![Yaakshagana-Artist](https://www.udayavani.com/wp-content/uploads/2024/07/Yaakshagana-Artist-415x249.jpg)
Tamil Nadu: ನೀಟ್ ಪರೀಕ್ಷೆ ಆತಂಕ; ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಆಕಾಂಕ್ಷಿ
Team Udayavani, Oct 31, 2023, 12:55 PM IST
![Tamil Nadu: ನೀಟ್ ಪರೀಕ್ಷೆ ಆತಂಕ; ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಆಕಾಂಕ್ಷಿ](https://www.udayavani.com/wp-content/uploads/2023/10/tdy-7-24-620x372.jpg)
ಸಾಂದರ್ಭಿಕ ಚಿತ್ರ
ಚೆನ್ನೈ: ನೀಟ್ ಆಕಾಂಕ್ಷಿಯೊಬ್ಬಳು ಪರೀಕ್ಷೆ ಆತಂಕದಿಂದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಕಲ್ಲಕ್ರುರಿಚಿಯಲ್ಲಿ ನಡೆದಿದೆ.
ಎರಾವರ ಗ್ರಾಮದ ಭೈರವಿ ಮೃತ ವಿದ್ಯಾರ್ಥಿನಿ. ಭೈರವಿ ಇತ್ತೀಚೆಗೆ ಅತ್ತೂರಿನಲ್ಲಿ ನೀಟ್ ಕೋಚಿಂಗ್ ಸೆಂಟರ್ಗೆ ದಾಖಲಾಗಿದ್ದಳು.
ಕೋಚಿಂಗ್ ಸೆಂಟರ್ ಸೇರಿದ ಬಳಿಕ ತನಗೆ ನೀಟ್ ತಯಾರಿಯ ಅಧ್ಯಯನ ನಡೆಸಲು ಕಷ್ಟವಾಗುತ್ತದೆ ಎಂದು ಭೈರವಿ ಕೆಲ ದಿನಗಳ ಹಿಂದಷ್ಟೇ ತಂದೆ – ತಾಯಿಯ ಬಳಿ ಹೇಳಿಕೊಂಡಿದ್ದಳು. ಆದರೆ ತಂದೆ – ತಾಯಿ ಮಗಳ ಮಾತನ್ನು ಕೇಳಿ ಆಕೆಗೆ ಧೈರ್ಯ ತುಂಬಿ ನೀಟ್ ತಯಾರಿಯಲ್ಲಿ ಮುಂದುವರೆಯುವಂತೆ ಮಾಡಿದ್ದರು. ಆ ಬಳಿಕವೂ ಭೈರವಿಗೆ ನೀಟ್ ತಯಾರಿ ಕಷ್ಟವಾಗಿದ್ದು, ಈ ಕಾರಣದಿಂದ ಪರೀಕ್ಷೆಯ ಆತಂಕದಿಂದ ಕ್ರಿಮಿನಾಶಕವನ್ನು ಸೇವಿಸಿದ್ದಾಳೆ.
ಕಳೆದ ಮೂರು ದಿನಗಳ ಹಿಂದೆ ಭೈರವಿ ಕ್ರಿಮಿನಾಶಕ ಸೇವಿಸಿದ್ದಾಳೆ. ಆದರೆ ಆ ವಿಚಾರವನ್ನು ಯಾರಿಗೂ ಹೇಳದೆ ಹಾಗೆಯೇ ಇದ್ದಳು. ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದ ಆಕೆಯನ್ನು ಸಂಬಂಧಿಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಕೆಯನ್ನು ಮೊದಲು ಕಲ್ಲಕುರಿಚಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಸೇಲಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ(ಅ.30 ರಂದು) ಭೈರವಿ ಮೃತಪಟ್ಟಿದ್ದಾಳೆ.
ಭೈರವಿ ಕಳೆದ ವರ್ಷ ನೀಟ್ ತೇರ್ಗಡೆಯಾಗದೇ ಮನನೊಂದಿದ್ದಳು. ಅವಳು ಎಂಬಿಬಿಎಸ್ ಓದಲು ಬಯಸಿದ್ದಳು. ಕೋಚಿಂಗ್ಗೆ ಹೋದರೂ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯವಾಗಲಿಲ್ಲ. ನಂತರ ಅತ್ತೂರಿನಲ್ಲಿರುವ ನೀಟ್ ಕೋಚಿಂಗ್ ಸೆಂಟರ್ಗೆ ಸೇರಿಕೊಂಡಳು. ತನಗೆ ಅರ್ಥವಾಗುತ್ತಿಲ್ಲ ಮತ್ತು ಕಡಿಮೆ ಸ್ಕೋರ್ ಮಾಡಬಹುದೆಂಬ ಭಯದಲ್ಲಿ ಅವಳ ಈ ರೀತಿ ಮಾಡಿಕೊಂಡಿದ್ದಾಳೆಂದು ಸಹೋದರ ಅರವಿಂದನ್ ಹೇಳಿದ್ದಾರೆ.
ಸದ್ಯ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
![Yaakshagana-Artist](https://www.udayavani.com/wp-content/uploads/2024/07/Yaakshagana-Artist-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!](https://www.udayavani.com/wp-content/uploads/2024/07/BJP-2-150x81.jpg)
Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!
![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-150x91.jpg)
ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!
![9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ](https://www.udayavani.com/wp-content/uploads/2024/07/PAWAN-KALYAN-1-150x100.jpg)
9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ
![Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ](https://www.udayavani.com/wp-content/uploads/2024/07/RAHUL-5-150x104.jpg)
Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ
![1-agni](https://www.udayavani.com/wp-content/uploads/2024/07/1-agni-150x87.jpg)
Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ
MUST WATCH
ಹೊಸ ಸೇರ್ಪಡೆ
![Yaakshagana-Artist](https://www.udayavani.com/wp-content/uploads/2024/07/Yaakshagana-Artist-150x90.jpg)
Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ
![Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!](https://www.udayavani.com/wp-content/uploads/2024/07/BJP-2-150x81.jpg)
Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!
![MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು](https://www.udayavani.com/wp-content/uploads/2024/07/vishwanarh-150x83.jpg)
MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು
![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-150x91.jpg)
ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!
![9-crime](https://www.udayavani.com/wp-content/uploads/2024/07/9-crime-150x90.jpg)
Bengaluru: ಬೈಕ್ಗೆ ಲಾರಿ ಡಿಕ್ಕಿ : ರಿಯಲ್ ಎಸ್ಟೇಟ್ ಏಜೆಂಟ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.