![1-sdsa-dasd](https://www.udayavani.com/wp-content/uploads/2024/07/1-sdsa-dasd-1-415x239.jpg)
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
Team Udayavani, Apr 23, 2024, 6:24 PM IST
![Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ](https://www.udayavani.com/wp-content/uploads/2024/04/bridge-1-620x413.jpg)
ಹೈದರಾಬಾದ್: ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಮನೈರ್ ನದಿಗೆ ನಿರ್ಮಿಸಲಾಗುತ್ತಿದ್ದ ಸೇತುವೆಯೊಂದು ಸೋಮವಾರ ತಡರಾತ್ರಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ರಾತ್ರಿಯ ವೇಳೆ ನಡೆದ ಅವಘಡದಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಈ ಸೇತುವೆಯು ಪೆದ್ದಪಲ್ಲಿ ಜಿಲ್ಲೆಯ ಒಡೆಡುವನ್ನು ಜಯಶಂಕರ್ ಭೂಲಪಲ್ಲಿ ಜಿಲ್ಲೆಯ ಗರ್ಮಿಲಪಲ್ಲಿಗೆ ಸಂಪರ್ಕಿಸಲು ಉದ್ದೇಶಿಸಲಾಗಿತ್ತು ಮತ್ತು 2016 ರಿಂದ ನಿರ್ಮಾಣಕಾರ್ಯ ನಡೆಯುತ್ತಿತ್ತು. ಆದರೆ, ಗುತ್ತಿಗೆದಾರರ ಬದಲಾವಣೆ ಹಾಗೂ ಅಸಮರ್ಪಕ ಅನುದಾನದಿಂದ ನಿರ್ಮಾಣ ಪ್ರಕ್ರಿಯೆ ವಿಳಂಬವಾಗಿದೆ ಎಂದು ಹೇಳಲಾಗಿದೆ.
ಸೋಮವಾರ ರಾತ್ರಿ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಸೇತುವೆ ಕುಸಿದು ಬಿದ್ದಿದೆ ಎಂದು ಹೇಳಲಾಗುತ್ತಿದೆ.
2016ರಲ್ಲಿ ಆರಂಭಗೊಂಡರೂ ಸೇತುವೆ ಕಾಮಗಾರಿಯನ್ನು ಪದೇ ಪದೇ ಮುಂದೂಡುತ್ತಿರುವುದರಿಂದ ಸ್ಥಳೀಯರು ನಿರಾಸೆ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯೋಜನೆಯ ಅಂದಾಜು ವೆಚ್ಚ ಆರಂಭದಲ್ಲಿ 46 ಕೋಟಿ ರೂ. ಎಂದು ಹೇಳಲಾಗುತ್ತಿತ್ತು ಆದರೆ ಸೇತುವೆ ನಿರ್ಮಾಣ ಕಾರ್ಯ ಆರಂಭವಾಗಿ ಎಂಟು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳದಿರುವ ಬಗ್ಗೆ ಸ್ಥಳೀಯರು ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅದೂ ಅಲ್ಲದೆ ಸೇತುವೆ ಕಾಮಗಾರಿ ನಿರ್ಮಾಣಗೊಳ್ಳುತ್ತಿರುವಾಗಲೇ ಸೇತುವೆ ಕುಸಿದು ಬಿದ್ದಿರುವುದರ ಹಿಂದೆ ಅವ್ಯವಹಾರ ನಡೆದಿರುವ ಕುರಿತು ಊರಿನ ಜನ ಅನುಮಾನ ವ್ಯಕ್ತಪಡಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಬಲವಾದ ನಿಯಮಗಳು ಮತ್ತು ಮೇಲ್ವಿಚಾರಣೆಯ ತುರ್ತು ಅಗತ್ಯವನ್ನು ಇದು ಒತ್ತಿಹೇಳುತ್ತದೆ.
ಇದನ್ನೂ ಓದಿ: Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
ಟಾಪ್ ನ್ಯೂಸ್
![1-sdsa-dasd](https://www.udayavani.com/wp-content/uploads/2024/07/1-sdsa-dasd-1-415x239.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sudhamurthy](https://www.udayavani.com/wp-content/uploads/2024/07/Sudhamurthy-1-150x90.jpg)
Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
![pune](https://www.udayavani.com/wp-content/uploads/2024/07/pune-150x83.jpg)
Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ
![ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ](https://www.udayavani.com/wp-content/uploads/2024/07/snake-1-150x91.jpg)
Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.