Chennai: ಧಾರಾಕಾರ ಮಳೆಗೆ ತಮಿಳುನಾಡು ಹೈರಾಣ; 5 ವಿಮಾನ, 4 ರೈಲುಗಳ ಸಂಚಾರ ರದ್ದು
Team Udayavani, Oct 15, 2024, 11:05 PM IST
ಚೆನ್ನೈ: ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜಧಾನಿ ಚೆನ್ನೈ, ತಿರುವಳ್ಳೂರು, ಕಂಚೀಪುರಂ, ಚೆಂಗಲಪಟ್ಟು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೂ ಅಡತಡೆ ಉಂಟಾಗಿದೆ.
ಪ್ರತಿಕೂಲ ಹವಾಮಾನದಿಂದಾಗಿ 5 ವಿಮಾನಗಳ ಸಂಚಾರ ರದ್ದುಗೊಳಿಸಲಾಗಿದ್ದು, ವ್ಯಾಸರಪಾಡಿ ರೈಲು ನಿಲ್ದಾಣ ಜಲಾವೃತಗೊಂಡ ಹಿನ್ನೆಲೆಯಲ್ಲಿ ಚೆನ್ನೈ- ಮೈಸೂರು ಕಾವೇರಿ ಎಕ್ಸ್ಪ್ರೆಸ್ ಸೇರಿ 4 ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಇನ್ನೂ ಎರಡು ದಿನ ಮಳೆಯ ಆರ್ಭಟ ಹೀಗೇ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಅಲ್ಲದೇ ಅವಶ್ಯ ಸೇವೆಗಳನ್ನು ಹೊರತು ಪಡಿಸಿ ಮಿಕ್ಕೆಲ್ಲ ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಐಟಿ ಉದ್ಯೋಗಿಗಳಿಗೆ 18ರವರೆಗೆ ವರ್ಕ್ ಫ್ರಂ ಹೋಂ ನೀಡುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆದೇಶಿಸಿದ್ದಾರೆ. ಏತನ್ಮಧ್ಯೆ, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala By Poll: ವಯನಾಡ್ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಎಐಸಿಸಿ
Waqf issue: ಸ್ಪೀಕರ್ಗೆ ವಿಪಕ್ಷ ನಾಯಕರಿಂದ ಪತ್ರ
Delhi Govt: ಮಾಲಿನ್ಯ ತಡೆಗೆ ಹೆಜ್ಜೆಯಿಟ್ಟ ದಿಲ್ಲಿ ಸರ್ಕಾರ: 99 ತಂಡ ಸಿದ್ಧ
Congress: ಈ ಬಾರಿ ಇವಿಎಂ ಬೇಡ, ಮತಪತ್ರವೇ ಇರಲಿ: ಇಸಿಗೆ ಕಾಂಗ್ರೆಸ್ ಮನವಿ?
Sabarimala Temple: ಆನ್ಲೈನ್ ನೋಂದಣಿ ಇಲ್ಲದಿದ್ದರೂ ಅಯ್ಯಪ್ಪನ ದರ್ಶನಕ್ಕೆ ಅವಕಾಶ
MUST WATCH
ಹೊಸ ಸೇರ್ಪಡೆ
Sulya: ಶಂಕಿತ ಇಲಿ ಜ್ವರ: ಯುವಕ ಸಾವು
Mangaluru: ನ.10ರಂದು ಸಾಧಕರಿಗೆ ಗೌರವ ಪ್ರಶಸ್ತಿ, ಪುಸ್ತಕ ಪುರಸ್ಕಾರ ಪ್ರದಾನ
Sulya: ಯೋಗ ಸ್ಪರ್ಧೆ: ಸುಳ್ಯ ಸೈಂಟ್ ಜೋಸೆಫ್ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ
Udupi: ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬ: ಕುಂದಾಪುರದಲ್ಲಿ ಅ.17ಕ್ಕೆ ರಕ್ತದಾನ ಶಿಬಿರ
Kota: ಅಚ್ಲಾಡಿ ಶ್ರೀಸಿದ್ಧಿವಿನಾಯಕ ದೇವಸ್ಥಾನ: ನಾಳೆ ನವೀಕೃತ ತೀರ್ಥ ಪುಷ್ಕರಣಿ ಲೋಕಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.