ಅಮೆರಿಕದ ಪ್ರವಾಸಿಗರೆದುರು ಟ್ಯಾಕ್ಸಿ ಚಾಲಕರ ಜಗಳ : ಕ್ಷಮೆಯಾಚಿಸಿದ ಗೋವಾ ಶಾಸಕ
Team Udayavani, Dec 16, 2022, 10:37 PM IST
ಪಣಜಿ: ಪ್ರವಾಸಿಗರ ಕ್ರೂಸ್ ಹಡಗು (ಡಿಸೆಂಬರ್ 15 ರಂದು ) ಮುರಗಾಂವ್ ಬಂದರಿಗೆ ಆಗಮಿಸಿತ್ತು, ಈ ವೇಳೆ ಅಮೆರಿಕದ ಪ್ರವಾಸಿಗರನ್ನು ಬಂದರಿನಿಂದ ನಗರಕ್ಕೆ ಕರೆದೊಯ್ಯಲು ಟ್ಯಾಕ್ಸಿ ಚಾಲಕರ ನಡುವೆ ಜಗಳವಾಗಿದೆ. ವಿವಾದದಲ್ಲಿ ಅಮೆರಿಕದ ಪ್ರವಾಸಿಗರು ಮಾನಸಿಕ ಯಾತನೆ ಅನುಭವಿಸಿದ್ದಾರೆ ಎಂದು ವಿದೇಶಿ ಪ್ರವಾಸಿಗರು ರಾಯಭಾರ ಕಚೇರಿಗೆ ದೂರು ನೀಡಿದ್ದರಿಂದ ಪ್ರಕರಣ ತಿರುವು ಪಡೆದುಕೊಂಡಿದ್ದು, ಈ ಕುರಿತು ವಾಸ್ಕೊ ಮುರಗಾಂವ್ ಶಾಸಕ ಸಂಕಲ್ಪ್ ಅಮೋಣಕರ್ ಪ್ರವಾಸಿಗರ ಬಳಿ ಕ್ಷಮೆಯಾಚಿಸಿದ್ದಾರೆ.
ವಾಸ್ಕೊ ಮುರಗಾಂವ್ ಶಾಸಕ ಸಂಕಲ್ಪ್ ಅಮೋಣಕರ್ ಇಂದು ಸುದ್ದಿಗೋಷ್ಠಿ ನಡೆಸಿದರು. ಮುಗಾರ್ಂವ್ ಬಂದರು ಪ್ರದೇಶದ ಕ್ರೂಸ್ ಟರ್ಮಿನಲ್ನಲ್ಲಿ ಟ್ಯಾಕ್ಸಿ ಚಾಲಕರು ಮತ್ತು ಪ್ರವಾಸಿಗರ ನಡುವಿನ ದುರದೃಷ್ಟಕರ ಘರ್ಷಣೆಗಾಗಿ ವಿದೇಶಿ ಪ್ರವಾಸಿಗರಲ್ಲಿ ಶಾಸಕ ಅಮೋಣಕರ್ ಕ್ಷಮೆಯಾಚಿಸಿದರು. ಈ ಘಟನೆಯ ಹೊಣೆಯನ್ನು ಶಾಸಕ ಅಮೋಣಕರ್ ವಹಿಸಿಕೊಂಡಿದ್ದು, ಮುಂದೆ ಇಂತಹ ಘಟನೆಗಳು ಮರುಕಳಿಸುವುದಿಲ್ಲ ಎಂದು ಭರವಸೆ ನೀಡಿದರು. ಹೀಗಾಗಿ ಈ ವಿವಾದಕ್ಕೆ ತೆರೆ ಬೀಳುವ ಸಾಧ್ಯತೆ ಇದೆ.
ಗೋವಾದಲ್ಲಿ ಇಂತಹ ಗೂಂಡಾಗಿರಿ ಸಹಿಸುವುದಿಲ್ಲ : ಮುಖ್ಯಮಂತ್ರಿ
ಪ್ರವಾಸಿಗರ ಕಡೆಗೆ ಸ್ಥಳೀಯ ಟ್ಯಾಕ್ಸಿ ಚಾಲಕರ ವರ್ತನೆಯು ಅನುಚಿತವಾಗಿದ್ದು, ಇಂತಹ ವರ್ತನೆಯನ್ನು ಸಹಿಸಲಾಗುವುದಿಲ್ಲ. ಈ ಟ್ಯಾಕ್ಸಿ ಚಾಲಕರು ಬಸ್ ಚಾಲಕನನ್ನು ಥಳಿಸಿದರೆ, ಅವರನ್ನು ಬಂಧಿಸಲಾಗುತ್ತದೆ. ಅಲ್ಲದೆ, ಗೋವಾದಲ್ಲಿ ಇಂತಹ ಗೂಂಡಾಗಿರಿಯನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪಣಜಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.