![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 9, 2019, 5:29 PM IST
ತೆಲಂಗಾಣ/ಹೈದರಾಬಾದ್: ತೆಲಂಗಾಣ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪೊಲೀಸ್ ಎನ್ ಕೌಂಟರ್ ಗೆ ಬಲಿಯಾಗಿದ್ದ ನಾಲ್ವರು ಆರೋಪಿಗಳ ಶವಗಳನ್ನು ಡಿಸೆಂಬರ್ 13ರವರೆಗೂ ರಕ್ಷಿಸಿ ಇಡುವಂತೆ ತೆಲಂಗಾಣ ಹೈಕೋರ್ಟ್ ಸೋಮವಾರ ಆದೇಶ ನೀಡಿದ್ದು, ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿದೆ.
ದಿಶಾ ಅತ್ಯಾಚಾರ, ಕೊಲೆ ನಡೆದ ಸ್ಥಳದ ಮಹಜರು ನಡೆಸಲು ನಾಲ್ವರು ಆರೋಪಿಗಳನ್ನು ಕಳೆದ ಶುಕ್ರವಾರ ಮುಂಜಾನೆ ಸೈಬರಾಬಾದ್ ಪೊಲೀಸರು ಕರೆದೊಯ್ದಿದ್ದ ವೇಳೆ ಪರಾರಿಯಾಗಲು ಯತ್ನಿಸಿದ್ದ ವೇಳೆ ಪೊಲೀಸರ ಎನ್ ಕೌಂಟರ್ ಗೆ ಬಲಿಯಾಗಿದ್ದರು. ಆರೋಪಿಗಳು ತಮ್ಮ ರಿವಾಲ್ವರ್ ಅನ್ನು ಕಸಿದುಕೊಂಡು, ಗುಂಡಿನ ದಾಳಿ ನಡೆಸಿರುವುದಾಗಿ ಪೊಲೀಸರು ಆರೋಪಿಸಿದ್ದರು. ತಮ್ಮ ಪ್ರಾಣರಕ್ಷಣೆಗಾಗಿ ನಡೆಸಿದ ಪ್ರತಿದಾಳಿಗೆ ನಾಲ್ವರು ಬಲಿಯಾಗಿದ್ದರೆಂದು ಪೊಲೀಸ್ ವರಿಷ್ಠಾಧಿಕಾರಿ ಸಜ್ಜನರ್ ತಿಳಿಸಿದ್ದರು.
ದಿಶಾ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಕಳೆದ ವಾರ ಪೊಲೀಸರು ಎನ್ ಕೌಂಟರ್ ನಲ್ಲಿ ನಾಲ್ವರು ಆರೋಪಿಗಳನ್ನು ಹತ್ಯೆಗೈದ ಪ್ರಕರಣದ ತನಿಖೆ ನಡೆಸಲು ತೆಲಂಗಾಣ ಸರ್ಕಾರ ವಿಶೇಷ ತನಿಖಾ ತಂಡ(ಎಸ್ ಐಟಿ)ವನ್ನು ರಚಿಸಿದ್ದು, ಈ ಬಗ್ಗೆ ಭಾನುವಾರ ಆದೇಶ ಹೊರಡಿಸಿದೆ.
ನಾಲ್ವರು ಆರೋಪಿಗಳನ್ನು ಹತ್ಯೆಗೈಯಲು ಕಾರಣ ಮತ್ತು ಸನ್ನಿವೇಶದ ಬಗ್ಗೆ ದೃಢಪಡಿಸಬೇಕು. ಅಲ್ಲದೇ ಸತ್ಯವನ್ನು ಬಹಿರಂಗಗೊಳಸಲು ತನಿಖೆಗೆ ಬೇಕಾದ ಕಾರಣದ ಬಗ್ಗೆ ತಿಳಿಯಲು ಎಸ್ ಐಟಿಯನ್ನು ರಚಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿತ್ತು.
ರಾಚಕೊಂಡಾ ಪೊಲೀಸ್ ಕಮಿಷನರ್ ಮಹೇಶ್ ಎಂ ಭಾಗ್ವತ್ ನೇತೃತ್ವದ ಎಂಟು ಮಂದಿ ಸದಸ್ಯರನ್ನೊಳಗೊಂಡ ಎಸ್ಐಟಿಯನ್ನು ರಚಿಸಲಾಗಿದೆ. ಅಲ್ಲದೇ ಸುಪ್ರೀಂಕೋರ್ಟ್ ನಿಯಮಾನುಸಾರ ಪ್ರಕರಣಕ್ಕೆ ಸಂಬಂಧಸಿದಂತೆ ತನಿಖೆ ನಡೆಸಬೇಕು ಎಂದು ತಿಳಿಸಿದೆ.
ಎಸ್ ಐಟಿ ತನಿಖೆಯನ್ನು ಪೂರ್ಣಗೊಳಿಸಿ, ವರದಿಯನ್ನು ಸಂಬಂಧಿದ ಕೋರ್ಟ್ ಗೆ ಸಲ್ಲಿಸಬೇಕು. ಹೈದರಾಬಾದ್ ಎನ್ ಕೌಂಟರ್ ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಈಗಾಗಲೇ ದೂರು ದಾಖಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.