![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 7, 2022, 7:50 AM IST
ಹೊಸದಿಲ್ಲಿ: ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಭಾರತದ ಕಂಪೆನಿ ತಯಾರಿಸಿದ ಕಫದ ಸಿರಪ್ ಕಾರಣ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಎಚ್ಚರಿಸಿದ ಬೆನ್ನಲ್ಲೇ ಭಾರತದ ಔಷಧ ನಿರ್ದೇಶನಾಲಯವು ಈ ಕುರಿತು ತನಿಖೆ ಆರಂಭಿಸಿದೆ.
ಹರಿಯಾಣದ ಸೋನೆಪತ್ ಮೂಲದ ಮೈಡೆನ್ ಫಾರ್ಮಾಸುಟಿಕಲ್ಸ್ ಲಿ.ನಲ್ಲಿ ತಯಾರಿಸಲಾದ ವಿಷಪೂರಿತ, ಕಳಪೆ ಗುಣಮಟ್ಟದ 4 ಬಗೆಯ ಕೆಮ್ಮು ನಿವಾರಕ ಸಿರಪ್ನಿಂದಾಗಿಯೇ ಪಶ್ಚಿಮ ಆಫ್ರಿಕಾದ ದೇಶದಲ್ಲಿ ಮೂತ್ರಕೋಶ ಸಮಸ್ಯೆ ಉಂಟಾಗಿ 66 ಮಕ್ಕಳು ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಬುಧವಾರ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಎಚ್ಚರಿಸಿತ್ತು.
ಪ್ರೋಮೆಥಝೈನ್ ಓರಲ್ ಸೊಲ್ಯೂಷನ್, ಕಾಫೆಕ್ಸ್ಮೆಲಿನ್ ಬೇಬಿ ಕಾಫ್ ಸಿರಪ್, ಮೇಕಾಫ್ ಬೇಬಿ ಕಾಫ್ ಸಿರಪ್ ಮತ್ತು ಮ್ಯಾಗ್ರಿಪ್ ಎನ್ ಕೋಲ್ಡ್ ಸಿರಪ್ ಎಂಬ ನಾಲ್ಕು ಸಿರಪ್ಗ್ಳಲ್ಲಿ ಸ್ವೀಕಾರಾರ್ಹವಲ್ಲದಷ್ಟು ಪ್ರಮಾಣದಲ್ಲಿ ಡೈಥಿಲೀನ್ ಗ್ಲೆ„ಕೋಲ್ ಮತ್ತು ಇಥೈಲೀನ್ ಗ್ಲೆ„ಕೋಲ್ ಇರುವುದು ಕಂಡುಬಂದಿತ್ತು. ಈ ಅಂಶಗಳು ಮಾರಣಾಂತಿಕವಾಗಿದ್ದು, ಇದನ್ನು ಸೇವಿಸಿದರೆ ಕಿಡ್ನಿ ಹಾಗೂ ನರಸಂಬಂಧಿ ಸಮಸ್ಯೆ ಉಂಟಾಗುತ್ತದೆ. ಡಬ್ಲ್ಯುಎಚ್ಒ ಸೂಚನೆ ಬೆನ್ನಲ್ಲೇ, ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯು ಪ್ರಕರಣದ ಬಗ್ಗೆ ತುರ್ತು ತನಿಖೆ ಆರಂಭಿಸಿದೆ. ಇದೇ ವೇಳೆ, ಸ್ಯಾಂಪಲ್ಗಳನ್ನು ಕೋಲ್ಕತಾಕ್ಕೆ ಪರೀಕ್ಷೆಗೆ ಕಳುಹಿಸಲಾಗಿದ್ದು, 2 ದಿನಗಳಲ್ಲಿ ವರದಿ ಬರುವ ಸಾಧ್ಯತೆಯಿದೆ ಎಂದಿದೆ ಕಂಪೆನಿ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.