Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹಲವರಿಗೆ ಗಾಯ


Team Udayavani, Oct 12, 2024, 8:36 AM IST

1-tamilnadu

ಚೆನ್ನೈ: ಸಮೀಪದ ತಮಿಳುನಾಡಿನ ಕವರೈಪೆಟ್ಟೈ ರೈಲು ನಿಲ್ದಾಣದಲ್ಲಿ ಅ.11ರ ಶುಕ್ರವಾರ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸುಮಾರು 19 ಜನರು ಗಾಯಗೊಂಡಿದ್ದಾರೆ. ಘಟನೆಯ ಪರಿಣಾಮ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 13 ಬೋಗಿಗಳು ಹಳಿ ತಪ್ಪಿವೆ ಎಂದು ವರದಿಯಾಗಿದೆ.

12578 ಮೈಸೂರು-ದರ್ಭಂಗಾ ಬಾಗಮತಿ ಎಕ್ಸ್‌ಪ್ರೆಸ್‌ನಲ್ಲಿದ್ದ ಪ್ರಯಾಣಿಕರನ್ನು ಅ.12ರ ಶನಿವಾರ ಬೆಳಿಗ್ಗೆ ಮತ್ತೊಂದು ವಿಶೇಷ ರೈಲಿಗೆ ವರ್ಗಾಯಿಸಲಾಯಿತು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅವಘಡ ಅ.11ರ ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಸಂಭವಿಸಿದ್ದು, ರೈಲ್ವೇ ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಕವರೈಪೆಟ್ಟೈ ನಿಲ್ದಾಣಕ್ಕೆ ಪ್ರವೇಶಿಸುವಾಗ ರೈಲು ಹಳಿ ಬದಲಾವಣೆಯಾದ ಕಾರಣ ಎಕ್ಸ್‌ಪ್ರೆಸ್ ರೈಲು ಲೂಪ್ ಲೈನ್‌ಗೆ ಸ್ಥಳಾಂತರಗೊಂಡಿದೆ. ಇದರ ಪರಿಣಾಮ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ರೈಲಿನ ಪಾರ್ಸೆಲ್ ವ್ಯಾನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, 12-13 ಬೋಗಿಗಳು ಹಳಿತಪ್ಪಿವೆ. ಆ ಭಾಗದಲ್ಲಿ ರೈಲು ಸಂಚಾರವನ್ನು ಮುಚ್ಚಲಾಗಿದ್ದು, ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.

ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಮೇಲೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ನಿಗಾ ವಹಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಚೆನ್ನೈನ ಸರ್ಕಾರಿ ಸ್ಟಾನ್ಲಿ ವೈದ್ಯಕೀಯ ಕಾಲೇಜಿನಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಭೇಟಿ ಮಾಡಿದರು. ಸಚಿವ ಅವದಿ ನೇಸರ್ ಹಾಗೂ ಉನ್ನತ ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮೈಸೂರು-ದರ್ಭಂಗಾ ಬಾಗಮತಿ ಎಕ್ಸ್‌ಪ್ರೆಸ್‌ನಲ್ಲಿದ್ದ ಪ್ರಯಾಣಿಕರು ತಮ್ಮ ಪ್ರಯಾಣ ಮುಂದುವರಿಸಲು ಮತ್ತೊಂದು ವಿಶೇಷ ರೈಲು ಅ.12ರ ಶನಿವಾರ ಮುಂಜಾನೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಿಂದ ಬೆಳಗ್ಗೆ 04.45ರ ಸುಮಾರಿಗೆ ಹೊರಟಿತು. ಪ್ರಯಾಣಿಕರಿಗೆ ಆಹಾರ ಮತ್ತು ನೀರನ್ನು ಒದಗಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು ರಕ್ಷಣ ಕಾರ್ಯ ಭರದಿಂದ ನಡೆಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Sahara Desert: 50 ವರ್ಷಗಳಲ್ಲಿ ಕಂಡು ಕೇಳರಿಯದ ಧಾರಾಕಾರ ಮಳೆ-ಸಹರಾ ಮರುಭೂಮಿಯಲ್ಲಿ ಪ್ರವಾಹ!

Sahara Desert: 50 ವರ್ಷಗಳಲ್ಲಿ ಕಂಡು ಕೇಳರಿಯದ ಧಾರಾಕಾರ ಮಳೆ-ಸಹರಾ ಮರುಭೂಮಿಯಲ್ಲಿ ಪ್ರವಾಹ!

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Malpe: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶ

Malpe: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶ

6-mysore-story

Mysore Dasara: ನಮ್ಮ ಒಡೆಯರ್‌ ಊರು…

IPL 2025: Will Pant leave Delhi Capitals?; Rishabh’s tweet sparked curiosity

IPL 2025: ಡೆಲ್ಲಿ ಕ್ಯಾಪಿಟಲ್ಸ್‌ ತೊರೆಯುತ್ತಾರಾ ಪಂತ್;‌ ಕುತೂಹಲ ಕೆರಳಿಸಿದ ರಿಷಭ್ ಟ್ವೀಟ್‌

Madikeri Dasara 2024: ಮೈಸೂರು – ಮಂಗಳೂರು ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

Madikeri Dasara 2024: ಮೈಸೂರು – ಮಂಗಳೂರು ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

Gadag: ಕುಂಭ ಹೊತ್ತು 3 ಕಿ.ಮೀ. ಪಾದಯಾತ್ರೆ ನಡೆಸಿದ ರಂಭಾಪುರಿ ಜಗದ್ಗುರುಗಳು

Gadag: ಕುಂಭ ಹೊತ್ತು 3 ಕಿ.ಮೀ. ಪಾದಯಾತ್ರೆ ನಡೆಸಿದ ರಂಭಾಪುರಿ ಜಗದ್ಗುರುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Punjab: ಪಿಸ್ತೂಲ್‌, ಹೆರಾಯಿನ್ ಸಾಗಿಸುತ್ತಿದ್ದ ಪಾಕ್‌ ಡ್ರೋನ್‌ ಹೊಡೆದುರುಳಿಸಿದ BSF

Punjab: ಪಿಸ್ತೂಲ್‌, ಹೆರಾಯಿನ್ ಸಾಗಿಸುತ್ತಿದ್ದ ಪಾಕ್‌ ಡ್ರೋನ್‌ ಹೊಡೆದುರುಳಿಸಿದ BSF

1-aaatttt

Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ

1-air-india

Emergency; ಟೇಕ್ ಆಫ್ ಆದ ಕೂಡಲೇ ತೊಂದರೆ: ತಪ್ಪಿದ ಭಾರಿ ವಿಮಾನ ಅವಘಡ

1-agni

Agniveer; ಫೈರಿಂಗ್ ತರಬೇತಿ ವೇಳೆ ಪ್ರಾಣ ಕಳೆದುಕೊಂಡ ಇಬ್ಬರು ಅಗ್ನಿವೀರ್ ಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sahara Desert: 50 ವರ್ಷಗಳಲ್ಲಿ ಕಂಡು ಕೇಳರಿಯದ ಧಾರಾಕಾರ ಮಳೆ-ಸಹರಾ ಮರುಭೂಮಿಯಲ್ಲಿ ಪ್ರವಾಹ!

Sahara Desert: 50 ವರ್ಷಗಳಲ್ಲಿ ಕಂಡು ಕೇಳರಿಯದ ಧಾರಾಕಾರ ಮಳೆ-ಸಹರಾ ಮರುಭೂಮಿಯಲ್ಲಿ ಪ್ರವಾಹ!

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Mysuru-Darbhanga Train Mishap: ಪಾಠ ಕಲಿಯದ ಸರಕಾರ… ಕೇಂದ್ರದ ವಿರುದ್ಧ ರಾಹುಲ್ ಕಿಡಿ

Malpe: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶ

Malpe: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶ

6-mysore-story

Mysore Dasara: ನಮ್ಮ ಒಡೆಯರ್‌ ಊರು…

3-

Aland: ಹುಟ್ಟುಹಬ್ಬದ ವೇಳೆ ದ್ವೇಷದ ಕೊಲೆ; ಸಂಭ್ರಮ ದುಃಖದಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.