![1-rewewewe](https://www.udayavani.com/wp-content/uploads/2024/07/1-rewewewe-415x234.jpg)
ಜೀವನದಲ್ಲಿ ಸಮೃದ್ಧಿ ತರಲು ಇಬ್ಬರು ಮಹಿಳೆಯರ ನರಬಲಿ; ದಂಪತಿ ಬಂಧನ
ಆಘಾತ ವ್ಯಕ್ತಪಡಿಸಿದ ಮುಖ್ಯಮಂತ್ರಿ...
Team Udayavani, Oct 11, 2022, 4:17 PM IST
![crime (2)](https://www.udayavani.com/wp-content/uploads/2022/10/crime-2-2-620x420.jpg)
ಪತ್ತನಂತಿಟ್ಟ : ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಮಾಟಮಂತ್ರದ ಭಾಗವಾಗಿ ಇಬ್ಬರು ಮಹಿಳೆಯರನ್ನು ಬಲಿಕೊಡಲಾಗಿರುವ ಆತಂಕಕಾರಿ ಘಟನೆ ನಡೆದಿದ್ದು, ಅಪರಾಧದಲ್ಲಿ ಭಾಗಿಯಾಗಿರುವ ಶಂಕಿತ ದಂಪತಿ ಸೇರಿದಂತೆ ಮೂವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಬೀದಿಗಳಲ್ಲಿ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುವ ಮೂಲಕ ಜೀವನ ನಡೆಸುತ್ತಿದ್ದ ಇಬ್ಬರು ಮಹಿಳೆಯರನ್ನು ಆರೋಪಿಗಳು ತಮ್ಮ ಹಣಕಾಸಿನ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಜೀವನದಲ್ಲಿ ಸಮೃದ್ಧಿ ತರಲು ಬಲಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಪಾಕಿಸ್ಥಾನ ಉತ್ತಮ ತಂಡ ಆದರೆ…; ಸ್ಪಿನ್ನರ್ ಚಹಾಲ್ ದೊಡ್ಡ ಹೇಳಿಕೆ
ಕೊಲೆಗಳ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ‘ತಲೆಗೆ ಕಾಯಿಲೆ ಇರುವವರು ಮಾತ್ರ ಇಂತಹ ಅಪರಾಧಗಳನ್ನು ಮಾಡಲು ಸಾಧ್ಯ.ಇಂತಹ ಮಾಟಮಂತ್ರ ಮತ್ತು ವಾಮಾಚಾರದ ಆಚರಣೆಗಳು ಸುಸಂಸ್ಕೃತ ಸಮಾಜಕ್ಕೆ ಸವಾಲಾಗಿ ಮಾತ್ರ ಕಾಣಬಹುದಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಹತ್ಯೆಯಾದವರು ಸುಮಾರು 50 ರ ಆಸುಪಾಸಿನವರಾಗಿದ್ದು, ಇಲ್ಲಿನ ಕಡವಂತಾರ ಮತ್ತು ಸಮೀಪದ ಕಾಲಡಿ ನಿವಾಸಿಗಳು. ಈ ವರ್ಷ ಸೆಪ್ಟೆಂಬರ್ ಮತ್ತು ಜೂನ್ನಲ್ಲಿ ಮಹಿಳೆಯರು ನಾಪತ್ತೆಯಾಗಿದ್ದರು ಮತ್ತು ಅಂತಿಮವಾಗಿ ತನಿಖೆಯಲ್ಲಿ ನರಬಲಿ ನೀಡಿರುವುದು ತಿಳಿದು ಬಂದಿದೆ ಎಂದರು.
ಪತ್ತನಂತಿಟ್ಟದ ತಿರುವಲ್ಲಾದ ಎಳಂತೂರ್ ಗ್ರಾಮದಲ್ಲಿ ಎರಡು ಸ್ಥಳಗಳಲ್ಲಿ ಹೂಳುವ ಮೊದಲು ಮಹಿಳೆಯರ ದೇಹದ ಭಾಗಗಳನ್ನು ತುಂಡುಗಳಾಗಿ ಕತ್ತರಿಸಲಾಯಿತು ಎಂದು ಆರೋಪಿಗಳ ತಪ್ಪೊಪ್ಪಿಗೆಯನ್ನು ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ.
ವರದಿಯ ಪ್ರಕಾರ ಬಂಧಿತ ವ್ಯಕ್ತಿಗಳನ್ನು ಸ್ಥಳೀಯ ಮಸಾಜ್ ಥೆರಪಿಸ್ಟ್ ಭಗವಲ್ ಸಿಂಗ್ ಅವರ ಪತ್ನಿ ಲೈಲಾ ಎಂದು ಗುರುತಿಸಲಾಗಿದೆ. ಇಬ್ಬರೂ ತಿರುವಲ್ಲಾದ ಸ್ಥಳೀಯರು ಮತ್ತು ಪೆರುಂಬವೂರು ಮೂಲದ ರಶೀದ್ ಅಲಿಯಾಸ್ ಮುಹಮ್ಮಂದ್ ಶಾಫಿ ಎಂಬಾತನು ಆಮಿಷವೊಡ್ಡಿ ಮಹಿಳೆಯರನ್ನು ದಂಪತಿಯ ಮನೆಗೆ ಕರೆತಂದು ಬಲಿ ನೀಡಿರುವುದಾಗಿ ಶಂಕಿಸಲಾಗಿದೆ.
ಟಾಪ್ ನ್ಯೂಸ್
![1-rewewewe](https://www.udayavani.com/wp-content/uploads/2024/07/1-rewewewe-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್,ದುಬಾರಿ ಕಾರು; ಈತ ಶ್ರೀಮಂತ ಕಳ್ಳ](https://www.udayavani.com/wp-content/uploads/2024/07/3-5-150x90.jpg)
ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್,ದುಬಾರಿ ಕಾರು; ಈತ ಶ್ರೀಮಂತ ಕಳ್ಳ
![Nirmala-Budget](https://www.udayavani.com/wp-content/uploads/2024/07/Nirmala-Budget-150x90.jpg)
Union Budget: ಜು.22ರಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭ
![rahul gandhi (2)](https://www.udayavani.com/wp-content/uploads/2024/07/rahul-gandhi-2-1-150x90.jpg)
Congress ಅಯೋಧ್ಯೆಯಲ್ಲಿ ಮಾಡಿದಂತೆ ಗುಜರಾತ್ ನಲ್ಲೂ ಬಿಜೆಪಿಗೆ ಸೋಲುಣಿಸಲಿದೆ: ರಾಹುಲ್
![Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ](https://www.udayavani.com/wp-content/uploads/2024/07/bhole-150x83.jpg)
Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ
![POCSO Act being misused against teens in consensual relationships; Allahabad High Court](https://www.udayavani.com/wp-content/uploads/2024/07/pocso-150x83.jpg)
ಒಮ್ಮತದ ಸಂಬಂಧದಲ್ಲಿ POCSO ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ
![1-rewewewe](https://www.udayavani.com/wp-content/uploads/2024/07/1-rewewewe-150x84.jpg)
Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ
![ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್,ದುಬಾರಿ ಕಾರು; ಈತ ಶ್ರೀಮಂತ ಕಳ್ಳ](https://www.udayavani.com/wp-content/uploads/2024/07/3-5-150x90.jpg)
ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್,ದುಬಾರಿ ಕಾರು; ಈತ ಶ್ರೀಮಂತ ಕಳ್ಳ
![Nirmala-Budget](https://www.udayavani.com/wp-content/uploads/2024/07/Nirmala-Budget-150x90.jpg)
Union Budget: ಜು.22ರಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.