MSP ಹೆಚ್ಚಳ ಮಾಡಿರುವುದು ಎನ್ ಡಿಎ ಸಾಧನೆ: ನೂತನ ಕೃಷಿ ಕಾಯ್ದೆ ಬಗ್ಗೆ ಪ್ರಧಾನಿ ಮೋದಿ ವಿವರ
ಕಳೆದ 22 ವರ್ಷಗಳಿಂದ ಕೃಷಿ ನೀತಿ ಸುಧಾರಣೆಗಾಗಿ ಪ್ರತಿ ಸರ್ಕಾರ, ರಾಜ್ಯ ಸರ್ಕಾರ ವಿಸ್ತ್ರತವಾಗಿ ಚರ್ಚಿಸಿವೆ.
Team Udayavani, Dec 18, 2020, 3:13 PM IST
ಭೋಪಾಲ್/ನವದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆ ವಿರುದ್ಧ ದೆಹಲಿ-ಹರ್ಯಾಣ ಗಡಿಭಾಗದಲ್ಲಿ ರೈತರ ಪ್ರತಿಭಟನೆ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ(ಡಿಸೆಂಬರ್ 18, 2020) ವಿಡಿಯೋ ಕಾನ್ಫರೆನ್ಸ್ ಮೂಲಕ ಮಧ್ಯಪ್ರದೇಶದ ರೈತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ನೂತನ ಕಾನೂನಿನಲ್ಲಿ ರೈತರ ಹಿತ ಕಾಯಲಾಗಿದೆ ಎಂದು ಪುನರುಚ್ಚರಿಸಿದರು.
ಕೇಂದ್ರ ಸರ್ಕಾರ ರಾತ್ರಿ ಬೆಳಗಾಗುವುದರೊಳಗೆ ಈ ಕಾಯ್ದೆಗಳನ್ನು ಜಾರಿಗೆ ತಂದಿಲ್ಲ. ಕಳೆದ 22 ವರ್ಷಗಳಿಂದ ಕೃಷಿ ನೀತಿ ಸುಧಾರಣೆಗಾಗಿ ಪ್ರತಿ ಸರ್ಕಾರ, ರಾಜ್ಯ ಸರ್ಕಾರ ವಿಸ್ತ್ರತವಾಗಿ ಚರ್ಚಿಸಿವೆ. ಇದರಲ್ಲಿ ರೈತ ಸಂಘಟನೆಗಳು, ಕೃಷಿ ತಜ್ಞರು, ಆರ್ಥಿಕ ತಜ್ಞರು, ವಿಜ್ಞಾನಿಗಳು ಮತ್ತು ಪ್ರಗತಿಪರ ರೈತರು ಚರ್ಚಿಸಿದ್ದರು. ಆದರೆ ಈಗ ಯಾರು ತಮ್ಮ ಪ್ರಣಾಳಿಕೆಯಲ್ಲಿ ಹೊಸ ಕಾಯ್ದೆಯ ಭರವಸೆ ನೀಡಿದ್ದಾರೋ ಆ ಪಕ್ಷಗಳೇ ವಿರೋಧಿಸುತ್ತಿವೆ ಎಂದು ಟೀಕಿಸಿದರು.
ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೊದಲಿದ್ದ ಕಾನೂನಿನಲ್ಲಿ ರೈತರಿಗೆ ಹಲವು ಸಮಸ್ಯೆ ಇತ್ತು. ಹೊಸ ಕಾನೂನಿನಲ್ಲಿ ಕೃಷಿ ಉತ್ಪನ್ನ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ರೈತರ ಬೆಳೆಗೆ ಒಂದೂವರೆ ಪಟ್ಟು ಎಂಎಸ್ ಪಿ ನೀಡಿದ್ದೇವೆ. ಇದು ನಮ್ಮ ಸರ್ಕಾರದ ಸಾಧನೆಯಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಹೊಸ ಕಾಯ್ದೆ ಪ್ರಕಾರ ಜಮೀನು ಖರೀದಿಗೂ ಒಪ್ಪಂದಕ್ಕೂ ಸಂಬಂಧವಿಲ್ಲ. ಬೆಳೆಗೆ ಮಾತ್ರ ಒಪ್ಪಂದ ಮಾಡಿಕೊಂಡರೆ ಸಾಕು. ಜಮೀನಿನ ಬಗ್ಗೆ ಒಪ್ಪಂದ ಮಾಡಿಕೊಳ್ಳಬೇಕೆಂದಿಲ್ಲ. ಈ ಬಗ್ಗೆ ರೈತರಿಗೆ ಯಾವುದೇ ಅನುಮಾನ ಇದ್ದರು ಬಂದು ಚರ್ಚಿಸಲಿ ಎಂದರು.
ಮಧ್ಯಪ್ರದೇಶದಲ್ಲಿ ರೈತರ ಸಾಲಮನ್ನಾದ ಭರವಸೆ ಕೊಟ್ಟಿದೆ. ರಾಜಸ್ಥಾನದಲ್ಲಿ ಸಾಲಮನ್ನಾ ಭರವಸೆಗಾಗಿ ಕಾಯುತ್ತಿದ್ದಾರೆ. ಆದರೆ ಇದುವರೆಗೂ ಘೋಷಣೆ ಮಾಡಿದ ಸಾಲಮನ್ನಾ ಮಾಡಿಲ್ಲ. ಸರ್ಕಾರ ರಚನೆ ವೇಳೆ ಏನೇನೊ ಸಬೂಬು ಹೇಳಿದರು. ರಾಜಕಾರಣ ಇಷ್ಟು ಕೀಳುಮಟ್ಟಕ್ಕೆ ಹೋಗುತ್ತದೆಯೇ? ಅದು ದೇಶದ ರೈತರ ಹೆಸರಿನಲ್ಲಿ. ಇದರ ಲಾಭ ಯಾರಿಗೆ ಸಿಗುತ್ತದೆ ಎಂದು ನೋಡಬೇಕಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ಕನಿಷ್ಠ ಬೆಂಬಲ ಬೆಲೆ ಹಿಂಪಡೆಯಲ್ಲ ಎಂದು ಭರವಸೆ ನೀಡಿದ ಪ್ರಧಾನಿ ಮೋದಿ, ಹಿಂದಿನ ಸರ್ಕಾರಕ್ಕಿಂತ ನಮ್ಮ ಸರ್ಕಾರ ಎರಡು ಪಟ್ಟು ಹೆಚ್ಚು ಧಾನ್ಯ ಖರೀದಿಸಿದೆ. ದೊಡ್ಡ ರೈತರಿಗೆ ಪ್ರಯೋಜನ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಇರುವವರು ಹೀಗೆ ವಿರೋಧಿಸುತ್ತಿದ್ದಾರೆ. ಆಗ ಸಣ್ಣ ರೈತರನ್ನು ಕೇಳುವವರೇ ಇರಲ್ಲ ಎಂದು ಹೇಳಿದರು.
7-8ವರ್ಷದ ಹಿಂದೆ ರೈತರು ಯೂರಿಯಕ್ಕಾಗಿ ಕಾದು ಕುಳಿತಿರುತ್ತಿದ್ದರು. ಆಗ ಅವರಿಗೆ ಪೊಲೀಸರ ಲಾಠಿ ಏಟು ಬಿಟ್ಟು ಬೇರೆನೂ ಸಿಗುತ್ತಿರಲಿಲ್ಲವಾಗಿತ್ತು. ಈಗ ದೇಶದಲ್ಲಿ ಯೂರಿಯಾ ಕೊರತೆಯ ಸುದ್ದಿಯೇ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ಜಾಮೀನು
Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ
UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್
MUST WATCH
ಹೊಸ ಸೇರ್ಪಡೆ
ಟಿಕೆಟ್ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್
MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್
INDvsNZ: ಟೆಸ್ಟ್ ಕ್ರಿಕೆಟ್ ನಲ್ಲಿ 9000 ರನ್ ಪೂರೈಸಿದ ವಿರಾಟ್ ಕೊಹ್ಲಿ
ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ಜಾಮೀನು
INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.