್ಲಿ ಇದು ಪಾಕ್ ನಾದ್ಯಂತ ವೈರಲ್ ಆಗಿದೆ.
ಕೂಡಲೇ ಎಚ್ಚೆತ್ತುಕೊಂಡ ಇಸ್ಲಾಮಾಬಾದ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಬ್ಯಾನರ್ ತೆಗೆಸಿದ್ದಾರೆ. ಪ್ರಕರಣಕ್ಕ ಸಂಬಂಧಿಸಿದಂತೆ ಸ್ಥಳೀಯ ಪ್ರಿಂಟಿಂಗ್ ನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಪ್ರಿಂಟ್ ಮಾಡಲು ಹೇಳಿದ ವ್ಯಕ್ತಿಯೊಬ್ಬನ ಹೆಸರು ಹೇಳಿದ್ದಾನೆ ಎಂದು ಗೊತ್ತಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪತ್ರಿಕೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.