370 ರದ್ದು ಎಫೆಕ್ಟ್: ಈಗ ಜಮ್ಮು-ಕಾಶ್ಮೀರದಲ್ಲಿ ಉಗ್ರ ಸಂಘಟನೆ, ಉಗ್ರರ ಸ್ಥಿತಿ ಏನಾಗಿದೆ?

ಈ ಮೊದಲು ಜಮ್ಮು-ಕಾಶ್ಮೀರದಲ್ಲಿ 350ರಿಂದ 400 ಮಂದಿ ಉಗ್ರರು ಸಕ್ರಿಯವಾಗಿದ್ದರು.

Team Udayavani, Aug 7, 2020, 12:43 PM IST

370 ರದ್ದು ಎಫೆಕ್ಟ್: ಜಮ್ಮು-ಕಾಶ್ಮೀರದಲ್ಲಿ ಈಗ ಉಗ್ರ ಸಂಘಟನೆ, ಉಗ್ರರ ಸ್ಥಿತಿ ಏನಾಗಿದೆ?

ಶ್ರೀನಗರ್: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿ ಒಂದು ವರ್ಷ ಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ್ ಡೈರೆಕ್ಟರ್ ಜನರಲ್ ಪೊಲೀಸ್ ದಿಲ್ಬಾಗ್ ಸಿಂಗ್ ಅವರು ಉಗ್ರರ ಚಟುವಟಿಕೆ ಬಹಳಷ್ಟು ಕಡಿಮೆಯಾಗಿರುವ ಕುರಿತು ವಿವರ ನೀಡಿದ್ದಾರೆ.

ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಸತತವಾಗಿ ಭಯೋತ್ಪಾದಕರ ವಿರುದ್ಧ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ ಪರಿಣಾಮ ಇಂದು ಜಮ್ಮು-ಕಾಶ್ಮೀರದಲ್ಲಿ ಬಹುತೇಕ ಉಗ್ರರ ಸಂಘಟನೆಗಳು ನಾಯಕನಿಲ್ಲದಂತಾಗಿದೆ ಎಂದು ತಿಳಿಸಿದ್ದಾರೆ.

ಈ ಮೊದಲು ಜಮ್ಮು-ಕಾಶ್ಮೀರದಲ್ಲಿ 350ರಿಂದ 400 ಮಂದಿ ಉಗ್ರರು ಸಕ್ರಿಯವಾಗಿದ್ದರು. ಆದರೆ ಇಂದು 200 ಮಂದಿ ಉಗ್ರರು ಇದ್ದಿರುವುದಾಗಿ ಹೇಳಿದರು. ಆದರೆ ಬಹುತೇಕ ಎಲ್ಲಾ ಉಗ್ರ ಸಂಘಟನೆಗಳಲ್ಲಿ ಈಗ ಮುಖಂಡನೇ ಇಲ್ಲದಂತಾಗಿದೆ. ಉಗ್ರರ ಸಂಘಟನೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದ ಹಾಗೂ ಪ್ರಮುಖ ಉಗ್ರ ಮುಖಂಡರನ್ನು ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಲಾಗಿದೆ ಎಂದರು.

2019ರ ಜುಲೈ ತಿಂಗಳವರೆಗೆ 131 ಉಗ್ರರನ್ನು ಹತ್ಯೆಗೈಯಲಾಗಿತ್ತು. ಆದರೆ ಜುಲೈನಿಂದ ಡಿಸೆಂಬರ್ ವರೆಗೆ ಕೇವಲ 29 ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಕಾನೂನು ಸುವ್ಯವಸ್ಥೆಯನ್ನು ಬಿಗಿಗೊಳಿಸಿದ್ದರ ಪರಿಣಾಮ ಸೇನಾ ಕಾರ್ಯಾಚರಣೆ ಕೂಡಾ ಕಡಿಮೆಯಾಗಿತ್ತು. 2019ರಲ್ಲಿ ಸೇನೆ ನಡೆಸಿದ 67 ಯಶಸ್ವಿ ಕಾರ್ಯಾಚರಣೆಯಲ್ಲಿ 160 ಉಗ್ರರು ಬಲಿಯಾಗಿದ್ದರು ಎಂದು ಸಿಂಗ್ ವಿವರಿಸಿದರು.

2020ರಲ್ಲಿ ಈವರೆಗೆ 150 ಉಗ್ರರು ಸೇನೆಯ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ್ದಾರೆ. ಇದರಲ್ಲಿ 30 ವಿದೇಶಿ ಹಾಗೂ 120 ಸ್ಥಳೀಯ ಉಗ್ರರು ಹಾಗೂ ಎಲ್ಲಾ ಪ್ರಮುಖ ಉಗ್ರಗಾಮಿ ಸಂಘಟನೆಯ 39 ಉನ್ನತ ಕಮಾಂಡರ್ಸ್ ಗಳು ಸೇರಿರುವುದಾಗಿ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಬಹುತೇಕ ಉಗ್ರಗಾಮಿ ಸಂಘಟನೆಗಳು ತೀವ್ರವಾಗಿ ಶಸ್ತ್ರಾಸ್ತ್ರ ಸಮಸ್ಯೆ ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಶಸ್ತ್ರಾಸ್ತ್ರ ಮತ್ತು ಸ್ಫೋಟಕ ಸರಬರಾಜು ಮಾಡಲು ಹೊಸ ಉಪಾಯ ಹುಡುಕಿಕೊಂಡಿದೆ. ಡ್ರೋಣ್ ಮೂಲಕ ಶಸ್ತ್ರಾಸ್ತ್ರ ಸರಬರಾಜು ಮಾಡುವ ತಂತ್ರಕ್ಕೆ ಮೊರೆ ಹೋಗಿದೆ. ಆದರೆ ಭಾರತೀಯ ಸೇನಾ ಪಡೆ ಇಂತಹ ಹಲವು ಪ್ರಯತ್ನವನ್ನು ವಿಫಲಗೊಳಿಸಿರುವುದಾಗಿ ವರದಿ ತಿಳಿಸಿದೆ.

2013ಕ್ಕೆ ಹೋಲಿಸಿದಲ್ಲಿ 2018 ಕಾರ್ಯಾಚರಣೆಯ ಮಹತ್ವದ ವರ್ಷವಾಗಿದೆ ಎಂದು ಕರೆದಿರುವ ಡಿಜಿಪಿ, ಈ ಮೊದಲಿಗಿಂತಲೂ ಈಗ ಭದ್ರತಾ ವ್ಯವಸ್ಥೆ ಹಚ್ಚಾಗಿದೆ ಎಂದರು. 2013ರಿಂದ ಹೆಚ್ಚಿನ ಸಂಖ್ಯೆಯ ಯುವಕರು ಉಗ್ರ ಸಂಘಟನೆಗೆ ಸೇರಿಕೊಂಡಿದ್ದರು. 2017ರವರೆಗೂ ಉಗ್ರರ ನೇಮಕಾತಿ ನಡೆಯುತ್ತಿತ್ತು. ಉಗ್ರ ಸಂಘಟನೆಯ ಪೋಸ್ಟರ್ ಬಾಯ್ ಗಳಾದ ಮನಾನ್ ವಾನಿ, ಬುಹ್ರಾನ್ ವಾನಿ ಹಾಗೂ ರಿಯಾಜ್ ನೈಕೂ ತುಂಬಾ ಜನಪ್ರಿಯತೆ ಗಳಿಸಿದ್ದು, ಯುವಕರು ಈ ಉಗ್ರರ ಪೋಸ್ಟರ್ ಅನ್ನು ಉಪಯೋಗಿಸುತ್ತಿದ್ದರು.

ಇಂತಹ ಯುವ ಉಗ್ರ ಸಂಘಟನೆಯ ವಿರುದ್ಧ 2017 ಮತ್ತು 2018ರಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದೇವು.  2018ರಲ್ಲಿ ಗವರ್ನರ್ ಆಡಳಿತ ಬಂದ ಮೇಲೆ ಲ್ಯಾಂಡ್ ಮಾರ್ಕ್ ಕಾರ್ಯಾಚರಣೆ ನಡೆಸಿದ್ದೇವು. ಕಾನೂನು ಸುವ್ಯವಸ್ಥೆಗಾಗಿ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಉಗ್ರರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿರುವುದಾಗಿ ತಿಳಿಸಿದರು.

2018ರಲ್ಲಿ 93 ಯಶಸ್ವಿ ಕಾರ್ಯಾಚರಣೆ ನಡೆಸಲಾಗಿತ್ತು. ಅದೇ ರೀತಿ 2019ರಲ್ಲಿಯೂ ಯಶಸ್ವಿ ಶೋಧ ಮತ್ತು ಕಾರ್ಯಾಚರಣೆ ಮೂಲಕ ಉಗ್ರರನ್ನು ಹೊಡೆದುರುಳಿಸಲಾಗಿತ್ತು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.