Swachh Bharat Mission: “ಸ್ವಚ್ಛಭಾರತ’ 21ನೇ ಶತಮಾನದ ಯಶಸ್ವಿ ಜನಾಂದೋಲನ: ಮೋದಿ
ಸಾವಿರ ವರ್ಷ ಕಳೆದರೂ ಈ ಸಾಧನೆ ಅಳಿಯದು
Team Udayavani, Oct 2, 2024, 10:44 PM IST
ನವದೆಹಲಿ: “ಸ್ವಚ್ಛಭಾರತ ಮಿಷನ್ ಕೇವಲ ಒಂದು ಅಭಿಯಾನವಲ್ಲ, 21ನೇ ಶತಮಾನದ ಅತಿದೊಡ್ಡ ಯಶಸ್ವಿ ಜನಾಂದೋಲನ ‘ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.
ಸ್ವಚ್ಛ ಭಾರತ ಯೋಜನೆಯು ದಶಕ ಪೂರೈಸಿದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆಯೋಜಿಸಿದ್ದ ಸ್ವಚ್ಛತಾ ಹೈ ಸೇವಾ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಂಡಿದ್ದರು. ಇದೇ ವೇಳೆ ಸ್ವಚ್ಛ ಭಾರತ್ ಮತ್ತು ಅಮೃತ್ 2.0 ಮಿಷನ್ ಅನ್ವಯ 10,000 ಕೋಟಿ ರೂ. ಮೌಲ್ಯದ ನೀರು ಮತ್ತು ಒಳಚರಂಡಿ ಸಂಸ್ಕರಣಾ ಘಟಕಗಳ ಯೋಜನೆಗೆ ಮೋದಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಅಭಿಯಾನವಾಗಿದ್ದ ಸ್ವಚ್ಛ ಭಾರತವು ದೇಶವಾಸಿಗಳ ಸಾಮೂಹಿಕ ಪಾಲ್ಗೊಳ್ಳುವಿಕೆ, ಬೆಂಬಲದೊಂದಿಗೆ ಭಾರತದ ಸಮೃದ್ಧಿಗೆ ಹೊಸ ಮಾರ್ಗವನ್ನೇ ಸೃಷ್ಟಿ ಮಾಡಿದೆ. ಸಾವಿರ ವರ್ಷ ಕಳೆದರೂ 21ನೇ ಶತಮಾನದ ಸ್ವಚ್ಛ ಭಾರತದ ಈ ಸಾಧನೆ ಮುಂದಿನ ಪೀಳಿಗೆಗೆ ನೆನಪಿರಲಿದೆ ಎಂದರು. ಅಲ್ಲದೆ, ಶಾಲೆಯೊಂದಕ್ಕೆ ತೆರಳಿ ವಿದ್ಯಾರ್ಥಿನಿಯರೊಂದಿಗೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯೂ ಆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಮ್ಮು ಕಾಶ್ಮೀರ: ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ಅಹ್ಮದ್ ಶಾ ಬುಖಾರಿ ನಿಧನ
IAF Chopper: ಪ್ರವಾಹದ ನೀರಿನಲ್ಲೇ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್… ತಪ್ಪಿದ ದುರಂತ
Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು
ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್
Andhra DCM 11 ದಿನಗಳ ವ್ರತ; ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಪವನ್ ಕಲ್ಯಾಣ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.