ದೇವಿಂದರ್ ಸಿಂಗ್ ಸಹಿತ ನಾಲ್ವರಿಗೆ 15 ದಿನಗಳ ಎನ್.ಐ.ಎ. ಕಸ್ಟಡಿ
Team Udayavani, Jan 23, 2020, 9:42 PM IST
ನವದೆಹಲಿ: ಉಗ್ರರನ್ನು ತನ್ನ ವಾಹನದಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಭದ್ರತಾ ಪಡೆಗಳ ಕೈಯಲ್ಲಿ ಸಿಕ್ಕಿಬಿದ್ದು ಬಂಧನಕ್ಕೊಳಗಾಗಿ ಅಮಾನತುಗೊಂಡಿರುವ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ದೇವಿಂದರ್ ಸಿಂಗ್ ಹಾಗೂ ಇತರೇ ನಾಲ್ವರು ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ 15 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ ವಶಕ್ಕೆ ನೀಡಲಾಗಿದೆ.
ಬಂಧಿತ ನಾಲ್ವರನ್ನು ಎನ್.ಐ.ಎ. ತಂಡ ಟ್ರಾನ್ಸಿಟ್ ರಿಮಾಂಡ್ ಪಡೆದು ಕುಲ್ಗಾಂನಿಂದ ದೆಹಲಿಗೆ ಕರೆದುಕೊಂಡು ಬಂದಿತ್ತು ಮತ್ತು ಹಿಜ್ಬುಲ್ ಉಗ್ರರಿಗೆ ನೆರವು ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರವಾದ ತನಿಖೆಯನ್ನು ಎನ್.ಐ.ಎ. ಅಧಿಕಾರಿಗಳು ನಡೆಸಿದ್ದರು. ಕೇಂದ್ರ ಗೃಹಸಚಿವಾಲಯವು ಜನವರಿ 16ರಂದು ನೀಡಿದ ಸೂಚನೆಯಂತೆ ಎನ್.ಐ.ಎ. ಅಧಿಕಾರಿಗಳು, ದೇವಿಂದರ್ ಸಿಂಗ್ ಭಾಗಿಯಾಗಿರಬಹುದಾದ ಉಗ್ರ ನೆರವು ಚಟುವಟಿಕೆಗಳ ಕುರಿತಾಗಿ ವಿಚಾರಣೆಯನ್ನು ಪ್ರಾರಂಭಿಸಿದ್ದರು.
ದೇವಿಂದರ್ ಸಿಂಗ್ ಬಂಧನಕ್ಕೊಳಗಾದ ಮರುದಿನವೇ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಿಂಗ್ ಅವರ ಮನೆ ಮೇಲೆ ದಾಳಿ ನಡೆಸಿ ಎಕೆ-47, ಹ್ಯಾಂಡ್ ಗ್ರೆನೇಡ್ ಹಾಗೂ ಪಿಸ್ತೂಲ್ ಗಳನ್ನು ವಶಪಡಿಸಿಕೊಂಡಿದ್ದರು.
ಸಿಂಗ್ ಅವರನ್ನು ಕೇಂದ್ರ ಹಾಗೂ ಜಮ್ಮು-ಕಾಶ್ಮೀರದ ಜಂಟಿ ವಿಚಾರಣಾಧಿಕಾರಿಗಳ ತಂಡವು ತೀವ್ರ ವಿಚಾರಣೆಯನ್ನು ನಡೆಸುತ್ತಿದೆ ಮತ್ತು ಈ ಸಂಬಂಧವಾಗಿ ಸಿಂಗ್ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ಅಡಿಯಲ್ಲಿ ಪ್ರಕರಣವನ್ನೂ ಸಹ ದಾಖಲು ಮಾಡಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.